• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇವಾಲಯಗಳ 1 ಟನ್ ಚಿನ್ನ ಕರಗಿಸಿ ಬ್ಯಾಂಕಿನಲ್ಲಿಟ್ಟ ತಮಿಳುನಾಡು ಸರಕಾರ!

Tulunadu News Posted On April 17, 2025
0


0
Shares
  • Share On Facebook
  • Tweet It

ಭಕ್ತರು ದೇವಾಲಯಗಳಿಗೆ ಕಾಣಿಕೆಯಾಗಿ ನೀಡಿದ ಒಂದು ಸಾವಿರ ಕೆಜಿಗೂ ಅಧಿಕ ಚಿನ್ನವನ್ನು ಕರಗಿಸಿ 24 ಕ್ಯಾರೆಟ್ ಬಿಸ್ಕತ್ತುಗಳನ್ನಾಗಿ ಪರಿವರ್ತಿಸಲಾಗಿದೆ ಎಂದು ತಮಿಳುನಾಡು ಸರಕಾರದ ಮುಜರಾಯಿ ಇಲಾಖೆ ತಿಳಿಸಿದೆ.

ಹೀಗೆ ಬಿಸ್ಕತ್ ಗಳನ್ನಾಗಿ ಪರಿವರ್ತಿಸಲಾದ 1 ಟನ್ ಗೂ ಅಧಿಕ ಚಿನ್ನವನ್ನು ಬ್ಯಾಂಕುಗಳಲ್ಲಿ ಠೇವಣಿಯಾಗಿ ಹೂಡಿಕೆ ಮಾಡಲಾಗಿದೆ ಎಂದು ಇಲಾಖೆ ತಿಳಿಸಿದೆ. ಚಿನ್ನದ ಠೇವಣಿಯಿಂದ ಬ್ಯಾಂಕುಗಳಿಂದ ವಾರ್ಷಿಕವಾಗಿ 17.82 ಕೋಟಿ ಬಡ್ಡಿ ಬರುತ್ತದೆ. ಈ ಬಡ್ಡಿಹಣವನ್ನು ಸಂಬಂಧಿತ ದೇವಾಲಯಗಳ ಅಭಿವೃದ್ಧಿಗೆ ಬಳಸಲಾಗುತ್ತದೆ. ಕಳೆದ ಮಾರ್ಚ್ 31 ರಂದು ಎಲ್ಲಾ ಚಿನ್ನವನ್ನು ( 10,74,123,488 ಗ್ರಾಂಗಳು) ಠೇವಣಿ ಇಡಲಾಗಿದೆ ಎಂದು ತಮಿಳುನಾಡು ಮುಜರಾಯಿ ಸಚಿವ ಪಿ.ಕೆ.ಶೇಖರ್ ಬಾಬು ತಿಳಿಸಿದ್ದಾರೆ.

ತಮಿಳುನಾಡಿನ 21 ಹಿಂದೂ ದೇವಾಲಯಗಳಿಗೆ ಸೇರಿದ ಚಿನ್ನ ಇದಾಗಿದ್ದು, ಅದರಲ್ಲಿ ತಿರುಚಿರಾಪಳ್ಳಿ ಜಿಲ್ಲೆಯ ಸಮಯಾಪುರಂನ ಅರಳ್ಮಿಗು ಮಾರಿಯಮ್ಮನ್ ದೇವಾಲಯದ ಚಿನ್ನವೇ ಜಾಸ್ತಿ ಇದೆ. 426.26 ಕೆ.ಜಿ ಚಿನ್ನವನ್ನು ಆ ದೇವಾಲಯದವರು ನೀಡಿದ್ದಾರೆ ಎಂದು ವಿವರಿಸಿದ್ದಾರೆ.

ಭಕ್ತರು ದೇವಸ್ಥಾನಗಳಿಗೆ ಆಭರಣ ಅಥವಾ ಮತ್ತೊಂದು ರೂಪದಲ್ಲಿ ನೀಡಲಾದ ಆದರೆ, ಅವುಗಳನ್ನು ದೇವರು/ದೇವತೆಗಳಿಗೆ ಬಳಸದೇ ತೆಗೆದು ಇಟ್ಟಿದ್ದ ಚಿನ್ನವನ್ನು ಮಾತ್ರ ಈ ಕಾರ್ಯಕ್ಕೆ ಬಳಸಿಕೊಳ್ಳಲಾಗಿದೆ ಎಂದು ಶೇಖರ್ ಬಾಬು ತಿಳಿಸಿದ್ದಾರೆ.

21 ಹಿಂದೂ ದೇವಾಲಯಗಳಿಂದ ಪಡೆಯಲಾದ ಚಿನ್ನವನ್ನು ಮುಂಬೈ ಸರಕಾರಿ ಟಂಕಸಾಲೆಯಲ್ಲಿ ಕರಗಿಸಿ ಚಿನ್ನದ ಬಿಸ್ಕತ್ತುಗಳನ್ನಾಗಿ ಪರಿವರ್ತಿಸಲಾಗಿದೆ ಎಂದು ಅವರು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
Tulunadu News August 13, 2025
ಮುಂದಿನ ಚುನಾವಣೆಯಲ್ಲಿಯೂ ನನ್ನ ಕೈ ಹಿಡಿಯಿರಿ: ವರುಣಾದಲ್ಲಿ ಸಿಎಂ ಮನವಿ!
Tulunadu News August 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
    • ಮುಂದಿನ ಚುನಾವಣೆಯಲ್ಲಿಯೂ ನನ್ನ ಕೈ ಹಿಡಿಯಿರಿ: ವರುಣಾದಲ್ಲಿ ಸಿಎಂ ಮನವಿ!
    • ಮಂಗಳೂರು: ಈಜುತ್ತಿರುವಾಗಲೇ ಹೃದಯಾಘಾತ: ಮೃತಪಟ್ಟ ಕೋಚ್!
    • ಅಗಸ್ಟ್ 16 ರಂದು ಧರ್ಮಸ್ಥಳ ಚಲೋ ಅಭಿಯಾನ - ಶಾಸಕ ವಿಶ್ವನಾಥ!
    • ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ:- ಶಾಸಕ ಕಾಮತ್
    • ಎದೆಹಾಲು ದಾನದಲ್ಲಿ ದಾಖಲೆ ಬರೆದ ತಮಿಳುನಾಡಿನ ಮಹಿಳೆ!
    • ಭಾರತದಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿದ ಕೇಂದ್ರ ಗೃಹ ಸಚಿವರಾಗಿ ಅಮಿತ್ ಶಾ ದಾಖಲೆ!
    • ಮಾಲೆಗಾಂ ಸ್ಫೋಟದಲ್ಲಿ ಯೋಗಿ, ಭಾಗವತ್ ಹೆಸರು ಹೇಳಲು ಒತ್ತಡ ಇತ್ತು ಎಂದ ನಿವೃತ್ತ ಮೇಜರ್!
    • "2 ರೂಪಾಯಿ ಡಾಕ್ಟರ್" ನಿಧನ.. ಜನಸಾಮಾನ್ಯರ ಕಂಬನಿ
    • ಬಂಧೀಖಾನೆ ಮುಖ್ಯಸ್ಥರಾಗಿ ದಯಾನಂದ ಮತ್ತೆ ಸೇವೆಯಲ್ಲಿ!
  • Popular Posts

    • 1
      ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
    • 2
      ಮುಂದಿನ ಚುನಾವಣೆಯಲ್ಲಿಯೂ ನನ್ನ ಕೈ ಹಿಡಿಯಿರಿ: ವರುಣಾದಲ್ಲಿ ಸಿಎಂ ಮನವಿ!
    • 3
      ಮಂಗಳೂರು: ಈಜುತ್ತಿರುವಾಗಲೇ ಹೃದಯಾಘಾತ: ಮೃತಪಟ್ಟ ಕೋಚ್!
    • 4
      ಅಗಸ್ಟ್ 16 ರಂದು ಧರ್ಮಸ್ಥಳ ಚಲೋ ಅಭಿಯಾನ - ಶಾಸಕ ವಿಶ್ವನಾಥ!
    • 5
      ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ:- ಶಾಸಕ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search