• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಭಿಪ್ರಾಯ

ರ್ಯಾಲಿ ನಡೆದರೂ, ನಿಂತರೂ ಬಿಜೆಪಿಗೇ ಲಾಭ!

TNN Correspondent Posted On September 4, 2017
0


0
Shares
  • Share On Facebook
  • Tweet It

ರಾಜ್ಯದಲ್ಲಿ ನಿರಂತರ ನಡೆಯುತ್ತಿರುವ ಹಿಂದೂ ಕಾರ್ಯಕರ್ತರ ಹತ್ಯೆ ಖಂಡಿಸಿ ಹಾಗೂ ಪಿಎಫ್‌ಐ, ಎಸ್‌ಡಿಪಿಐ, ಕೆಎಫ್‌ಡಿ ಸಂಘಟನೆ ನಿಷೇಧಿಸಲು ಒತ್ತಾಯಿಸಿ ಬಿಜೆಪಿ ಯುವ ಮೋರ್ಚಾ ನಡೆಸಲು ಉದ್ದೇಶಿಸಿರುವ ಮಂಗಳೂರು ಚಲೋ ಬೈಕ್ ರ್ಯಾಲಿಯನ್ನು ರಾಜ್ಯಸರಕಾರ ಹೇಗಾದರೂ ಮಾಡಿ ನಿಲ್ಲಿಸಬೇಕು ಎಂಬ ಪ್ರಯತ್ನ ಪಡುತ್ತಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ. ಅದಕ್ಕೆ ಪೂರಕವಾಗಿ ನಿನ್ನೆ ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದಿದ್ದ ಪತ್ರಿಿಕಾ ಘೋಷ್ಠಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಕೂಡ ಸರಕಾರ ಜಾಥಾಗೆ ಅನುಮತಿ ನೀಡಲು ಮೀನಮೇಷ ಎಣಿಸುತ್ತಿದೆ, ಅನುಮತಿ ನೀಡಲಾಗಿದೆ ಎಂದೂ ಹೇಳಿಲ್ಲ ನಿರಾಕರಣೆಯನ್ನೂ ಮಾಡಿಲ್ಲ, ಕೊನೆ ಕ್ಷಣದಲ್ಲಿ ಅನುಮತಿ ನಿರಾಕರಿಸಿದರೂ ಕೂಡ ಪ್ರತಿಭಟನೆ ಹಾಗೂ ರ್ಯಾಲಿ ನಡೆಸಿಯೇ ಸಿದ್ಧ ಎಂದು ಹೇಳಿದ್ದಾರೆ.

ಯಾರಿಗೆ ಲಾಭ ಯಾರಿಗೆ ನಷ್ಟ?
ಪ್ರತಿಭಟನೆ ಒತ್ತಾಯಪೂರ್ವಕವಾಗಿ ನಿಲ್ಲಿಸಲು ಪ್ರಯತ್ನಿಸಿದರೆ ಬಿಜೆಪಿ ಕಾರ್ಯಕರ್ತರ ವಾಹನಗಳ ಪೆಟ್ರೋಲೂ ಉಳಿಯುತ್ತದೆ, ರಾಜಕೀಯವಾಗಿ ಮೈಲೇಜೂ ಸಿಗುತ್ತದೆ. ರಾಜ್ಯ ಸರಕಾರ ಪ್ರತಿಭಟನೆ ಹತ್ತಿಕ್ಕಲು ಯಶಸ್ವಿಯಾದರೂ ರಾಜಕೀಯವಾಗಿ ನಷ್ಟವಾಗುವುದಂತೂ ಖಂಡಿತ. ಸಂಸದರಾದ ಪ್ರತಾಪ್ ಸಿಂಹ ಹಾಗೂ ನಳಿನ್ ಕುಮಾರ್ ಕಟೀಲ್ ನಿಲುವು ನೋಡಿದಾಗ ಕೊನೆಕ್ಷಣದಲ್ಲಿ ಸಿದ್ದರಾಮಯ್ಯ ಸರಕಾರ ಪ್ರತಿಭಟನೆ ತಡೆಯುವ ಕಾರ್ಯತಂತ್ರ ರೂಪಿಸಿದರೆ ಅದಕ್ಕೆ ಪ್ರತಿಯಾಗಿ ತಂತ್ರಗಾರಿಕೆ ಮೂಲಕ ಪ್ರತಿಭಟನೆ ರೂಪುರೇಷೆಗಳನ್ನು ಮೊದಲೇ ತಯಾರು ಮಾಡಿದಂತಿದೆ. ಆ ಮೂಲಕ ಯಾವ ಸನ್ನಿವೇಶ ಎದುರಾದರೂ ಪ್ರತಿಭಟನೆ ನಡೆಸಿಯೇ ತೀರುತ್ತೇವೆ ಎಂಬ ಪಣ ತೊಟ್ಟಂತಿದೆ.

ರಾಜ್ಯಸರಕಾರ ಏನು ಮಾಡಬಹುದು?
ರಾಜ್ಯ ಸರಕಾರವು ಅನುಮತಿ ನೀಡದೇ ಇರುವ ನೆಪ ಒಡ್ಡಿ ರ್ಯಾಲಿ ಮಂಗಳೂರು ತಲುಪುವ ಮೊದಲೇ ದಾರಿಯಲ್ಲಿ ತಡೆಯಲು ಯತ್ನಿಸಬಹುದು. ಗ್ರಹ ಮಂತ್ರಿಗಳ ಮೂಲಕ ಹೇಳಿಕೆ, ಎಚ್ಚರಿಕೆ ನೀಡಿ ಪ್ರತಿಭಟನೆ ಯಶಸ್ವಿಯಾಗದಂತೆ ನೋಡಿಕೊಳ್ಳಬಹುದು. ಹಿಂದಿನ ದಿನವೇ ರಾಜ್ಯದ ಮೂಲೆಗಳಿಂದ ಮಂಗಳೂರು ತಲುಪುವ ದಾರಿಯಲ್ಲಿ ಅಲ್ಲಲ್ಲಿ ಪೋಲಿಸ್ ಬಿಗಿ ಬಂದೋಬಸ್ತ್‌ ಏರ್ಪಡಿಸಿ ಕಾರ್ಯಕರ್ತರಲ್ಲಿ ಭಯದ ವಾತಾವಾರಣ ನಿರ್ಮಾಣ ಮಾಡಬಹುದು. ಅಥವಾ ಪ್ರತಿರೋಧ ವ್ಯಕ್ತಪಡಿಸದೇ ಪ್ರತಿಭಟನೆಗೆ ಅವಕಾಶವನ್ನೂ ನೀಡಬಹುದು.

ಅವಕಾಶ ನೀಡದೇ ಇದ್ದ ಪಕ್ಷ ಬಿಜೆಪಿ ಏನು ಮಾಡಬಹುದು?

ರಾಜ್ಯ ಮೂಲೆ ಮೂಲೆಗಳಿಂದಲೂ ಕಾರ್ಯಕರ್ತರು ಮಂಗಳೂರಿಗೆ ಆಗಮಿಸುವ ಸಂದರ್ಭದಲ್ಲಿ ಮಂಗಳೂರು ಹೊರವಲಯದಲ್ಲಿಯೇ ರ್ಯಾಲಿ ತಡೆದರೆ ಅದೇ ಸ್ಥಳದಲ್ಲಿ ಧ್ವನಿವರ್ಧಕ ಇಟ್ಟು ಸಭೆ ಮಾಡಬಹುದು. ಬಂಧನ ವಿರೋಧಿಸಿ ಪ್ರತಿರೋಧ ಮಾಡಬಹುದು. ಮಂಗಳೂರು ಹೊರಗೆ ಪ್ರತಿಭಟನೆ ತಡೆದರೂ ನಗರದಲ್ಲಿ ಬ್ರಹತ್ ಪ್ರತಿಭಟನೆ ಮೂಲಕ ರಾಜ್ಯಸರಕಾರದ ದಮನ ನೀತಿ ಖಂಡಿಸಿ ಉಗ್ರ ಹೋರಾಟ ಮಾಡಬಹುದು. ಪ್ರತಿಭಟನೆ ಹತ್ತಿಕ್ಕಿದ್ದನ್ನು ವಿರೋಧಿಸಿ ಮುಂದಿನ ದಿನಗಳಲ್ಲಿ ರಾಜಕೀಯ ಅಸ್ತ್ರವಾಗಿ ಬಳಸಿ ಮೈಲೇಜ್ ಗಳಿಸಬಹುದು.

ಒಟ್ಟಿನಲ್ಲಿ ಮಂಗಳೂರು ಚಲೋ ಬೈಕ್ ರ್ಯಾಲಿ ಬಿಜೆಪಿಗಂತೂ ಲಾಭ. ಕಾಂಗ್ರೆಸ್ಸಿಗೆ ಪ್ರತಿಭಟನೆ ನಿಲ್ಲಿಸಿದರೂ ಕಷ್ಟ, ಅನುಮತಿ ನೀಡಿದರೂ ಕಷ್ಟ ಎಂಬ ಧರ್ಮ ಸಂಕಟ. ಮಂಗಳೂರು ಚಲೋ ಕಾಂಗ್ರೆಸ್ಸನ್ನು ಕರ್ನಾಟಕ್ ಸೇ ಚಲೋ ಮಡುತ್ತದೆಯೋ ಎಂದು ಕಾದುನೋಡಬೇಕಾಗಿದೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search