• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಒಂದು ದೇಗುಲ, ಬಾವಿ, ಸ್ಮಶಾನ- ಹಿಂದೂಗಳಿಗೆ ಭಾಗವತ್ ಏಕತೆ ಮಂತ್ರ!

Tulunadu News Posted On April 21, 2025
0


0
Shares
  • Share On Facebook
  • Tweet It

ಜಾತಿ ತಾರತಮ್ಯಕ್ಕೆ ಅಂತ್ಯ ಹಾಡಿ, ಸಾಮರಸ್ಯ ಬೆಳೆಸಲು ಹಿಂದೂ ಸಮುದಾಯವು ” ಒಂದು ಮಂದಿರ, ಒಂದು ಬಾವಿ, ಒಂದು ಸ್ಮಶಾನ ” ತತ್ವವನ್ನು ಅಳವಡಿಸಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಮೋಹನ್ ಭಾಗವತ್ ಅವರು ಕರೆ ನೀಡಿದ್ದಾರೆ.

ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡಿದ ಭಾಗವತ್ ” ಶಾಂತಿಯ ಪ್ರತಿ ಭಾರತ ತನ್ನ ಜವಾಬ್ದಾರಿ ಪೂರೈಸಲು ಸಾಮಾಜಿಕ ಏಕತೆ ಸಾಧಿಸುವುದು ಮುಖ್ಯ. ಸಂಸ್ಕಾರಗಳು ಹಿಂದೂ ಸಮಾಜದ ಮೂಲವಾಗಿದ್ದು, ಸಂಪ್ರದಾಯ, ಸಾಂಸ್ಕೃತಿಕ ಮೌಲ್ಯ ಮತ್ತು ನೈತಿಕ ತತ್ವಗಳುಳ್ಳ ಸಮಾಜವನ್ನು ನಿರ್ಮಿಸಬೇಕು. ರಾಷ್ಟ್ರೀಯತೆ ಮತ್ತು ಸಾಮಾಜಿಕ ಒಗ್ಗಟ್ಟಿನ ಅಡಿಪಾಯವನ್ನು ಭದ್ರಗೊಳಿಸಲು ಹಬ್ಬಗಳ ಸಾಮೂಹಿಕ ಆಚರಣೆ ಅಗತ್ಯ ಎಂದು ಹೇಳಿದರು. ಅವರು ತಮ್ಮ ಸ್ವಯಂ ಸೇವಕರಿಗೆ ಎಲ್ಲಾ ಜಾತಿ ವರ್ಗದವರೊಂದಿಗೆ ಮುಕ್ತವಾಗಿ ಬೆರೆಯಲು ಕರೆ ನೀಡಿ ಬೇರೆ ಜಾತಿಯವರನ್ನು ಕೂಡ ನಿಮ್ಮ ಮನೆಯ ಕಾರ್ಯಕ್ರಮಗಳಿಗೆ ಆಮಂತ್ರಿಸಿ, ಈ ಮೂಲಕ ತಳಮಟ್ಟದಲ್ಲಿಯೂ ಪ್ರೀತಿ, ವಿಶ್ವಾಸ ಗಟ್ಟಿಯಾಗಲಿ ಎಂದು ಕಿವಿ ಮಾತು ಹೇಳಿದರು.

ಹಿಂದೂಗಳು ಜಾತಿ, ಜಾತಿಗಳ ನಡುವೆ ಒಡೆದು ಹೋಗಿರುವುದರಿಂದ ಒಗ್ಗಟ್ಟಿನ ಕೊರತೆ ಇದೆ ಎನ್ನುವ ಅಂಶಗಳು ಭಾಗವತ್ ಅವರ ಹೇಳಿಕೆಯಿಂದ ಮತ್ತೊಮ್ಮೆ ಸ್ಪಷ್ಟವಾಗಿದೆ. ಹಿಂದೂಗಳಲ್ಲಿರುವ ಅನೇಕ ಜಾತಿಗಳು, ಆ ಜಾತಿಗಳಲ್ಲಿರುವ ಅನೇಕ ದೇವಾಲಯಗಳು, ಆ ದೇವಾಲಯಗಳಲ್ಲಿರುವ ಅನೇಕ ಆಚರಣೆಗಳು, ಆಯಾ ಆಚರಣೆಗಳಲ್ಲಿ ಆಯಾ ಜಾತಿಯವರು ಮಾತ್ರ ಭಾಗವಹಿಸುವುದರ ಬದಲು ಎಲ್ಲಾ ಜಾತಿಯವರು ಎಲ್ಲಾ ಆಚರಣೆಗಳಲ್ಲಿ ಭಾಗವಹಿಸುವುದರಿಂದ ಪರಸ್ಪರ ಏಕತೆ ಉಂಟಾಗುತ್ತದೆ ಎನ್ನುವ ವಿಷಯವನ್ನು ಅವರು ಮತ್ತೊಮ್ಮೆ ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದಾರೆ. ಇಲ್ಲದೇ ಹೋದರೆ ಕೆಲವರು ನಮ್ಮನ್ನು ವಿಭಜಿಸಿ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಾರೆ ಎನ್ನುವುದು ಅವರ ಒಟ್ಟು ಮಾತಿನ ತಾತ್ಪರ್ಯವೂ ಆಗಿರಬಹುದು.

ಆದರೆ ಈ ನಡುವೆ ಭಾರತೀಯ ಜನತಾ ಪಾರ್ಟಿ ಹಾಗೂ ಆರ್ ಎಸ್ ಎಸ್ ವಕ್ಫ್ ತಿದ್ದುಪಡಿ ತರುವ ಮೂಲಕ ಜನರ ನಡುವೆ ಬಿರುಕು ಉಂಟು ಮಾಡಿವೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search