• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೂರೇ ತಿಂಗಳಲ್ಲಿ ಬಂಗಾರದ ಬೆಲೆ 22000 ರೂ ಹೆಚ್ಚು!

Tulunadu News Posted On April 18, 2025
0


0
Shares
  • Share On Facebook
  • Tweet It

ಚಿನ್ನದ ಬೆಲೆ ಹತ್ತು ಗ್ರಾಂಗೆ ಬಹುತೇಕ ಒಂದು ಲಕ್ಷದ ಸನಿಹಕ್ಕೆ ಬಂದು ತಲುಪಿದೆ. ಕಳೆದ ವರ್ಷ ಡಿಸೆಂಬರ್ 31 ರಂದು 76,162 ರೂ ಆಗಿದ್ದ ಚಿನ್ನದ ಬೆಲೆ ಜನವರಿ 18 ರಂದು 81,453 ಆಗಿತ್ತು. ಫೆಬ್ರವರಿ 27 ರಂದು 87,983 ಆಗಿ ನಂತರ ಮಾರ್ಚ್ 27 ರಂದು 88,100 ಆಗಿತ್ತು. ನಂತರ ಎಪ್ರಿಲ್ 16 ರಂದು 94560 ಆಗಿ ಅದರ ಮರುದಿನವೇ 98170 ಆಗಿತ್ತು. ಈಗ ಎಪ್ರಿಲ್ 30 ಕ್ಕೆ ಇದು ಒಂದು ಲಕ್ಷಕ್ಕೆ ತಲುಪಬಹುದು ಎನ್ನುವ ನಿರೀಕ್ಷೆ ಇದೆ.

ಎಪ್ರಿಲ್ 30 ರಂದು ಅಕ್ಷಯ ತೃತೀಯ ಇರುವುದರಿಂದ ಆವತ್ತು 10 ಗ್ರಾಂಗೆ ಒಂದು ಲಕ್ಷ ರೂಪಾಯಿ ಆಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಡಿಸೆಂಬರ್ 31 ರಿಂದ ಎಪ್ರಿಲ್ 16 ರ ನಡುವೆ ಮೂರುವರೆ ತಿಂಗಳಲ್ಲಿ ಬರೋಬ್ಬರಿ 22000 ರೂಪಾಯಿ ಜಾಸ್ತಿಯಾಗುವ ಮೂಲಕ ಚಿನ್ನದ ಬೆಲೆ ಏರಿಕೆಯಲ್ಲಿ ದಾಖಲೆ ನಿರ್ಮಾಣವಾಗಿದೆ.

ಸದ್ಯಕ್ಕಂತೂ ಬೆಲೆ ಇಳಿಯುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ಜಗತ್ತಿನಲ್ಲಿ ಈಗ ಟ್ರೇಡ್ ವಾರ್ ನಡೆಯುತ್ತಿರುವುದರಿಂದ ಬಂಡವಾಳಷಾಹಿಗಳು ಈಗ ಸದ್ಯ ಚಿನ್ನದ ಮೇಲೆ ಹಣ ಹೂಡುತ್ತಿದ್ದಾರೆ. ಇದರಿಂದ ಚಿನ್ನದ ದರ ನಾಗಲೋಟದಿಂದ ಏರಿಕೆ ಕಾಣುತ್ತಿದೆ. ಸದ್ಯ ಚಿನ್ನದ ಮೇಲೆ ಹಣ ಹಾಕುವುದು ಸುರಕ್ಷತೆಯ ದೃಷ್ಟಿಯಿಂದ ಉತ್ತಮ ನಿರ್ಧಾರ ಎಂದು ಹೇಳಲಾಗುತ್ತಿದೆ.

0
Shares
  • Share On Facebook
  • Tweet It




Trending Now
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
  • Popular Posts

    • 1
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 2
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • 3
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search