• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸ್ಕೂಟರ್ ಓಡಿಸಿದ ಬಾಲಕನ ಪೋಷಕರಿಗೆ ಮೂಡಿಗೆರೆ ನ್ಯಾಯಾಲಯ 25 ಸಾವಿರ ರೂ ದಂಡ!

Tulunadu News Posted On April 18, 2025
0


0
Shares
  • Share On Facebook
  • Tweet It

ಪ್ರಾಪ್ತ ವಯಸ್ಸಿಗೆ ಬರದ ಮಕ್ಕಳಿಗೆ ರಸ್ತೆಯಲ್ಲಿ ವಾಹನ ಚಲಾಯಿಸಲು ಪೋಷಕರು ನೀಡಬಾರದು ಎನ್ನುವ ಜಾಗೃತಿಯನ್ನು ಎಷ್ಟೇ ಮೂಡಿಸಿದರೂ ಹಲವು ಬಾರಿ ಏನಾಗುವುದಿಲ್ಲ ಎನ್ನುವ ಭಂಡ ಧೈರ್ಯದಿಂದ ಹೆತ್ತವರು ಮಕ್ಕಳ ಕೈಯಲ್ಲಿ ವಾಹನ ನೀಡುತ್ತಾರೆ. ಇಲ್ಲೇ ಹತ್ತಿರ ಸಾಮಾನು ತರಲು ಕಳಿಸಿದ್ವಿ, ಹತ್ತಿರದಲ್ಲಿ ಸಂಬಂಧಿಕರನ್ನು ಡ್ರಾಪ್ ಮಾಡಲು ತೆಗೆದುಕೊಂಡು ಹೋಗಿದ್ದ ಹೀಗೆ ಹತ್ತಾರು ಕಾರಣಗಳನ್ನು ಪೋಷಕರು ನೀಡುತ್ತಾರೆ.

ಏನಾದರೂ ಹೆಚ್ಚು ಕಡಿಮೆ ಆಗದಿದ್ರೆ ಆಗ ಯಾರೂ ಮಾತನಾಡುವುದಿಲ್ಲ. ಅದೇ ಏನಾದರೂ ಅಪಘಾತವಾಗಿ ಅಪ್ರಾಪ್ತನ ಜೀವಕ್ಕೆ ತೊಂದರೆಯಾದರೆ ಆಗ ರಸ್ತೆಯಲ್ಲಿ ವಾಹನ ಚಾಲನೆ ಮಾಡುತ್ತಿದ್ದ ಬೇರೆಯವರ ಮೇಲೆ ದೂರು ಹಾಕುತ್ತಾರೆ. ಇದರಿಂದ ಎಲ್ಲರಿಗೂ ತೊಂದರೆ ಕಟ್ಟಿಟ್ಟ ಬುತ್ತಿ. ಆದ್ದರಿಂದ ಟ್ರಾಫಿಕ್ ಪೊಲೀಸರು ಆದಷ್ಟು ಅಪ್ತಾಪ್ತ ವಯಸ್ಸಿನ ಬಾಲಕರು ಸ್ಕೂಟರ್ ಅಥವಾ ಕಾರು ಚಲಾಯಿಸಿಕೊಂಡು ಹೋಗುವಾಗ ಸೂಕ್ತ ಕ್ರಮ ಕೈಗೊಂಡರೆ ಆಗ ಇಂತಹ ಯಾವುದೇ ದುರ್ಘಟನೆಯನ್ನು ತಪ್ಪಿಸಬಹುದು.

ಆದರೆ ಅನೇಕ ಸಂದರ್ಭದಲ್ಲಿ ಅಪ್ರಾಪ್ತರು ವಾಹನ ಚಲಾಯಿಸಿ ಹೋಗುವಾಗ ಪೊಲೀಸರ ಕೈಯಲ್ಲಿ ಸಿಕ್ಕಿಬೀಳುವುದಿಲ್ಲವಾದ್ದರಿಂದ ಹೆಚ್ಚೆಚ್ಚು ಅಪ್ರಾಪ್ತರು ವಾಹನ ಚಲಾಯಿಸುತ್ತಾ ಇರುತ್ತಾರೆ. ಭಾರತದಲ್ಲಿ ಹದಿನೆಂಟು ವಯಸ್ಸು ದಾಟಿದ ನಂತರ ವಾಹನ ಚಲಾವಣೆಯ ಡ್ರೈವಿಂಗ್ ಲೈಸೆನ್ಸ್ ಹೊಂದಿದವರಿಗೆ ಮಾತ್ರ ವಾಹನ ಚಲಾಯಿಸಲು ಅವಕಾಶ ಸಿಗುತ್ತದೆ.

ಒಂದು ವೇಳೆ ಅಪ್ರಾಪ್ತರು ವಾಹನ ಚಲಾಯಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದರೆ ಅಂತಹ ಮಕ್ಕಳ ಪೋಷಕರಿಗೆ 25000 ರೂಪಾಯಿ ದಂಡ ವಿಧಿಸಬಹುದಾಗಿದೆ. ಇನ್ನು ನ್ಯಾಯಾಲಯ ಮೂರು ವರ್ಷಗಳ ತನಕ ಕಾರಾಗೃಹ ಶಿಕ್ಷೆಯನ್ನು ಕೂಡ ವಿಧಿಸಬಹುದಾಗಿದೆ. ಅದರೊಂದಿಗೆ ಅಂತಹ ವಾಹನಗಳ ನೊಂದಾವಣೆ ಕೂಡ ರದ್ದಾಗುತ್ತದೆ. ಅದರೊಂದಿಗೆ ಅಂತಹ ಬಾಲಕ ಅಥವಾ ಬಾಲಕಿ 25 ವರ್ಷ ವಯಸ್ಸಿನ ತನಕ ಡ್ರೈವಿಂಗ್ ಲೈಸೆನ್ಸ್ ಪಡೆಯುವುದರಿಂದ ವಂಚಿತರಾಗಬೇಕಾಗುತ್ತದೆ.

ಮೂಡಿಗೆರೆ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯ ಇಂತಹ ಒಂದು ಪ್ರಕರಣದಲ್ಲಿ ಪೋಷಕರಿಗೆ 25000 ರೂಪಾಯಿ ದಂಡ ವಿಧಿಸಿ ಹೀಗೆ ಮಕ್ಕಳ ಕೈಗೆ ವಾಹನ ನೀಡುವ ಪೋಷಕರಿಗೆ ಎಚ್ಚರಿಕೆಯ ಗಂಟ ರವಾನಿಸಿದೆ.
ಮೂಡಿಗೆರೆ ಪಟ್ಟಣದ ಬಾಪು ನಗರದಲ್ಲಿ ಏಪ್ರಿಲ್ 4 ರಂದು ಬಾಲಕ ಸ್ಕೂಟರ್ ಚಾಲನೆ ಮಾಡುತ್ತಿದ್ದಾಗ ಪೊಲೀಸರು ತಡೆದು ದ್ವಿಚಕ್ರ ವಾಹನ ವಶಕ್ಕೆ ಪಡೆದಿದ್ದರು. ಸ್ಕೂಟರ್ ಚಾಲನೆ ಮಾಡಲು ಅವಕಾಶ ನೀಡಿದ ಬಾಲಕನ ತಂದೆ ಮೊಹಮ್ಮದ್ ಸಿರಾಜ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ದಂಡ ವಿಧಿಸಿ ಆದೇಶಿಸಿದೆ.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search