• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೂರೇ ತಿಂಗಳಲ್ಲಿ ಬಂಗಾರದ ಬೆಲೆ 22000 ರೂ ಹೆಚ್ಚು!

Tulunadu News Posted On April 18, 2025
0


0
Shares
  • Share On Facebook
  • Tweet It

ಚಿನ್ನದ ಬೆಲೆ ಹತ್ತು ಗ್ರಾಂಗೆ ಬಹುತೇಕ ಒಂದು ಲಕ್ಷದ ಸನಿಹಕ್ಕೆ ಬಂದು ತಲುಪಿದೆ. ಕಳೆದ ವರ್ಷ ಡಿಸೆಂಬರ್ 31 ರಂದು 76,162 ರೂ ಆಗಿದ್ದ ಚಿನ್ನದ ಬೆಲೆ ಜನವರಿ 18 ರಂದು 81,453 ಆಗಿತ್ತು. ಫೆಬ್ರವರಿ 27 ರಂದು 87,983 ಆಗಿ ನಂತರ ಮಾರ್ಚ್ 27 ರಂದು 88,100 ಆಗಿತ್ತು. ನಂತರ ಎಪ್ರಿಲ್ 16 ರಂದು 94560 ಆಗಿ ಅದರ ಮರುದಿನವೇ 98170 ಆಗಿತ್ತು. ಈಗ ಎಪ್ರಿಲ್ 30 ಕ್ಕೆ ಇದು ಒಂದು ಲಕ್ಷಕ್ಕೆ ತಲುಪಬಹುದು ಎನ್ನುವ ನಿರೀಕ್ಷೆ ಇದೆ.

ಎಪ್ರಿಲ್ 30 ರಂದು ಅಕ್ಷಯ ತೃತೀಯ ಇರುವುದರಿಂದ ಆವತ್ತು 10 ಗ್ರಾಂಗೆ ಒಂದು ಲಕ್ಷ ರೂಪಾಯಿ ಆಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಡಿಸೆಂಬರ್ 31 ರಿಂದ ಎಪ್ರಿಲ್ 16 ರ ನಡುವೆ ಮೂರುವರೆ ತಿಂಗಳಲ್ಲಿ ಬರೋಬ್ಬರಿ 22000 ರೂಪಾಯಿ ಜಾಸ್ತಿಯಾಗುವ ಮೂಲಕ ಚಿನ್ನದ ಬೆಲೆ ಏರಿಕೆಯಲ್ಲಿ ದಾಖಲೆ ನಿರ್ಮಾಣವಾಗಿದೆ.

ಸದ್ಯಕ್ಕಂತೂ ಬೆಲೆ ಇಳಿಯುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ಜಗತ್ತಿನಲ್ಲಿ ಈಗ ಟ್ರೇಡ್ ವಾರ್ ನಡೆಯುತ್ತಿರುವುದರಿಂದ ಬಂಡವಾಳಷಾಹಿಗಳು ಈಗ ಸದ್ಯ ಚಿನ್ನದ ಮೇಲೆ ಹಣ ಹೂಡುತ್ತಿದ್ದಾರೆ. ಇದರಿಂದ ಚಿನ್ನದ ದರ ನಾಗಲೋಟದಿಂದ ಏರಿಕೆ ಕಾಣುತ್ತಿದೆ. ಸದ್ಯ ಚಿನ್ನದ ಮೇಲೆ ಹಣ ಹಾಕುವುದು ಸುರಕ್ಷತೆಯ ದೃಷ್ಟಿಯಿಂದ ಉತ್ತಮ ನಿರ್ಧಾರ ಎಂದು ಹೇಳಲಾಗುತ್ತಿದೆ.

0
Shares
  • Share On Facebook
  • Tweet It




Trending Now
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
  • Popular Posts

    • 1
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 2
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search