• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರತಿಭಟನೆಯ ಹೆಸರಿನಲ್ಲಿ ರಸ್ತೆ ಬಂದ್ ಮಾಡುವಂತಿಲ್ಲ – ಹೈಕೋರ್ಟ್ ಸೂಚನೆ

Tulunadu News Posted On April 17, 2025
0


0
Shares
  • Share On Facebook
  • Tweet It

ಸರ್ವೋಚ್ಚ ನ್ಯಾಯಾಲಯ ಪ್ರತಿಭಟನೆಯ ವಿಷಯದಲ್ಲಿ ಸ್ಪಷ್ಟವಾದ ನಿಯಮಗಳನ್ನು ಹೇಳಿದೆ. ಕಾನೂನಿನಡಿಯಲ್ಲಿ ಪ್ರತಿಭಟನೆಗೆ ಅನುಮತಿ ದೊರಕಿದ್ದರೆ ನಿಗದಿಪಡಿಸಿದ ಜಾಗದಲ್ಲಿ ಮಾತ್ರ ಪ್ರತಿಭಟನೆ ಮಾಡಬೇಕು. ಒಂದು ವೇಳೆ ಅನುಮತಿ ಇಲ್ಲದಿದ್ದರೆ ಪ್ರತಿಭಟನೆ ಮಾಡುವಂತಿಲ್ಲ. ಆದರೆ ಯಾವುದೇ ಕಾರಣಕ್ಕೂ, ಯಾವುದೇ ಕಾಲಕ್ಕೂ ರಸ್ತೆಯನ್ನು ಬಂದ್ ಅಥವಾ ಬ್ಲಾಕ್ ಮಾಡಿ ಪ್ರತಿಭಟನೆ ಮಾಡುವಂತಿಲ್ಲ ಎಂದು ಹೈಕೋರ್ಟ್ ನ್ಯಾಯಮೂರ್ತಿ ನ್ಯಾಗಪ್ರಸನ್ನ ಅವರ ಪೀಠ ಆದೇಶಿಸಿದೆ.

ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಮಂಗಳೂರಿನ ಕಣ್ಣೂರು – ಅಡ್ಯಾರ್ ನಲ್ಲಿ ಎಪ್ರಿಲ್ 18 ರಂದು ಪ್ರತಿಭಟನೆಗೆ ಮುಸ್ಲಿಂ ಸಂಘಟನೆಗಳು ನಿರ್ಧರಿಸಿವೆ. ಮಂಗಳೂರು ಕಮೀಷನರ್ ಅವರು ಈ ಪ್ರದೇಶದಲ್ಲಿ ಬರುವ ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ವಾಹನಗಳ ಸಂಚಾರ ನಿರ್ಭಂದಿಸಿ ಪರ್ಯಾಯ ರಸ್ತೆಗಳನ್ನು ಬಳಸುವಂತೆ ಮಾಧ್ಯಮ ಪ್ರಕಟನೆ ನೀಡಿದ್ದರು. ಇದರ ವಿರುದ್ಧ ಹೈಕೋರ್ಟ್ ನಲ್ಲಿ ವಾದ ಪ್ರತಿವಾದ ನಡೆದು ರಾಷ್ಟ್ರೀಯ ಹೆದ್ದಾರಿ 73 ರನ್ನು ಬಂದ್ ಮಾಡಿ ಪ್ರತಿಭಟನೆ ಮಾಡುವಂತಿಲ್ಲ ಎಂದು ನ್ಯಾಯಾಲಯ ಹೇಳಿದೆ. ಈ ರಾಷ್ಟ್ರೀಯ ಹೆದ್ದಾರಿ 73 ಮಂಗಳೂರಿನ ಪ್ರಮುಖ ಹೆದ್ದಾರಿಯಾಗಿದ್ದು, ಇದು ಬಂದ್ ಆದರೆ ವಾಹನ ಸಂಚಾರಕ್ಕೆ, ವ್ಯಾಣಿಜ್ಯ ವ್ಯವಹಾರಕ್ಕೆ ತೊಂದರೆಯಾಗುತ್ತದೆ ಎಂದು ವಾದಿಸಲಾಗಿತ್ತು. ಸುಪ್ರೀಂಕೋರ್ಟ್ ಕೂಡ ಈ ವಿಷಯದಲ್ಲಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸುವಂತಿಲ್ಲ ಎನ್ನುವುದನ್ನು ಆದೇಶಿಸಿರುವುದರಿಂದ ಅದನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕೆಂದು ಹೈಕೋರ್ಟ್ ಹೇಳಿದೆ.

ಈ ಬಗ್ಗೆ ಮಂಗಳೂರು ಪೊಲೀಸ್ ಕಮೀಷನರ್ ಅವರಿಗೆ ಹೈಕೋರ್ಟ್ ಆದೇಶವನ್ನು ಲಿಖಿತವಾಗಿ ತಿಳಿಸಲಾಗಿದ್ದು, ಎನ್ ಎಚ್ 73 ರಲ್ಲಿ ಯಾವುದೇ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಆಗದಂತೆ ಕ್ರಮ ವಹಿಸಬೇಕೆಂದು ಉಲ್ಲೇಖಿಸಲಾಗಿದೆ. ಈ ಪ್ರಕರಣದಲ್ಲಿ ಮುಂದಿನ ವಿಚಾರಣೆಯಲ್ಲಿ ಎಪ್ರಿಲ್ 23 ಕ್ಕೆ ಮುಂದೂಡಲಾಗಿದೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search