• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿಯನ್ನು ಭೇಟಿಯಾಗಿ ವಕ್ಫ್ ತಿದ್ದುಪಡಿ ಬಗ್ಗೆ ಧನ್ಯವಾದ ಹೇಳಿದ ಮುಸ್ಲಿಂ ನಿಯೋಗ!

Tulunadu News Posted On April 18, 2025
0


0
Shares
  • Share On Facebook
  • Tweet It

ಮುಸ್ಲಿಂ ಸಮುದಾಯದ ದಾವೂದಿ ಬೋಹ್ರಾ ಸಮಾಜದ ಮುಖಂಡರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ವಕ್ಫ್ ತಿದ್ದುಪದಿ ಮಸೂದೆಗೆ ಧನ್ಯವಾದ ಅರ್ಪಿಸಿದರು. ತಮ್ಮ ಸಮುದಾಯದ ಬಹುಕಾಲದ ಬೇಡಿಕೆಯನ್ನು ಈಡೇರಿಸಿದ್ದಕ್ಕಾಗಿ ಅವರು ಪ್ರಧಾನಿಗೆ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಅವರೊಂದಿಗೆ ಅಭಿಪ್ರಾಯ ಹಂಚಿಕೊಂಡ ಮೋದಿಯವರು ವಕ್ಫ್ ಕಾಯಿದೆಯಲ್ಲಿ ಹಿಂದೆ ಇದ್ದ ಜಟಿಲತೆಯನ್ನು ತಾವು ಕಳೆದ ಐದು ವರ್ಷಗಳಿಂದ ಅಧ್ಯಯನ ಮಾಡಿರುವುದಾಗಿ ಹೇಳಿದರು. ಸರಕಾರದ ಬಳಿ ಹಿಂದಿನ ವಕ್ಫ್ ಕಾಯಿದೆಯಿಂದ ತೊಂದರೆಗೆ ಒಳಗಾದ ನಾಗರಿಕರ ಸುಮಾರು 1700 ದೂರುಗಳು ಬಂದಿದ್ದು, ವಿಶೇಷವಾಗಿ ಮಹಿಳೆಯರು ಈ ಹಿಂದಿನ ಕಾಯ್ದೆಯಿಂದ ಸಮಸ್ಯೆ ಅನುಭವಿಸುತ್ತಿದ್ದರು ಎಂದು ಮೋದಿ ವಿಷಯ ಹಂಚಿಕೊಂಡರು. ನಿಯೋಗದಲ್ಲಿದ್ದ ಮುಖಂಡರೊಬ್ಬರು ಮಾತನಾಡಿ ಈ ವಕ್ಫ್ ತಿದ್ದುಪಡಿ ಕಾಯಿದೆಯಾಗಿ ಜಾರಿಗೆ ಬಂದ ನಂತರ ಅಲ್ಪಸಂಖ್ಯಾತರಲ್ಲಿರುವ ಅಲ್ಪಸಂಖ್ಯಾತರ ಏಳಿಗೆಗೆ ತುಂಬಾ ಅನುಕೂಲಕರವಾಗುತ್ತದೆ ಎಂದು ಹೇಳಿದರು. ಅದಕ್ಕೆ ಪ್ರತಿಕ್ರಿಯಿಸಿದ ಮೋದಿಯವವರು ವಕ್ಫ್ ವಿಚಾರದಲ್ಲಿ ಸಾಕಷ್ಟು ಸುಧಾರಣೆಗಳನ್ನು ಮಾಡುವ ಮೂಲಕ ಆ ಸಮುದಾಯಕ್ಕೆ ಅದರ ಪ್ರಯೋಜನ ಸಿಗಬೇಕು ಎನ್ನುವ ಕಾರಣಕ್ಕೆ ಕೆಲವು ತಿದ್ದುಪಡಿ ತರಬೇಕಾಯಿತು ಎಂದು ಹೇಳಿದರು.

ನಂತರ ತಮ್ಮ “ಏಕ್ಸ್ ” ಅಭಿಪ್ರಾಯ ಹಂಚಿಕೊಂಡ ಪ್ರಧಾನಿ ದಾವೂದಿ ಬೋಹ್ರಾ ಸಮುದಾಯದ ನಿಯೋಗದೊಂದಿಗೆ ನಡೆಸಿದ ಮಾತುಕತೆ ತುಂಬಾ ಖುಷಿ ನೀಡಿತು ಎಂದು ಹೇಳಿದ್ದಾರೆ. ನಾವು ಆ ಸಮುದಾಯದ ಏಳಿಗೆಗೆ ಅಗತ್ಯ ಇರುವ ವಿವಿಧ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಿದೆವು ಎಂದು ತಿಳಿಸಿದ್ದಾರೆ.

ನಿಯೋಗದೊಂದಿಗೆ ಜೊತೆಗೂಡಿದ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ” ಮೋದಿಯವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್” ನಿಜವಾದ ಅರ್ಥದಲ್ಲಿ ಜಾರಿಗೆ ಬರುತ್ತಿದೆ. ಈ ಮೊದಲು ಜಂಟಿ ಸಂಸದೀಯ ಮಂಡಳಿಯ ಸಭೆಯಲ್ಲಿ ಶಿಯಾ ಮುಸ್ಲಿಮರಲ್ಲಿಯೇ ಸಣ್ಣ ಸಮುದಾಯವಾಗಿರುವ ದಾವೂದಿ ಬೋಹ್ರಾ ಸಮಾಜದ ಪರವಾಗಿ ಹರೀಶ್ ಸಾಳ್ವೆಯವರು ಭಾಗವಹಿಸಿದ್ದರು. ಆ ಸಮುದಾಯದ ಅಭಿಪ್ರಾಯಗಳನ್ನು ಒಳಗೊಂಡು ಈ ಹೊಸ ತಿದ್ದುಪಡಿ ಮಸೂದೆ ತಯಾರಿಸಲಾಗಿತ್ತು. ಅವರ ಅನೇಕ ಬೇಡಿಕೆಗಳನ್ನು ಸೇರಿಸಿದ ಕಾರಣ ಆ ಸಮುದಾಯಕ್ಕೆ ಅನುಕೂಲವಾಗಲಿದೆ ಎಂದು ಹೇಳಿದರು.

 

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ

  • Privacy Policy
  • Contact
© Tulunadu Infomedia.

Press enter/return to begin your search