• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಟೀಕೆಗಳಿಗೆ ಅಳುಕಬೇಡಿ ಎಂದು ಡಾ. ವಿರೇಂದ್ರ ಹೆಗ್ಗಡೆಯವರಿಗೆ ಧೈರ್ಯ ನೀಡಿದ ಡಿಸಿಎಂ ಡಿಕೆಶಿ!

Tulunadu News Posted On April 21, 2025
0


0
Shares
  • Share On Facebook
  • Tweet It

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವಿರೇಂದ್ರ ಹೆಗ್ಗಡೆಯವರು ಟೀಕೆಗಳಿಗೆ ಅಂಜಬೇಕಾಗಿಲ್ಲ, ಅಳುಕಬೇಕಾಗಿಲ್ಲ. ನಿಮ್ಮ ಜೊತೆ ನಾವಿದ್ದೇವೆ. ತಮ್ಮ ಹಾಗೂ ಕ್ಷೇತ್ರ ರಕ್ಷಣೆಗೆ ನಾವೆಲ್ಲ ಸಿದ್ಧ. ಟೀಕೆಗಳು ತಾತ್ಕಾಲಿಕವಾಗಿದ್ದು, ಅಲ್ಪಕಾಲದಲ್ಲಿ ಸಾಯುತ್ತವೆ. ನಾವು ಮಾಡುವ ಸೇವಾಕಾರ್ಯಗಳು ಶಾಶ್ವತವಾಗಿರುತ್ತವೆ ಎಂದು ಕರ್ನಾಟಕದ ಉಪಮುಖ್ಯಮಂತ್ರಿ, ಕಾಂಗ್ರೆಸ್ ಪಕ್ಷದ ಕರ್ನಾಟಕದ ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಅವರು ಧರ್ಮಸ್ಥಳದಲ್ಲಿ ಶ್ರೀ ಉಮಾಮಹೇಶ್ವರ, ಶ್ರೀ ಶಿವಪಾರ್ವತಿ ಮತ್ತು ಶ್ರೀ ಗೌರಿಶಂಕರ ಎಂಬ ಮೂರು ನೂತನ ಕಲ್ಯಾಣ ಮಂಟಪಗಳ ಸಮುಚ್ಚಯವನ್ನು ಉದ್ಘಾಟಿಸಿ ಮಾತನಾಡಿದರು. ಅಧಿಕಾರ ಬರುತ್ತದೆ, ಹೋಗುತ್ತದೆ, ಇಲ್ಲಿ ಯಾವುದೂ ಶಾಶ್ವತವಲ್ಲ. ದೇವರಿಗೂ ಎಲ್ಲರಿಗೂ ಅವಕಾಶ ಕೊಡುತ್ತಾನೆ. ಅದನ್ನು ಸದುಪಯೋಗ ಮಾಡಿ ಉನ್ನತ ಸಾಧನೆ ಮಾಡುವುದು ನಮ್ಮ ಉದ್ದೇಶವಾಗಿರಬೇಕು ಎಂದು ಡಿಕೆ ಶಿವಕುಮಾರ್ ಹೇಳಿದರು.

ದೇವರಲ್ಲಿ ಶ್ರದ್ಧಾ ಭಕ್ತಿಯಿಂದ ನಂಬಿಕೆ ಇಟ್ಟು ಪ್ರಾರ್ಥನೆ ಮಾಡಿದಾಗ ನಮ್ಮ ಇಷ್ಟಾರ್ಥಗಳು ಸುಲಲಿತವಾಗಿ ಈಡೇರುತ್ತವೆ. ಪರಸ್ಪರ ಪ್ರೀತಿ – ವಿಶ್ವಾಸದೊಂದಿಗೆ ಮನುಷ್ಯತ್ವದಿಂದ ಸಾರ್ಥಕ ಜೀವನ ನಡೆಸಿದಾಗ ಮೋಕ್ಷ ಸಾಧನೆ ಸಾಧ್ಯವಾಗುತ್ತದೆ ಎಂದರು.

ಧರ್ಮಾಧಿಕಾರಿ ಡಿ ವಿರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಿದ್ದರು. ಉಪಮುಖ್ಯಮಂತ್ರಿ ಡಿ .ಕೆ. ಶಿವಕುಮಾರ್ ಅವರನ್ನು ಹೆಗ್ಗಡೆಯವರು ಕ್ಷೇತ್ರದ ವತಿಯಿಂದ ಗೌರವಿಸಿದರು.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search