• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಶ್ರೀರಾಮ ಸೇನೆಯಿಂದ ನೂರಕ್ಕೂ ಹೆಚ್ಚು ಹೆಣ್ಣುಮಕ್ಕಳಿಗೆ ತ್ರಿಶೂಲ ವಿತರಣೆ!

Tulunadu News Posted On April 19, 2025
0


0
Shares
  • Share On Facebook
  • Tweet It

ಹುಬ್ಬಳ್ಳಿಯಲ್ಲಿ ರಾಣಿ ಅಬ್ಬಕ್ಕ 500 ನೇ ಜಯಂತಿ, ರಾಣಿ ಚೆನ್ನಮ್ಮ 200 ನೇ ಜಯಂತಿ, ನೇಹಾ ಹಿರೇಮಠಗೆ ವಾರ್ಷಿಕ ಶ್ರದ್ಧಾಂಜಲಿ, ತ್ರಿಶೂಲ ದೀಕ್ಷೆ, ಲವ್ ಜಿಹಾದ್ ಪುಸ್ತಕ ಹಾಗೂ ಯೂಟ್ಯೂಬ್ ವಿಡಿಯೋ ಬಿಡುಗಡೆ ಕಾರ್ಯಕ್ರಮದಲ್ಲಿ ನೂರಾರು ಮಹಿಳೆಯರಿಗೆ ಶ್ರೀರಾಮಸೇನೆಯಿಂದ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತ್ರಿಶೂಲ ವಿತರಿಸಿದರು.

ನಾವು ನೀಡುತ್ತಿರುವ ತ್ರಿಶೂಲ ಬಗ್ಗೆ ಯಾರೂ ಭಯ ಪಡಬೇಡಿ. ಹಿಡಿಕೆ ಬಿಟ್ಟು ಆರು ಇಂಚು ಉದ್ದ ಇದ್ದರೆ ಅದು ಆಯುಧವಾಗುತ್ತದೆ. ಆದರೆ ನಾವು ನೀಡುತ್ತಿರುವುದು ಮೂರು ಇಂಚಿನ ತ್ರಿಶೂಲ ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ನೇಹಾ ಹೀರೆಮಠ ಕೊಲೆಯಾಗಿ ವರ್ಷವಾದರೂ ನ್ಯಾಯ ಸಿಕ್ಕಿಲ್ಲ. ಆರೋಪಿ ಜೈಲಿನಲ್ಲಿ ಆರಾಮವಾಗಿ ಕಾಲ ಕಳೆಯುತ್ತಿದ್ದಾನೆ. ಆತನಿಗೆ ಶಿಕ್ಷೆಯಾಗಿಲ್ಲ ಯಾಕೆ ಎಂದು ಪ್ರಮೋದ್ ಮುತಾಲಿಕ್ ಪ್ರಶ್ನಿಸಿದರು. ನೇಹಾ ಹತ್ಯೆಯಾದ ಸಂದರ್ಭದಲ್ಲಿ ಮೂರೇ ತಿಂಗಳಲ್ಲಿ ಶಿಕ್ಷೆ ಆಗುವಂತೆ ಕ್ರಮಕೈಗೊಳ್ಳುವುದಾಗಿ ಮುಖ್ಯಮಂತ್ರಿ ಹೇಳಿದ್ದರು. 1 ವರ್ಷವಾದರೂ ಶಿಕ್ಷೆ ಆಗಿಲ್ಲ. ಸಿದ್ಧರಾಮಯ್ಯನವರೇ ನಿದ್ದೆ ಮಾಡುತ್ತಿದ್ದೀರಾ ಎಂದು ಪ್ರಶ್ನಿಸಿದ ಅವರು ಹುಬ್ಬಳ್ಳಿಯ ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಎನ್ ಕೌಂಟರ್ ಆದಂತೆ ಉಳಿದ ಪ್ರಕರಣಗಳಲ್ಲಿಯೂ ತ್ವರಿತ ನ್ಯಾಯದಾನ ಆಗಬೇಕು. ನೇಹಾ ಹತ್ಯೆ ಆರೋಪಿಗೆ ಶೀಘ್ರ ಗಲ್ಲುಶಿಕ್ಷೆ ವಿಧಿಸಬೇಕು ಎಂದು ಅವರು ಹೇಳಿದರು.

ಶ್ರೀರಾಮ ಸೇನೆಯವರು ನೀಡಿದ ತ್ರಿಶೂಲವನ್ನು ಮಹಿಳೆಯರು ಬ್ಯಾಗಿನಲ್ಲಿ ಇಟ್ಟುಕೊಳ್ಳಿ. ತೊಂದರೆ ಕೊಟ್ಟವರಿಗೆ ಅವರಿಂದ ಚುಚ್ಚಿ. ಪೊಲೀಸರು, ಸರಕಾರ, ಮಹಿಳೆಯರ ರಕ್ಷಣೆ ನೀಡುತ್ತಿಲ್ಲ. ಹೀಗಾಗಿ ಇದು ಅನಿವಾರ್ಯ. ನಾವೇ ರಕ್ಷಣೆ ಮಾಡಿಕೊಳ್ಳಬೇಕು. ನಮ್ಮ ಹೆಣ್ಣು ಮಕ್ಕಳನ್ನು ನಾವೇ ದುರ್ಗಾಮಾತೆಯರಾಗಿ ರಕ್ಷಣೆ ಮಾಡಿಕೊಳ್ಳಬೇಕು ಎಂದರು. ಆಯುಧ ಪೂಜೆಯಂದು ಚಾಕು, ಕೊಡಲಿ, ತ್ರಿಶೂಲಕ್ಕೆ ಪೂಜೆ ಮಾಡಿ ಎಂದರು. ಕಾರ್ಯಕ್ರಮದಲ್ಲಿ ಲವ್ ಜಿಹಾದ್ ಸಂತ್ರಸ್ತರು ತಮ್ಮ ಕಹಿ ಅನುಭವಗಳನ್ನು ಬಿಚ್ಚಿಟ್ಟರು. ಈ ವೇಳೆ ಮಹಿಳಾ ವಕೀಲರಿಂದ ಕಾನೂನು ತಿಳುವಳಿಕೆ ನೀಡಲಾಯಿತು. ರಾಣಿ ಅಬ್ಬಕ್ಕ, ಕಿತ್ತೂರು ಚೆನ್ನಮ್ಮ, ನೇಹಾ ಹಿರೇಮಠ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.

0
Shares
  • Share On Facebook
  • Tweet It




Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • 2
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!

  • Privacy Policy
  • Contact
© Tulunadu Infomedia.

Press enter/return to begin your search