• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಹೆಂಡತಿ ಕೊಂದ ಎಂದು ಗಂಡ ಜೈಲಿನಲ್ಲಿ! 5 ವರ್ಷಗಳ ಬಳಿಕ ಹೆಂಡತಿ ಪ್ರೇಮಿಯೊಂದಿಗೆ ಪತ್ತೆ!

Tulunadu News Posted On April 21, 2025


  • Share On Facebook
  • Tweet It

ಇದು ಯಾವುದೇ ಸಿನೆಮಾಗಿಂತಲೂ ಕಡಿಮೆ ಇಲ್ಲದ ಲವ್ ಸ್ಟೋರಿ. ಇದನ್ನೇ ಇಟ್ಟುಕೊಂಡು ಒಂದು ಸಿನೆಮಾ ಮಾಡಿದರೆ ಬಹಳ ರಸವತ್ತಾದ ನೈಜಕಥೆಯನ್ನು ತೆರೆಯ ಮೇಲೆ ತೋರಿಸಿದ ಹಾಗೆ ಆಗುತ್ತದೆ. ಯಾಕೆಂದರೆ ಇದರಲ್ಲಿ ಎಲ್ಲಾ ರೀತಿಯ ಮಸಾಲೆ ಇದೆ. ಬದುಕೇ ಹೀಗೆನಾ ಅಥವಾ ಅವನ ಗ್ರಹಚಾರವೇ ಹಾಗಿತ್ತಾ? ಒಟ್ಟಿನಲ್ಲಿ ತಾನು ಏನೂ ತಪ್ಪು ಮಾಡದಿದ್ದು ಗಂಡಸೊಬ್ಬ ಜೈಲಿನಲ್ಲಿ ಕಳೆಯುವ ಪರಿಸ್ಥಿತಿ ಬಂದದ್ದೇ ಈ ಸುದ್ದಿಯ ಜೀವಾಳ.

ಅದು ಕರ್ನಾಟಕದ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಬಸವನಹಳ್ಳಿ ಎನ್ನುವ ಗ್ರಾಮ. ಸುರೇಶ್ ಎನ್ನುವ ಒಬ್ಬ ವ್ಯಕ್ತಿ ತನ್ನ ಹೆಂಡತಿಯೊಂದಿಗೆ ಖುಷಿಯಿಂದಲೇ ಜೀವನ ಸಾಗಿಸುತ್ತಿದ್ದ. 2019 ರ ತನಕ ಎಲ್ಲವೂ ಚೆನ್ನಾಗಿಯೇ ಇತ್ತು. ಒಂದು ದಿನ ಹೆಂಡತಿ ಅಚಾನಕ್ ಆಗಿ ಮನೆಯಿಂದ ನಾಪತ್ತೆಯಾಗುತ್ತಾಳೆ. ಸುರೇಶ್ ತನ್ನ ಕುಟುಂಬಸ್ಥರ, ಹಿತೈಷಿಗಳ ಸಹಕಾರದಿಂದ ಎಲ್ಲಾ ಕಡೆ ಹುಡುಕುತ್ತಾನೆ. ಆದರೆ ಆಕೆ ಸಿಗುವುದಿಲ್ಲ. ಮಕ್ಕಳಿಗಾಗಿಯಾದರೂ ಬಾ ಎಂದು ಆತ ಗೋಗರೆದರೂ ಆಕೆ ಬರುವುದಿಲ್ಲ. ನಂತರ ಬೇರೆ ದಾರಿ ಕಾಣದೇ ಆತ ತಾನು ಏನಾದರೂ ಮಾಡಿ ಅವಳನ್ನು ಮುಗಿಸಿರಬಹುದು ಎನ್ನುವ ಶಂಕೆಯಿಂದ ಪೊಲೀಸರು ತನ್ನನ್ನು ಬಂಧಿಸಬಹುದು ಎಂದು ಹೆದರಿ ಕುಶಾಲನಗರ ಠಾಣೆಯಲ್ಲಿ ದೂರು ಕೊಡುತ್ತಾನೆ. 2021 ರಲ್ಲಿ ನಾಪತ್ತೆ ಪ್ರಕರಣ ದಾಖಲಾಗುತ್ತದೆ.

2022 ರಲ್ಲಿ ಪೊಲೀಸರು ಸುರೇಶನನ್ನು ಕರೆದು ನಿನ್ನ ಹೆಂಡತಿ ಮಲ್ಲಿಗೆಯ ಶವದ ಗುರುತು ಪತ್ತೆ ಮಾಡು ಎಂದು ಕರೆಯುತ್ತಾರೆ. ಬೆಟ್ಟದಪುರ ಎನ್ನುವ ಜಾಗದಲ್ಲಿ ತನ್ನ ಅತ್ತೆಯೊಂದಿಗೆ ತೆರಳಿದ ಸುರೇಶ ಅಲ್ಲಿ ಸಿಕ್ಕಿದ ಅಸ್ಥಿಪಂಜರವನ್ನು ನೋಡಿ ಪತ್ನಿಯೆಂದೇ ಎನ್ನುವ ತೀರ್ಮಾನಕ್ಕೆ ಬರುತ್ತಾನೆ. ಅದರಂತೆ ಅದರ ಅಂತಿಮ ಸಂಸ್ಕಾರ ನಡೆಸಲಾಗುತ್ತದೆ. ತಕ್ಷಣ ಪೊಲೀಸರು ಗಂಡನೇ ಪತ್ನಿಯ ಕೊಲೆ ಮಾಡಿದ್ದಾನೆ ಎನ್ನುವ ತೀರ್ಮಾನಕ್ಕೆ ಬಂದು ಸುರೇಶನನ್ನು ಬಂಧಿಸುತ್ತಾರೆ. ತಾನು ಪತ್ನಿಯನ್ನು ಕೊಂದಿಲ್ಲ ಎಂದು ಎಷ್ಟೇ ಬೇಡಿಕೊಂಡರೂ ಪೊಲೀಸರು ಕೇಳುವುದಿಲ್ಲ. ಹೆಂಡತಿಯ ಕೊಲೆ ಆರೋಪದಲ್ಲಿ ಗಂಡನನ್ನು ಬಂಧಿಸಿ ಜೈಲಿಗೆ ಅಟ್ಟಲಾಗುತ್ತದೆ.

ನಂತರ ಅಸ್ಥಿಪಂಜರದ ಡಿಎನ್ ಎ ಪರೀಕ್ಷೆ ಮಾಡಿ ಆ ಡೆಡ್ ಬಾಡಿಗೂ ಮಲ್ಲಿಗೆಯ ಕುಟುಂಬದ ಡಿಎನ್ ಎಗೂ ತಾಳೆಯಾಗುವುದಿಲ್ಲ ಎಂದು ಗೊತ್ತಾದ ನಂತರ ಅವನನ್ನು ಆರೋಪದಿಂದ ಮುಕ್ತನಾಗಿ ಮಾಡಿ ಕಳುಹಿಸಲಾಗುತ್ತದೆ.

ಅದರ ನಂತರ ನಡೆದದ್ದೇ ಕೌತುಕ. 2025 ರ ಎಪ್ರಿಲ್ 1 ರಂದು ಸುರೇಶನ ಪತ್ನಿ ಮಲ್ಲಿಗೆ ತನ್ನ ಪ್ರಿಯಕರನೊಂದಿಗೆ ಮಡಿಕೇರಿಯ ಹೋಟೇಲಿನಲ್ಲಿ ತಿಂಡಿ ತಿನ್ನುವುದನ್ನು ಸುರೇಶನ ಗೆಳೆಯರು ನೋಡುತ್ತಾರೆ.

ತಕ್ಷಣ ಆಕೆಯ ಇರುವಿಕೆಯ ಬಗ್ಗೆ ಆತನ ಗೆಳೆಯರು ಪೊಲೀಸರಿಗೆ ಮಾಹಿತಿ ನೀಡುತ್ತಾರೆ. ಆಕೆಯನ್ನು ವಶಕ್ಕೆ ಪಡೆದುಕೊಂಡು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತದೆ. ಈ ವಿಷಯದಲ್ಲಿ ಅವಳನ್ನು ವಿಚಾರಿಸಿದಾಗ ತಾನು ತನ್ನ ಗಂಡನಾಗಿದ್ದ ಸುರೇಶನ ಮನೆಯಿಂದ 25 – 30 ಕಿಲೋ ಮೀಟರ್ ದೂರ ಇರುವ ಇನ್ನೊಂದು ಮನೆಯಲ್ಲಿ ಬೇರೆ ಮದುವೆಯಾಗಿ ಜೀವನ ಮಾಡುತ್ತಿದ್ದೆ. ತನಗೆ ಸುರೇಶನನ್ನು ಬಂಧಿಸಿದ್ದ ವಿಷಯ ಗೊತ್ತೆ ಇರಲಿಲ್ಲ ಎಂದಿದ್ದಾಳೆ. ಆದರೆ ಇವಳ ಈ ಕೃತ್ಯದಿಂದ ಸುರೇಶ ಮಾತ್ರ ಒಂದೂವರೆ ವರ್ಷಕ್ಕಿಂತ ಹೆಚ್ಚು ಸಮಯ ಜೈಲಿನಲ್ಲಿ ಇರಬೇಕಾದದ್ದು ಮಾತ್ರ ಸತ್ಯ.

ಹಾಗಾದ್ರೆ ಮಲ್ಲಿಗೆಯ ಡೆಡ್ ಬಾಡಿ ಎಂದು ಪೊಲೀಸರು ತೋರಿಸಿದ್ದು ಯಾರ ಶವ? ಅದರ ವಾರಿಸುದಾರರು ಯಾರು?ಅದು ಕೊಲೆನಾ? ಹಾಗಾದ್ರೆ ಕೊಂದದ್ದು ಯಾರು? ಆ ಹತ್ಯೆಯನ್ನು ಸುರೇಶನ ತಲೆಗೆ ಕಟ್ಟಲಾಯಿತಾ? ಈಗ ಮಲ್ಲಿಗೆ ಸಿಕ್ಕಿದ ನಂತರ ಈ ಎಲ್ಲಾ ಪ್ರಶ್ನೆಗಳು ಎದ್ದಿವೆ. ಈ ಬಗ್ಗೆ ಸಮಗ್ರ ವರದಿ ನೀಡುವಂತೆ ನ್ಯಾಯಾಲಯ ಕೊಡಗು ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಆದೇಶಿಸಿದೆ.

  • Share On Facebook
  • Tweet It


- Advertisement -


Trending Now
ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
Tulunadu News May 24, 2025
ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
Tulunadu News May 23, 2025
Leave A Reply

  • Recent Posts

    • ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
  • Popular Posts

    • 1
      ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • 2
      ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • 3
      ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • 4
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 5
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search