• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಲಿಮಾ ಪಠಿಸಿ ಉಗ್ರರಿಂದ ಪಾರಾದ ಹಿಂದೂ ಪ್ರೋಫೆಸರ್ ದೇಬಶೀಶ್ ಭಟ್ಟಾಚಾರ್ಯ!

Tulunadu News Posted On April 23, 2025


  • Share On Facebook
  • Tweet It

ಕಲಿಮಾ ಪಠಿಸುವಂತೆ ನಟಿಸುವ ಮೂಲಕ ಅಸ್ಸಾಂ ವಿಶ್ವವಿದ್ಯಾನಿಲಯದ ಅಸೋಸಿಯೇಟ್ ಪ್ರೋಫೆಸರ್ ದೇಬಶೀಶ್ ಭಟ್ಟಾಚಾರ್ಯ ಅವರು ಉಗ್ರರಿಂದ ತಮ್ಮ ಜೀವ ಉಳಿಸಿ ಪಾರಾಗಿದ್ದಾರೆ.
ಮಾಧ್ಯಮದ ಜೊತೆ ತಮ್ಮ ಅನುಭವ ಹಂಚಿಕೊಂಡಿರುವ ಅವರು ” ನಾನು ನನ್ನ ಕುಟುಂಬದೊಂದಿಗೆ ಮಲಗಿದ್ದಾಗ ಇದ್ದಕ್ಕಿದ್ದಂತೆ ನನ್ನ ಸುತ್ತಲೂ ಕೆಲವರು ಏನೋ ಪಠಿಸುತ್ತಿದ್ದರು. ಜನರು ಏನೋ ಪಠಿಸುತ್ತಿರುವುದನ್ನು ನೋಡಿ ನಾನು ಕೂಡ ಪಠಿಸಲು ಆರಂಭಿಸಿದೆ. ಈ ವೇಳೆ ನಮ್ಮ ಕಡೆಗೆ ನಡೆದುಕೊಂಡು ಬಂದ ಉಗ್ರ ನನ್ನ ಪಕ್ಕದಲ್ಲಿ ಮಲಗಿದ್ದ ವ್ಯಕ್ತಿಗೆ ಕಲಿಮಾ ಪಠಿಸಲು ಹೇಳಿದ. ಅವನು ಗೊತ್ತಿಲ್ಲ ಎಂದದ್ದಕ್ಕೆ ಅವನ ತಲೆಗೆ ಗುಂಡು ಹೊಡೆದ. ಉಗ್ರ ಹಾರಿಸಿದ ಬಳಿಕ ಉಗ್ರ ನನ್ನತ್ತ ತಿರುಗಿ ” ಕ್ಯಾ ಕರ್ ರಹೇ ಹೋ?” ಎಂದ. ನಾನು ಜೋರಾಗಿ ಕಲಿಮಾವನ್ನು ಪಠಿಸುತ್ತಾ ಹೋದೆ. ಏನೋ ಕಾರಣಕ್ಕೆ ನನ್ನನ್ನು ನೋಡಿ ಆತ ದೂರ ನಡೆದುಕೊಂಡು ಹೋದ.

ಉಗ್ರ ಬೇರೆ ಕಡೆ ಹೋಗುತ್ತಿದ್ದಂತೆ ನಾನು ನನ್ನ ಪತ್ನಿ ಮಗನೊಂದಿಗೆ ವಿರುದ್ಧ ದಿಕ್ಕಿಗೆ ಓಡಿ ಹೋದೆವು. ಬೆಟ್ಟ ಹತ್ತಿ ಬೇಲಿ ದಾಟಿ ಓಡುತ್ತಾ ಹೋದೆವು. ಕುದುರೆಗಳ ಗೊರಸುಗಳ ಆಧಾರದಲ್ಲಿ ದಾರಿ ಹುಡುಕುತ್ತಾ ಸುಮಾರು ಎರಡು ಗಂಟೆ ಓಡಿದ ನಂತರ ಕುದುರೆಯೊಂದಿಗೆ ಸವಾರನೊಬ್ಬನನ್ನು ನೋಡಿದೆವು. ಆತನ ಸಹಕಾರದಿಂದ ಕೊನೆಗೂ ನಮ್ಮ ಹೋಟೇಲ್ ತಲುಪಿಕೊಂಡೆವು. ಪ್ರಾಣ ಉಳಿದಿದೆ ಎನ್ನುವುದನ್ನು ನಂಬಲು ಸಾಧ್ಯವಿಲ್ಲ ಎಂದಿದ್ದಾರೆ. ನಾವು ಮುಸ್ಲಿಂ ಬಾಹುಲ್ಯದ ಪ್ರದೇಶದಲ್ಲಿ ಬಾಲ್ಯದಿಂದಲೂ ಬೆಳೆದು ಬಂದಿದ್ದ ಕಾರಣ ನಮಗೆ ಕಲಿಮಾದ ಜ್ಞಾನ ಇತ್ತು ಎಂದು ಪ್ರೊಫೆಸರ್ ಹೇಳಿದ್ದಾರೆ.

ಅದೇ ಪ್ರದೇಶದಲ್ಲಿ ಗುಂಡಿನ ದಾಳಿ ಆದಾಗ ಪ್ರಾಣ ಉಳಿಸಿಕೊಳ್ಳಲು ಒಂದು ಕುಟುಂಬ ಟೆಂಟ್ ಒಳಗೆ ಅಡಗಿ ಕುಳಿತಿತ್ತು. ಅಲ್ಲಿಗೆ ಬಂದ ಉಗ್ರ ಟೆಂಟ್ ಒಳಗಿನಿಂದ ಗಂಡಸರು ಹೊರಗೆ ಬನ್ನಿ ಅಂದಿದ್ದಾನೆ. ಹೊರಗೆ ಬಂದ ಗಂಡಸಿಗೆ ಕಲಿಮಾ ಹೇಳುವಂತೆ ಸೂಚಿಸಿದ್ದಾನೆ. ಅವನು ಗೊತ್ತಿಲ್ಲ ಎಂದಿದ್ದಕ್ಕೆ ಕೂಡಲೇ ಕಿವಿ, ತಲೆ, ಬೆನ್ನಿಗೆ ಮೂರು ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ.

ಕಲಿಮಾ ಅಂದರೆ ಅದು ಇಸ್ಲಾಮಿಕ್ ಘೋಷಣೆ. ಇಸ್ಲಾಂ ನಂಬಿಕೆಯ ಐದು ಸ್ತಂಭಗಳಲ್ಲಿ ಒಂದೆಂದು ನಂಬುತ್ತಾರೆ. ಇದನ್ನು ಪ್ರಾಮಾಣಿಕವಾಗಿ ಪಠಿಸಿದವರು ಮುಸ್ಲಿಂ ಅನುಯಾಯಿಗಳಾಗುತ್ತಾರೆ. ಅವರು ಇಸ್ಲಾಂ ಮತದ ಮಡಿಲಿಗೆ ಬರುತ್ತಾರೆ ಎನ್ನುವುದು ನಂಬಿಕೆ. ಆದ್ದರಿಂದಲೇ ಪ್ರವಾಸಿಗರಿಗೆ ಗುಂಡು ಹಾರಿಸುವುದಕ್ಕೂ ಮುನ್ನ ಕಲಿಮಾ ಪಠಿಸುವಂತೆ ಉಗ್ರರು ಒತ್ತಾಯಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
Tulunadu News May 24, 2025
ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
Tulunadu News May 23, 2025
Leave A Reply

  • Recent Posts

    • ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
  • Popular Posts

    • 1
      ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • 2
      ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • 3
      ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • 4
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 5
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search