• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇವಾಲಯಗಳ 1 ಟನ್ ಚಿನ್ನ ಕರಗಿಸಿ ಬ್ಯಾಂಕಿನಲ್ಲಿಟ್ಟ ತಮಿಳುನಾಡು ಸರಕಾರ!

Tulunadu News Posted On April 17, 2025
0


0
Shares
  • Share On Facebook
  • Tweet It

ಭಕ್ತರು ದೇವಾಲಯಗಳಿಗೆ ಕಾಣಿಕೆಯಾಗಿ ನೀಡಿದ ಒಂದು ಸಾವಿರ ಕೆಜಿಗೂ ಅಧಿಕ ಚಿನ್ನವನ್ನು ಕರಗಿಸಿ 24 ಕ್ಯಾರೆಟ್ ಬಿಸ್ಕತ್ತುಗಳನ್ನಾಗಿ ಪರಿವರ್ತಿಸಲಾಗಿದೆ ಎಂದು ತಮಿಳುನಾಡು ಸರಕಾರದ ಮುಜರಾಯಿ ಇಲಾಖೆ ತಿಳಿಸಿದೆ.

ಹೀಗೆ ಬಿಸ್ಕತ್ ಗಳನ್ನಾಗಿ ಪರಿವರ್ತಿಸಲಾದ 1 ಟನ್ ಗೂ ಅಧಿಕ ಚಿನ್ನವನ್ನು ಬ್ಯಾಂಕುಗಳಲ್ಲಿ ಠೇವಣಿಯಾಗಿ ಹೂಡಿಕೆ ಮಾಡಲಾಗಿದೆ ಎಂದು ಇಲಾಖೆ ತಿಳಿಸಿದೆ. ಚಿನ್ನದ ಠೇವಣಿಯಿಂದ ಬ್ಯಾಂಕುಗಳಿಂದ ವಾರ್ಷಿಕವಾಗಿ 17.82 ಕೋಟಿ ಬಡ್ಡಿ ಬರುತ್ತದೆ. ಈ ಬಡ್ಡಿಹಣವನ್ನು ಸಂಬಂಧಿತ ದೇವಾಲಯಗಳ ಅಭಿವೃದ್ಧಿಗೆ ಬಳಸಲಾಗುತ್ತದೆ. ಕಳೆದ ಮಾರ್ಚ್ 31 ರಂದು ಎಲ್ಲಾ ಚಿನ್ನವನ್ನು ( 10,74,123,488 ಗ್ರಾಂಗಳು) ಠೇವಣಿ ಇಡಲಾಗಿದೆ ಎಂದು ತಮಿಳುನಾಡು ಮುಜರಾಯಿ ಸಚಿವ ಪಿ.ಕೆ.ಶೇಖರ್ ಬಾಬು ತಿಳಿಸಿದ್ದಾರೆ.

ತಮಿಳುನಾಡಿನ 21 ಹಿಂದೂ ದೇವಾಲಯಗಳಿಗೆ ಸೇರಿದ ಚಿನ್ನ ಇದಾಗಿದ್ದು, ಅದರಲ್ಲಿ ತಿರುಚಿರಾಪಳ್ಳಿ ಜಿಲ್ಲೆಯ ಸಮಯಾಪುರಂನ ಅರಳ್ಮಿಗು ಮಾರಿಯಮ್ಮನ್ ದೇವಾಲಯದ ಚಿನ್ನವೇ ಜಾಸ್ತಿ ಇದೆ. 426.26 ಕೆ.ಜಿ ಚಿನ್ನವನ್ನು ಆ ದೇವಾಲಯದವರು ನೀಡಿದ್ದಾರೆ ಎಂದು ವಿವರಿಸಿದ್ದಾರೆ.

ಭಕ್ತರು ದೇವಸ್ಥಾನಗಳಿಗೆ ಆಭರಣ ಅಥವಾ ಮತ್ತೊಂದು ರೂಪದಲ್ಲಿ ನೀಡಲಾದ ಆದರೆ, ಅವುಗಳನ್ನು ದೇವರು/ದೇವತೆಗಳಿಗೆ ಬಳಸದೇ ತೆಗೆದು ಇಟ್ಟಿದ್ದ ಚಿನ್ನವನ್ನು ಮಾತ್ರ ಈ ಕಾರ್ಯಕ್ಕೆ ಬಳಸಿಕೊಳ್ಳಲಾಗಿದೆ ಎಂದು ಶೇಖರ್ ಬಾಬು ತಿಳಿಸಿದ್ದಾರೆ.

21 ಹಿಂದೂ ದೇವಾಲಯಗಳಿಂದ ಪಡೆಯಲಾದ ಚಿನ್ನವನ್ನು ಮುಂಬೈ ಸರಕಾರಿ ಟಂಕಸಾಲೆಯಲ್ಲಿ ಕರಗಿಸಿ ಚಿನ್ನದ ಬಿಸ್ಕತ್ತುಗಳನ್ನಾಗಿ ಪರಿವರ್ತಿಸಲಾಗಿದೆ ಎಂದು ಅವರು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search