• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸ್ಕೂಟರ್ ಓಡಿಸಿದ ಬಾಲಕನ ಪೋಷಕರಿಗೆ ಮೂಡಿಗೆರೆ ನ್ಯಾಯಾಲಯ 25 ಸಾವಿರ ರೂ ದಂಡ!

Tulunadu News Posted On April 18, 2025
0


0
Shares
  • Share On Facebook
  • Tweet It

ಪ್ರಾಪ್ತ ವಯಸ್ಸಿಗೆ ಬರದ ಮಕ್ಕಳಿಗೆ ರಸ್ತೆಯಲ್ಲಿ ವಾಹನ ಚಲಾಯಿಸಲು ಪೋಷಕರು ನೀಡಬಾರದು ಎನ್ನುವ ಜಾಗೃತಿಯನ್ನು ಎಷ್ಟೇ ಮೂಡಿಸಿದರೂ ಹಲವು ಬಾರಿ ಏನಾಗುವುದಿಲ್ಲ ಎನ್ನುವ ಭಂಡ ಧೈರ್ಯದಿಂದ ಹೆತ್ತವರು ಮಕ್ಕಳ ಕೈಯಲ್ಲಿ ವಾಹನ ನೀಡುತ್ತಾರೆ. ಇಲ್ಲೇ ಹತ್ತಿರ ಸಾಮಾನು ತರಲು ಕಳಿಸಿದ್ವಿ, ಹತ್ತಿರದಲ್ಲಿ ಸಂಬಂಧಿಕರನ್ನು ಡ್ರಾಪ್ ಮಾಡಲು ತೆಗೆದುಕೊಂಡು ಹೋಗಿದ್ದ ಹೀಗೆ ಹತ್ತಾರು ಕಾರಣಗಳನ್ನು ಪೋಷಕರು ನೀಡುತ್ತಾರೆ.

ಏನಾದರೂ ಹೆಚ್ಚು ಕಡಿಮೆ ಆಗದಿದ್ರೆ ಆಗ ಯಾರೂ ಮಾತನಾಡುವುದಿಲ್ಲ. ಅದೇ ಏನಾದರೂ ಅಪಘಾತವಾಗಿ ಅಪ್ರಾಪ್ತನ ಜೀವಕ್ಕೆ ತೊಂದರೆಯಾದರೆ ಆಗ ರಸ್ತೆಯಲ್ಲಿ ವಾಹನ ಚಾಲನೆ ಮಾಡುತ್ತಿದ್ದ ಬೇರೆಯವರ ಮೇಲೆ ದೂರು ಹಾಕುತ್ತಾರೆ. ಇದರಿಂದ ಎಲ್ಲರಿಗೂ ತೊಂದರೆ ಕಟ್ಟಿಟ್ಟ ಬುತ್ತಿ. ಆದ್ದರಿಂದ ಟ್ರಾಫಿಕ್ ಪೊಲೀಸರು ಆದಷ್ಟು ಅಪ್ತಾಪ್ತ ವಯಸ್ಸಿನ ಬಾಲಕರು ಸ್ಕೂಟರ್ ಅಥವಾ ಕಾರು ಚಲಾಯಿಸಿಕೊಂಡು ಹೋಗುವಾಗ ಸೂಕ್ತ ಕ್ರಮ ಕೈಗೊಂಡರೆ ಆಗ ಇಂತಹ ಯಾವುದೇ ದುರ್ಘಟನೆಯನ್ನು ತಪ್ಪಿಸಬಹುದು.

ಆದರೆ ಅನೇಕ ಸಂದರ್ಭದಲ್ಲಿ ಅಪ್ರಾಪ್ತರು ವಾಹನ ಚಲಾಯಿಸಿ ಹೋಗುವಾಗ ಪೊಲೀಸರ ಕೈಯಲ್ಲಿ ಸಿಕ್ಕಿಬೀಳುವುದಿಲ್ಲವಾದ್ದರಿಂದ ಹೆಚ್ಚೆಚ್ಚು ಅಪ್ರಾಪ್ತರು ವಾಹನ ಚಲಾಯಿಸುತ್ತಾ ಇರುತ್ತಾರೆ. ಭಾರತದಲ್ಲಿ ಹದಿನೆಂಟು ವಯಸ್ಸು ದಾಟಿದ ನಂತರ ವಾಹನ ಚಲಾವಣೆಯ ಡ್ರೈವಿಂಗ್ ಲೈಸೆನ್ಸ್ ಹೊಂದಿದವರಿಗೆ ಮಾತ್ರ ವಾಹನ ಚಲಾಯಿಸಲು ಅವಕಾಶ ಸಿಗುತ್ತದೆ.

ಒಂದು ವೇಳೆ ಅಪ್ರಾಪ್ತರು ವಾಹನ ಚಲಾಯಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದರೆ ಅಂತಹ ಮಕ್ಕಳ ಪೋಷಕರಿಗೆ 25000 ರೂಪಾಯಿ ದಂಡ ವಿಧಿಸಬಹುದಾಗಿದೆ. ಇನ್ನು ನ್ಯಾಯಾಲಯ ಮೂರು ವರ್ಷಗಳ ತನಕ ಕಾರಾಗೃಹ ಶಿಕ್ಷೆಯನ್ನು ಕೂಡ ವಿಧಿಸಬಹುದಾಗಿದೆ. ಅದರೊಂದಿಗೆ ಅಂತಹ ವಾಹನಗಳ ನೊಂದಾವಣೆ ಕೂಡ ರದ್ದಾಗುತ್ತದೆ. ಅದರೊಂದಿಗೆ ಅಂತಹ ಬಾಲಕ ಅಥವಾ ಬಾಲಕಿ 25 ವರ್ಷ ವಯಸ್ಸಿನ ತನಕ ಡ್ರೈವಿಂಗ್ ಲೈಸೆನ್ಸ್ ಪಡೆಯುವುದರಿಂದ ವಂಚಿತರಾಗಬೇಕಾಗುತ್ತದೆ.

ಮೂಡಿಗೆರೆ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯ ಇಂತಹ ಒಂದು ಪ್ರಕರಣದಲ್ಲಿ ಪೋಷಕರಿಗೆ 25000 ರೂಪಾಯಿ ದಂಡ ವಿಧಿಸಿ ಹೀಗೆ ಮಕ್ಕಳ ಕೈಗೆ ವಾಹನ ನೀಡುವ ಪೋಷಕರಿಗೆ ಎಚ್ಚರಿಕೆಯ ಗಂಟ ರವಾನಿಸಿದೆ.
ಮೂಡಿಗೆರೆ ಪಟ್ಟಣದ ಬಾಪು ನಗರದಲ್ಲಿ ಏಪ್ರಿಲ್ 4 ರಂದು ಬಾಲಕ ಸ್ಕೂಟರ್ ಚಾಲನೆ ಮಾಡುತ್ತಿದ್ದಾಗ ಪೊಲೀಸರು ತಡೆದು ದ್ವಿಚಕ್ರ ವಾಹನ ವಶಕ್ಕೆ ಪಡೆದಿದ್ದರು. ಸ್ಕೂಟರ್ ಚಾಲನೆ ಮಾಡಲು ಅವಕಾಶ ನೀಡಿದ ಬಾಲಕನ ತಂದೆ ಮೊಹಮ್ಮದ್ ಸಿರಾಜ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ದಂಡ ವಿಧಿಸಿ ಆದೇಶಿಸಿದೆ.

0
Shares
  • Share On Facebook
  • Tweet It




Trending Now
2008 ಮಾಲೆಗಾಂ ಬಾಂಬ್ ಬ್ಲಾಸ್ಟ್ ಪ್ರಕರಣ: ಪ್ರಗ್ಯಾ ಸಿಂಗ್, ಕರ್ನಲ್ ಪುರೋಹಿತ್ ಸೇರಿ 7 ಜನ ದೋಷಮುಕ್ತ!
Tulunadu News July 31, 2025
ಕೇರಳದ ಸನ್ಯಾನಿಸಿಯರಿಗೆ ಜಾಮೀನು ಇಲ್ಲ; ಕಾಂಗ್ರೆಸ್ ಪ್ರತಿಭಟನೆ
Tulunadu News July 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 2008 ಮಾಲೆಗಾಂ ಬಾಂಬ್ ಬ್ಲಾಸ್ಟ್ ಪ್ರಕರಣ: ಪ್ರಗ್ಯಾ ಸಿಂಗ್, ಕರ್ನಲ್ ಪುರೋಹಿತ್ ಸೇರಿ 7 ಜನ ದೋಷಮುಕ್ತ!
    • ಕೇರಳದ ಸನ್ಯಾನಿಸಿಯರಿಗೆ ಜಾಮೀನು ಇಲ್ಲ; ಕಾಂಗ್ರೆಸ್ ಪ್ರತಿಭಟನೆ
    • ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
    • ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!
    • ಚಕ್ರವರ್ತಿ ವಿರುದ್ಧದ FIR ರದ್ದು! ಸುಪ್ರೀಂ ಕೋರ್ಟಿನಲ್ಲಿ ಅರುಣ್ ಶ್ಯಾಮ್ ವಾದ
    • 6 ಡ್ರೋನ್ ಗಳಲ್ಲಿ ಪಾಕ್ ನಿಂದ ಪಿಸ್ತೂಲ್, ಹೆರಾಯಿನ್ ಸಾಗಾಟ: ಧರೆಗುರುಳಿಸಿದ ಬಿಎಸ್ ಎಫ್..
    • ಶಿವದೂತ ಗುಳಿಗೆ ನಾಟಕದ "ಭೀಮರಾವ್" ರಮೇಶ್ ಕಲ್ಲಡ್ಕ ನಿಧನ!
  • Popular Posts

    • 1
      2008 ಮಾಲೆಗಾಂ ಬಾಂಬ್ ಬ್ಲಾಸ್ಟ್ ಪ್ರಕರಣ: ಪ್ರಗ್ಯಾ ಸಿಂಗ್, ಕರ್ನಲ್ ಪುರೋಹಿತ್ ಸೇರಿ 7 ಜನ ದೋಷಮುಕ್ತ!
    • 2
      ಕೇರಳದ ಸನ್ಯಾನಿಸಿಯರಿಗೆ ಜಾಮೀನು ಇಲ್ಲ; ಕಾಂಗ್ರೆಸ್ ಪ್ರತಿಭಟನೆ
    • 3
      ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • 4
      ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • 5
      ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್

  • Privacy Policy
  • Contact
© Tulunadu Infomedia.

Press enter/return to begin your search