• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿಯನ್ನು ಭೇಟಿಯಾಗಿ ವಕ್ಫ್ ತಿದ್ದುಪಡಿ ಬಗ್ಗೆ ಧನ್ಯವಾದ ಹೇಳಿದ ಮುಸ್ಲಿಂ ನಿಯೋಗ!

Tulunadu News Posted On April 18, 2025
0


0
Shares
  • Share On Facebook
  • Tweet It

ಮುಸ್ಲಿಂ ಸಮುದಾಯದ ದಾವೂದಿ ಬೋಹ್ರಾ ಸಮಾಜದ ಮುಖಂಡರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ವಕ್ಫ್ ತಿದ್ದುಪದಿ ಮಸೂದೆಗೆ ಧನ್ಯವಾದ ಅರ್ಪಿಸಿದರು. ತಮ್ಮ ಸಮುದಾಯದ ಬಹುಕಾಲದ ಬೇಡಿಕೆಯನ್ನು ಈಡೇರಿಸಿದ್ದಕ್ಕಾಗಿ ಅವರು ಪ್ರಧಾನಿಗೆ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಅವರೊಂದಿಗೆ ಅಭಿಪ್ರಾಯ ಹಂಚಿಕೊಂಡ ಮೋದಿಯವರು ವಕ್ಫ್ ಕಾಯಿದೆಯಲ್ಲಿ ಹಿಂದೆ ಇದ್ದ ಜಟಿಲತೆಯನ್ನು ತಾವು ಕಳೆದ ಐದು ವರ್ಷಗಳಿಂದ ಅಧ್ಯಯನ ಮಾಡಿರುವುದಾಗಿ ಹೇಳಿದರು. ಸರಕಾರದ ಬಳಿ ಹಿಂದಿನ ವಕ್ಫ್ ಕಾಯಿದೆಯಿಂದ ತೊಂದರೆಗೆ ಒಳಗಾದ ನಾಗರಿಕರ ಸುಮಾರು 1700 ದೂರುಗಳು ಬಂದಿದ್ದು, ವಿಶೇಷವಾಗಿ ಮಹಿಳೆಯರು ಈ ಹಿಂದಿನ ಕಾಯ್ದೆಯಿಂದ ಸಮಸ್ಯೆ ಅನುಭವಿಸುತ್ತಿದ್ದರು ಎಂದು ಮೋದಿ ವಿಷಯ ಹಂಚಿಕೊಂಡರು. ನಿಯೋಗದಲ್ಲಿದ್ದ ಮುಖಂಡರೊಬ್ಬರು ಮಾತನಾಡಿ ಈ ವಕ್ಫ್ ತಿದ್ದುಪಡಿ ಕಾಯಿದೆಯಾಗಿ ಜಾರಿಗೆ ಬಂದ ನಂತರ ಅಲ್ಪಸಂಖ್ಯಾತರಲ್ಲಿರುವ ಅಲ್ಪಸಂಖ್ಯಾತರ ಏಳಿಗೆಗೆ ತುಂಬಾ ಅನುಕೂಲಕರವಾಗುತ್ತದೆ ಎಂದು ಹೇಳಿದರು. ಅದಕ್ಕೆ ಪ್ರತಿಕ್ರಿಯಿಸಿದ ಮೋದಿಯವವರು ವಕ್ಫ್ ವಿಚಾರದಲ್ಲಿ ಸಾಕಷ್ಟು ಸುಧಾರಣೆಗಳನ್ನು ಮಾಡುವ ಮೂಲಕ ಆ ಸಮುದಾಯಕ್ಕೆ ಅದರ ಪ್ರಯೋಜನ ಸಿಗಬೇಕು ಎನ್ನುವ ಕಾರಣಕ್ಕೆ ಕೆಲವು ತಿದ್ದುಪಡಿ ತರಬೇಕಾಯಿತು ಎಂದು ಹೇಳಿದರು.

ನಂತರ ತಮ್ಮ “ಏಕ್ಸ್ ” ಅಭಿಪ್ರಾಯ ಹಂಚಿಕೊಂಡ ಪ್ರಧಾನಿ ದಾವೂದಿ ಬೋಹ್ರಾ ಸಮುದಾಯದ ನಿಯೋಗದೊಂದಿಗೆ ನಡೆಸಿದ ಮಾತುಕತೆ ತುಂಬಾ ಖುಷಿ ನೀಡಿತು ಎಂದು ಹೇಳಿದ್ದಾರೆ. ನಾವು ಆ ಸಮುದಾಯದ ಏಳಿಗೆಗೆ ಅಗತ್ಯ ಇರುವ ವಿವಿಧ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಿದೆವು ಎಂದು ತಿಳಿಸಿದ್ದಾರೆ.

ನಿಯೋಗದೊಂದಿಗೆ ಜೊತೆಗೂಡಿದ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ” ಮೋದಿಯವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್” ನಿಜವಾದ ಅರ್ಥದಲ್ಲಿ ಜಾರಿಗೆ ಬರುತ್ತಿದೆ. ಈ ಮೊದಲು ಜಂಟಿ ಸಂಸದೀಯ ಮಂಡಳಿಯ ಸಭೆಯಲ್ಲಿ ಶಿಯಾ ಮುಸ್ಲಿಮರಲ್ಲಿಯೇ ಸಣ್ಣ ಸಮುದಾಯವಾಗಿರುವ ದಾವೂದಿ ಬೋಹ್ರಾ ಸಮಾಜದ ಪರವಾಗಿ ಹರೀಶ್ ಸಾಳ್ವೆಯವರು ಭಾಗವಹಿಸಿದ್ದರು. ಆ ಸಮುದಾಯದ ಅಭಿಪ್ರಾಯಗಳನ್ನು ಒಳಗೊಂಡು ಈ ಹೊಸ ತಿದ್ದುಪಡಿ ಮಸೂದೆ ತಯಾರಿಸಲಾಗಿತ್ತು. ಅವರ ಅನೇಕ ಬೇಡಿಕೆಗಳನ್ನು ಸೇರಿಸಿದ ಕಾರಣ ಆ ಸಮುದಾಯಕ್ಕೆ ಅನುಕೂಲವಾಗಲಿದೆ ಎಂದು ಹೇಳಿದರು.

 

0
Shares
  • Share On Facebook
  • Tweet It




Trending Now
ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
Tulunadu News July 12, 2025
ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
Tulunadu News July 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
  • Popular Posts

    • 1
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 2
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 3
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 4
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • 5
      ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!

  • Privacy Policy
  • Contact
© Tulunadu Infomedia.

Press enter/return to begin your search