• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಒಂದು ದೇಗುಲ, ಬಾವಿ, ಸ್ಮಶಾನ- ಹಿಂದೂಗಳಿಗೆ ಭಾಗವತ್ ಏಕತೆ ಮಂತ್ರ!

Tulunadu News Posted On April 21, 2025
0


0
Shares
  • Share On Facebook
  • Tweet It

ಜಾತಿ ತಾರತಮ್ಯಕ್ಕೆ ಅಂತ್ಯ ಹಾಡಿ, ಸಾಮರಸ್ಯ ಬೆಳೆಸಲು ಹಿಂದೂ ಸಮುದಾಯವು ” ಒಂದು ಮಂದಿರ, ಒಂದು ಬಾವಿ, ಒಂದು ಸ್ಮಶಾನ ” ತತ್ವವನ್ನು ಅಳವಡಿಸಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಮೋಹನ್ ಭಾಗವತ್ ಅವರು ಕರೆ ನೀಡಿದ್ದಾರೆ.

ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡಿದ ಭಾಗವತ್ ” ಶಾಂತಿಯ ಪ್ರತಿ ಭಾರತ ತನ್ನ ಜವಾಬ್ದಾರಿ ಪೂರೈಸಲು ಸಾಮಾಜಿಕ ಏಕತೆ ಸಾಧಿಸುವುದು ಮುಖ್ಯ. ಸಂಸ್ಕಾರಗಳು ಹಿಂದೂ ಸಮಾಜದ ಮೂಲವಾಗಿದ್ದು, ಸಂಪ್ರದಾಯ, ಸಾಂಸ್ಕೃತಿಕ ಮೌಲ್ಯ ಮತ್ತು ನೈತಿಕ ತತ್ವಗಳುಳ್ಳ ಸಮಾಜವನ್ನು ನಿರ್ಮಿಸಬೇಕು. ರಾಷ್ಟ್ರೀಯತೆ ಮತ್ತು ಸಾಮಾಜಿಕ ಒಗ್ಗಟ್ಟಿನ ಅಡಿಪಾಯವನ್ನು ಭದ್ರಗೊಳಿಸಲು ಹಬ್ಬಗಳ ಸಾಮೂಹಿಕ ಆಚರಣೆ ಅಗತ್ಯ ಎಂದು ಹೇಳಿದರು. ಅವರು ತಮ್ಮ ಸ್ವಯಂ ಸೇವಕರಿಗೆ ಎಲ್ಲಾ ಜಾತಿ ವರ್ಗದವರೊಂದಿಗೆ ಮುಕ್ತವಾಗಿ ಬೆರೆಯಲು ಕರೆ ನೀಡಿ ಬೇರೆ ಜಾತಿಯವರನ್ನು ಕೂಡ ನಿಮ್ಮ ಮನೆಯ ಕಾರ್ಯಕ್ರಮಗಳಿಗೆ ಆಮಂತ್ರಿಸಿ, ಈ ಮೂಲಕ ತಳಮಟ್ಟದಲ್ಲಿಯೂ ಪ್ರೀತಿ, ವಿಶ್ವಾಸ ಗಟ್ಟಿಯಾಗಲಿ ಎಂದು ಕಿವಿ ಮಾತು ಹೇಳಿದರು.

ಹಿಂದೂಗಳು ಜಾತಿ, ಜಾತಿಗಳ ನಡುವೆ ಒಡೆದು ಹೋಗಿರುವುದರಿಂದ ಒಗ್ಗಟ್ಟಿನ ಕೊರತೆ ಇದೆ ಎನ್ನುವ ಅಂಶಗಳು ಭಾಗವತ್ ಅವರ ಹೇಳಿಕೆಯಿಂದ ಮತ್ತೊಮ್ಮೆ ಸ್ಪಷ್ಟವಾಗಿದೆ. ಹಿಂದೂಗಳಲ್ಲಿರುವ ಅನೇಕ ಜಾತಿಗಳು, ಆ ಜಾತಿಗಳಲ್ಲಿರುವ ಅನೇಕ ದೇವಾಲಯಗಳು, ಆ ದೇವಾಲಯಗಳಲ್ಲಿರುವ ಅನೇಕ ಆಚರಣೆಗಳು, ಆಯಾ ಆಚರಣೆಗಳಲ್ಲಿ ಆಯಾ ಜಾತಿಯವರು ಮಾತ್ರ ಭಾಗವಹಿಸುವುದರ ಬದಲು ಎಲ್ಲಾ ಜಾತಿಯವರು ಎಲ್ಲಾ ಆಚರಣೆಗಳಲ್ಲಿ ಭಾಗವಹಿಸುವುದರಿಂದ ಪರಸ್ಪರ ಏಕತೆ ಉಂಟಾಗುತ್ತದೆ ಎನ್ನುವ ವಿಷಯವನ್ನು ಅವರು ಮತ್ತೊಮ್ಮೆ ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದಾರೆ. ಇಲ್ಲದೇ ಹೋದರೆ ಕೆಲವರು ನಮ್ಮನ್ನು ವಿಭಜಿಸಿ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಾರೆ ಎನ್ನುವುದು ಅವರ ಒಟ್ಟು ಮಾತಿನ ತಾತ್ಪರ್ಯವೂ ಆಗಿರಬಹುದು.

ಆದರೆ ಈ ನಡುವೆ ಭಾರತೀಯ ಜನತಾ ಪಾರ್ಟಿ ಹಾಗೂ ಆರ್ ಎಸ್ ಎಸ್ ವಕ್ಫ್ ತಿದ್ದುಪಡಿ ತರುವ ಮೂಲಕ ಜನರ ನಡುವೆ ಬಿರುಕು ಉಂಟು ಮಾಡಿವೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search