• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಒಂದು ದೇಗುಲ, ಬಾವಿ, ಸ್ಮಶಾನ- ಹಿಂದೂಗಳಿಗೆ ಭಾಗವತ್ ಏಕತೆ ಮಂತ್ರ!

Tulunadu News Posted On April 21, 2025
0


0
Shares
  • Share On Facebook
  • Tweet It

ಜಾತಿ ತಾರತಮ್ಯಕ್ಕೆ ಅಂತ್ಯ ಹಾಡಿ, ಸಾಮರಸ್ಯ ಬೆಳೆಸಲು ಹಿಂದೂ ಸಮುದಾಯವು ” ಒಂದು ಮಂದಿರ, ಒಂದು ಬಾವಿ, ಒಂದು ಸ್ಮಶಾನ ” ತತ್ವವನ್ನು ಅಳವಡಿಸಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಮೋಹನ್ ಭಾಗವತ್ ಅವರು ಕರೆ ನೀಡಿದ್ದಾರೆ.

ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡಿದ ಭಾಗವತ್ ” ಶಾಂತಿಯ ಪ್ರತಿ ಭಾರತ ತನ್ನ ಜವಾಬ್ದಾರಿ ಪೂರೈಸಲು ಸಾಮಾಜಿಕ ಏಕತೆ ಸಾಧಿಸುವುದು ಮುಖ್ಯ. ಸಂಸ್ಕಾರಗಳು ಹಿಂದೂ ಸಮಾಜದ ಮೂಲವಾಗಿದ್ದು, ಸಂಪ್ರದಾಯ, ಸಾಂಸ್ಕೃತಿಕ ಮೌಲ್ಯ ಮತ್ತು ನೈತಿಕ ತತ್ವಗಳುಳ್ಳ ಸಮಾಜವನ್ನು ನಿರ್ಮಿಸಬೇಕು. ರಾಷ್ಟ್ರೀಯತೆ ಮತ್ತು ಸಾಮಾಜಿಕ ಒಗ್ಗಟ್ಟಿನ ಅಡಿಪಾಯವನ್ನು ಭದ್ರಗೊಳಿಸಲು ಹಬ್ಬಗಳ ಸಾಮೂಹಿಕ ಆಚರಣೆ ಅಗತ್ಯ ಎಂದು ಹೇಳಿದರು. ಅವರು ತಮ್ಮ ಸ್ವಯಂ ಸೇವಕರಿಗೆ ಎಲ್ಲಾ ಜಾತಿ ವರ್ಗದವರೊಂದಿಗೆ ಮುಕ್ತವಾಗಿ ಬೆರೆಯಲು ಕರೆ ನೀಡಿ ಬೇರೆ ಜಾತಿಯವರನ್ನು ಕೂಡ ನಿಮ್ಮ ಮನೆಯ ಕಾರ್ಯಕ್ರಮಗಳಿಗೆ ಆಮಂತ್ರಿಸಿ, ಈ ಮೂಲಕ ತಳಮಟ್ಟದಲ್ಲಿಯೂ ಪ್ರೀತಿ, ವಿಶ್ವಾಸ ಗಟ್ಟಿಯಾಗಲಿ ಎಂದು ಕಿವಿ ಮಾತು ಹೇಳಿದರು.

ಹಿಂದೂಗಳು ಜಾತಿ, ಜಾತಿಗಳ ನಡುವೆ ಒಡೆದು ಹೋಗಿರುವುದರಿಂದ ಒಗ್ಗಟ್ಟಿನ ಕೊರತೆ ಇದೆ ಎನ್ನುವ ಅಂಶಗಳು ಭಾಗವತ್ ಅವರ ಹೇಳಿಕೆಯಿಂದ ಮತ್ತೊಮ್ಮೆ ಸ್ಪಷ್ಟವಾಗಿದೆ. ಹಿಂದೂಗಳಲ್ಲಿರುವ ಅನೇಕ ಜಾತಿಗಳು, ಆ ಜಾತಿಗಳಲ್ಲಿರುವ ಅನೇಕ ದೇವಾಲಯಗಳು, ಆ ದೇವಾಲಯಗಳಲ್ಲಿರುವ ಅನೇಕ ಆಚರಣೆಗಳು, ಆಯಾ ಆಚರಣೆಗಳಲ್ಲಿ ಆಯಾ ಜಾತಿಯವರು ಮಾತ್ರ ಭಾಗವಹಿಸುವುದರ ಬದಲು ಎಲ್ಲಾ ಜಾತಿಯವರು ಎಲ್ಲಾ ಆಚರಣೆಗಳಲ್ಲಿ ಭಾಗವಹಿಸುವುದರಿಂದ ಪರಸ್ಪರ ಏಕತೆ ಉಂಟಾಗುತ್ತದೆ ಎನ್ನುವ ವಿಷಯವನ್ನು ಅವರು ಮತ್ತೊಮ್ಮೆ ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದಾರೆ. ಇಲ್ಲದೇ ಹೋದರೆ ಕೆಲವರು ನಮ್ಮನ್ನು ವಿಭಜಿಸಿ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಾರೆ ಎನ್ನುವುದು ಅವರ ಒಟ್ಟು ಮಾತಿನ ತಾತ್ಪರ್ಯವೂ ಆಗಿರಬಹುದು.

ಆದರೆ ಈ ನಡುವೆ ಭಾರತೀಯ ಜನತಾ ಪಾರ್ಟಿ ಹಾಗೂ ಆರ್ ಎಸ್ ಎಸ್ ವಕ್ಫ್ ತಿದ್ದುಪಡಿ ತರುವ ಮೂಲಕ ಜನರ ನಡುವೆ ಬಿರುಕು ಉಂಟು ಮಾಡಿವೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!
  • Popular Posts

    • 1
      ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • 2
      ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!

  • Privacy Policy
  • Contact
© Tulunadu Infomedia.

Press enter/return to begin your search