• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸ್ಕೂಟರ್ ಓಡಿಸಿದ ಬಾಲಕನ ಪೋಷಕರಿಗೆ ಮೂಡಿಗೆರೆ ನ್ಯಾಯಾಲಯ 25 ಸಾವಿರ ರೂ ದಂಡ!

Tulunadu News Posted On April 18, 2025
0


0
Shares
  • Share On Facebook
  • Tweet It

ಪ್ರಾಪ್ತ ವಯಸ್ಸಿಗೆ ಬರದ ಮಕ್ಕಳಿಗೆ ರಸ್ತೆಯಲ್ಲಿ ವಾಹನ ಚಲಾಯಿಸಲು ಪೋಷಕರು ನೀಡಬಾರದು ಎನ್ನುವ ಜಾಗೃತಿಯನ್ನು ಎಷ್ಟೇ ಮೂಡಿಸಿದರೂ ಹಲವು ಬಾರಿ ಏನಾಗುವುದಿಲ್ಲ ಎನ್ನುವ ಭಂಡ ಧೈರ್ಯದಿಂದ ಹೆತ್ತವರು ಮಕ್ಕಳ ಕೈಯಲ್ಲಿ ವಾಹನ ನೀಡುತ್ತಾರೆ. ಇಲ್ಲೇ ಹತ್ತಿರ ಸಾಮಾನು ತರಲು ಕಳಿಸಿದ್ವಿ, ಹತ್ತಿರದಲ್ಲಿ ಸಂಬಂಧಿಕರನ್ನು ಡ್ರಾಪ್ ಮಾಡಲು ತೆಗೆದುಕೊಂಡು ಹೋಗಿದ್ದ ಹೀಗೆ ಹತ್ತಾರು ಕಾರಣಗಳನ್ನು ಪೋಷಕರು ನೀಡುತ್ತಾರೆ.

ಏನಾದರೂ ಹೆಚ್ಚು ಕಡಿಮೆ ಆಗದಿದ್ರೆ ಆಗ ಯಾರೂ ಮಾತನಾಡುವುದಿಲ್ಲ. ಅದೇ ಏನಾದರೂ ಅಪಘಾತವಾಗಿ ಅಪ್ರಾಪ್ತನ ಜೀವಕ್ಕೆ ತೊಂದರೆಯಾದರೆ ಆಗ ರಸ್ತೆಯಲ್ಲಿ ವಾಹನ ಚಾಲನೆ ಮಾಡುತ್ತಿದ್ದ ಬೇರೆಯವರ ಮೇಲೆ ದೂರು ಹಾಕುತ್ತಾರೆ. ಇದರಿಂದ ಎಲ್ಲರಿಗೂ ತೊಂದರೆ ಕಟ್ಟಿಟ್ಟ ಬುತ್ತಿ. ಆದ್ದರಿಂದ ಟ್ರಾಫಿಕ್ ಪೊಲೀಸರು ಆದಷ್ಟು ಅಪ್ತಾಪ್ತ ವಯಸ್ಸಿನ ಬಾಲಕರು ಸ್ಕೂಟರ್ ಅಥವಾ ಕಾರು ಚಲಾಯಿಸಿಕೊಂಡು ಹೋಗುವಾಗ ಸೂಕ್ತ ಕ್ರಮ ಕೈಗೊಂಡರೆ ಆಗ ಇಂತಹ ಯಾವುದೇ ದುರ್ಘಟನೆಯನ್ನು ತಪ್ಪಿಸಬಹುದು.

ಆದರೆ ಅನೇಕ ಸಂದರ್ಭದಲ್ಲಿ ಅಪ್ರಾಪ್ತರು ವಾಹನ ಚಲಾಯಿಸಿ ಹೋಗುವಾಗ ಪೊಲೀಸರ ಕೈಯಲ್ಲಿ ಸಿಕ್ಕಿಬೀಳುವುದಿಲ್ಲವಾದ್ದರಿಂದ ಹೆಚ್ಚೆಚ್ಚು ಅಪ್ರಾಪ್ತರು ವಾಹನ ಚಲಾಯಿಸುತ್ತಾ ಇರುತ್ತಾರೆ. ಭಾರತದಲ್ಲಿ ಹದಿನೆಂಟು ವಯಸ್ಸು ದಾಟಿದ ನಂತರ ವಾಹನ ಚಲಾವಣೆಯ ಡ್ರೈವಿಂಗ್ ಲೈಸೆನ್ಸ್ ಹೊಂದಿದವರಿಗೆ ಮಾತ್ರ ವಾಹನ ಚಲಾಯಿಸಲು ಅವಕಾಶ ಸಿಗುತ್ತದೆ.

ಒಂದು ವೇಳೆ ಅಪ್ರಾಪ್ತರು ವಾಹನ ಚಲಾಯಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದರೆ ಅಂತಹ ಮಕ್ಕಳ ಪೋಷಕರಿಗೆ 25000 ರೂಪಾಯಿ ದಂಡ ವಿಧಿಸಬಹುದಾಗಿದೆ. ಇನ್ನು ನ್ಯಾಯಾಲಯ ಮೂರು ವರ್ಷಗಳ ತನಕ ಕಾರಾಗೃಹ ಶಿಕ್ಷೆಯನ್ನು ಕೂಡ ವಿಧಿಸಬಹುದಾಗಿದೆ. ಅದರೊಂದಿಗೆ ಅಂತಹ ವಾಹನಗಳ ನೊಂದಾವಣೆ ಕೂಡ ರದ್ದಾಗುತ್ತದೆ. ಅದರೊಂದಿಗೆ ಅಂತಹ ಬಾಲಕ ಅಥವಾ ಬಾಲಕಿ 25 ವರ್ಷ ವಯಸ್ಸಿನ ತನಕ ಡ್ರೈವಿಂಗ್ ಲೈಸೆನ್ಸ್ ಪಡೆಯುವುದರಿಂದ ವಂಚಿತರಾಗಬೇಕಾಗುತ್ತದೆ.

ಮೂಡಿಗೆರೆ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯ ಇಂತಹ ಒಂದು ಪ್ರಕರಣದಲ್ಲಿ ಪೋಷಕರಿಗೆ 25000 ರೂಪಾಯಿ ದಂಡ ವಿಧಿಸಿ ಹೀಗೆ ಮಕ್ಕಳ ಕೈಗೆ ವಾಹನ ನೀಡುವ ಪೋಷಕರಿಗೆ ಎಚ್ಚರಿಕೆಯ ಗಂಟ ರವಾನಿಸಿದೆ.
ಮೂಡಿಗೆರೆ ಪಟ್ಟಣದ ಬಾಪು ನಗರದಲ್ಲಿ ಏಪ್ರಿಲ್ 4 ರಂದು ಬಾಲಕ ಸ್ಕೂಟರ್ ಚಾಲನೆ ಮಾಡುತ್ತಿದ್ದಾಗ ಪೊಲೀಸರು ತಡೆದು ದ್ವಿಚಕ್ರ ವಾಹನ ವಶಕ್ಕೆ ಪಡೆದಿದ್ದರು. ಸ್ಕೂಟರ್ ಚಾಲನೆ ಮಾಡಲು ಅವಕಾಶ ನೀಡಿದ ಬಾಲಕನ ತಂದೆ ಮೊಹಮ್ಮದ್ ಸಿರಾಜ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ದಂಡ ವಿಧಿಸಿ ಆದೇಶಿಸಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • 3
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 4
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.

  • Privacy Policy
  • Contact
© Tulunadu Infomedia.

Press enter/return to begin your search