• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಲಿಮಾ ಪಠಿಸಿ ಉಗ್ರರಿಂದ ಪಾರಾದ ಹಿಂದೂ ಪ್ರೋಫೆಸರ್ ದೇಬಶೀಶ್ ಭಟ್ಟಾಚಾರ್ಯ!

Tulunadu News Posted On April 23, 2025
0


0
Shares
  • Share On Facebook
  • Tweet It

ಕಲಿಮಾ ಪಠಿಸುವಂತೆ ನಟಿಸುವ ಮೂಲಕ ಅಸ್ಸಾಂ ವಿಶ್ವವಿದ್ಯಾನಿಲಯದ ಅಸೋಸಿಯೇಟ್ ಪ್ರೋಫೆಸರ್ ದೇಬಶೀಶ್ ಭಟ್ಟಾಚಾರ್ಯ ಅವರು ಉಗ್ರರಿಂದ ತಮ್ಮ ಜೀವ ಉಳಿಸಿ ಪಾರಾಗಿದ್ದಾರೆ.
ಮಾಧ್ಯಮದ ಜೊತೆ ತಮ್ಮ ಅನುಭವ ಹಂಚಿಕೊಂಡಿರುವ ಅವರು ” ನಾನು ನನ್ನ ಕುಟುಂಬದೊಂದಿಗೆ ಮಲಗಿದ್ದಾಗ ಇದ್ದಕ್ಕಿದ್ದಂತೆ ನನ್ನ ಸುತ್ತಲೂ ಕೆಲವರು ಏನೋ ಪಠಿಸುತ್ತಿದ್ದರು. ಜನರು ಏನೋ ಪಠಿಸುತ್ತಿರುವುದನ್ನು ನೋಡಿ ನಾನು ಕೂಡ ಪಠಿಸಲು ಆರಂಭಿಸಿದೆ. ಈ ವೇಳೆ ನಮ್ಮ ಕಡೆಗೆ ನಡೆದುಕೊಂಡು ಬಂದ ಉಗ್ರ ನನ್ನ ಪಕ್ಕದಲ್ಲಿ ಮಲಗಿದ್ದ ವ್ಯಕ್ತಿಗೆ ಕಲಿಮಾ ಪಠಿಸಲು ಹೇಳಿದ. ಅವನು ಗೊತ್ತಿಲ್ಲ ಎಂದದ್ದಕ್ಕೆ ಅವನ ತಲೆಗೆ ಗುಂಡು ಹೊಡೆದ. ಉಗ್ರ ಹಾರಿಸಿದ ಬಳಿಕ ಉಗ್ರ ನನ್ನತ್ತ ತಿರುಗಿ ” ಕ್ಯಾ ಕರ್ ರಹೇ ಹೋ?” ಎಂದ. ನಾನು ಜೋರಾಗಿ ಕಲಿಮಾವನ್ನು ಪಠಿಸುತ್ತಾ ಹೋದೆ. ಏನೋ ಕಾರಣಕ್ಕೆ ನನ್ನನ್ನು ನೋಡಿ ಆತ ದೂರ ನಡೆದುಕೊಂಡು ಹೋದ.

ಉಗ್ರ ಬೇರೆ ಕಡೆ ಹೋಗುತ್ತಿದ್ದಂತೆ ನಾನು ನನ್ನ ಪತ್ನಿ ಮಗನೊಂದಿಗೆ ವಿರುದ್ಧ ದಿಕ್ಕಿಗೆ ಓಡಿ ಹೋದೆವು. ಬೆಟ್ಟ ಹತ್ತಿ ಬೇಲಿ ದಾಟಿ ಓಡುತ್ತಾ ಹೋದೆವು. ಕುದುರೆಗಳ ಗೊರಸುಗಳ ಆಧಾರದಲ್ಲಿ ದಾರಿ ಹುಡುಕುತ್ತಾ ಸುಮಾರು ಎರಡು ಗಂಟೆ ಓಡಿದ ನಂತರ ಕುದುರೆಯೊಂದಿಗೆ ಸವಾರನೊಬ್ಬನನ್ನು ನೋಡಿದೆವು. ಆತನ ಸಹಕಾರದಿಂದ ಕೊನೆಗೂ ನಮ್ಮ ಹೋಟೇಲ್ ತಲುಪಿಕೊಂಡೆವು. ಪ್ರಾಣ ಉಳಿದಿದೆ ಎನ್ನುವುದನ್ನು ನಂಬಲು ಸಾಧ್ಯವಿಲ್ಲ ಎಂದಿದ್ದಾರೆ. ನಾವು ಮುಸ್ಲಿಂ ಬಾಹುಲ್ಯದ ಪ್ರದೇಶದಲ್ಲಿ ಬಾಲ್ಯದಿಂದಲೂ ಬೆಳೆದು ಬಂದಿದ್ದ ಕಾರಣ ನಮಗೆ ಕಲಿಮಾದ ಜ್ಞಾನ ಇತ್ತು ಎಂದು ಪ್ರೊಫೆಸರ್ ಹೇಳಿದ್ದಾರೆ.

ಅದೇ ಪ್ರದೇಶದಲ್ಲಿ ಗುಂಡಿನ ದಾಳಿ ಆದಾಗ ಪ್ರಾಣ ಉಳಿಸಿಕೊಳ್ಳಲು ಒಂದು ಕುಟುಂಬ ಟೆಂಟ್ ಒಳಗೆ ಅಡಗಿ ಕುಳಿತಿತ್ತು. ಅಲ್ಲಿಗೆ ಬಂದ ಉಗ್ರ ಟೆಂಟ್ ಒಳಗಿನಿಂದ ಗಂಡಸರು ಹೊರಗೆ ಬನ್ನಿ ಅಂದಿದ್ದಾನೆ. ಹೊರಗೆ ಬಂದ ಗಂಡಸಿಗೆ ಕಲಿಮಾ ಹೇಳುವಂತೆ ಸೂಚಿಸಿದ್ದಾನೆ. ಅವನು ಗೊತ್ತಿಲ್ಲ ಎಂದಿದ್ದಕ್ಕೆ ಕೂಡಲೇ ಕಿವಿ, ತಲೆ, ಬೆನ್ನಿಗೆ ಮೂರು ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ.

ಕಲಿಮಾ ಅಂದರೆ ಅದು ಇಸ್ಲಾಮಿಕ್ ಘೋಷಣೆ. ಇಸ್ಲಾಂ ನಂಬಿಕೆಯ ಐದು ಸ್ತಂಭಗಳಲ್ಲಿ ಒಂದೆಂದು ನಂಬುತ್ತಾರೆ. ಇದನ್ನು ಪ್ರಾಮಾಣಿಕವಾಗಿ ಪಠಿಸಿದವರು ಮುಸ್ಲಿಂ ಅನುಯಾಯಿಗಳಾಗುತ್ತಾರೆ. ಅವರು ಇಸ್ಲಾಂ ಮತದ ಮಡಿಲಿಗೆ ಬರುತ್ತಾರೆ ಎನ್ನುವುದು ನಂಬಿಕೆ. ಆದ್ದರಿಂದಲೇ ಪ್ರವಾಸಿಗರಿಗೆ ಗುಂಡು ಹಾರಿಸುವುದಕ್ಕೂ ಮುನ್ನ ಕಲಿಮಾ ಪಠಿಸುವಂತೆ ಉಗ್ರರು ಒತ್ತಾಯಿಸಿದ್ದಾರೆ.

0
Shares
  • Share On Facebook
  • Tweet It




Trending Now
ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
Tulunadu News July 9, 2025
ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
Tulunadu News July 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
  • Popular Posts

    • 1
      ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • 2
      ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • 3
      ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • 4
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 5
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!

  • Privacy Policy
  • Contact
© Tulunadu Infomedia.

Press enter/return to begin your search