• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಹಿಂದೂತ್ವ ಬೆಂಬಲಿಸಿದ್ದೇ ದಾಳಿಗೆ ಕಾರಣ – ವಾದ್ರಾ ಹೇಳಿಕೆ

Tulunadu News Posted On April 24, 2025


  • Share On Facebook
  • Tweet It

ಕಾಶ್ಮೀರದ ಪಹಲ್ಗಾಂನಲ್ಲಿ ಉಗ್ರರ ದಾಳಿ ನಡೆದು 26 ಜನರು ಮೃತಪಟ್ಟ ಘಟನೆಯ ವಿಚಾರದಲ್ಲಿ ಇಡೀ ದೇಶ ಶೋಕತಪ್ತವಾಗಿದೆ. ಈ ವಿಷಯದಲ್ಲಿ ವಾಹಿನಿಯೊಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ವಾದ್ರಾ ಅವರ ಪತಿ ರಾಬರ್ಟ್ ವಾದ್ರಾ ಅವರ ಬಳಿ ಅಭಿಪ್ರಾಯ ಕೇಳಿದೆ. ಈ ಬಗ್ಗೆ ಮಾತನಾಡಿದ ವಾದ್ರಾ ಪಹಲ್ಗಾಂ ಉಗ್ರದಾಳಿ ಹಾಗೂ ಸರಕಾರದ ಹಿಂದೂತ್ವವಾದಕ್ಕೆ ನೇರ ಸಂಬಂಧವಿದೆ ಎಂದು ಹೇಳಿದ್ದಾರೆ. ಅವರ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ಹಿಂದೂತ್ವವನ್ನು ಬೆಂಬಲಿಸುತ್ತಿರುವ ಕಾರಣದಿಂದ ಮುಸ್ಲಿಮರು ಸೇರಿದಂತೆ ಅಲ್ಪಸಂಖ್ಯಾತರಿಗೆ ತಾವು ದುರ್ಬಲರಾದಂತೆ ಭಾಸವಾಗುತ್ತಿದೆ. ಹಿಂದೂ – ಮುಸ್ಲಿಮರ ನಡುವೆ ಒಡಕು ಸೃಷ್ಟಿಯಾಗಿದೆ. ಆದ್ದರಿಂದಲೇ ಪ್ರವಾಸಿಗರ ಗುರುತು ನೋಡಿ ಉಗ್ರರು ದಾಳಿ ನಡೆಸಿದರು. ಇದು ಪ್ರಧಾನಿ ಮೋದಿ ಅವರಿಗೆ ನೀಡಿದ ಸಂದೇಶ ಎಂದು ವಾದ್ರಾ ಹೇಳಿದ್ದಾರೆ.

ಈ ನಡುವೆ ಸೇನೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಹೊಸ ನೇಮಕಾತಿ ಆಗದಿದ್ದ ಕಾರಣ ಯೋಧರ ಕೊರತೆಯಿಂದ ಈ ಘಟನೆ ಸಂಭವಿಸಿದೆ ಎಂದು ಮಾಜಿ ಸೇನಾಧಿಕಾರಿ ಜಿಡಿ ಭಕ್ಷಿ ಹೇಳಿದ್ದಾರೆ. ಇದು ಸರಿಯಲ್ಲ. ಆ ಸೂಕ್ಷ್ಮ ಪ್ರದೇಶದಲ್ಲಿ ಯೋಧರ ನಿಯುಕ್ತಿ ಅಗತ್ಯವಾಗಿತ್ತು. ಆದರೆ ಈಗ ವಿಸ್ತ್ರತ ಪ್ರದೇಶದಲ್ಲಿ ಯೋಧರು ರಕ್ಷಣೆಯಲ್ಲಿ ತೊಡಗಬೇಕಾಗಿರುವುದರಿಂದ ಅವರಿಗೆ ಎಲ್ಲಾ ಪ್ರದೇಶದಲ್ಲಿ ಗಸ್ತು ತಿರುಗುವುದು ಕಷ್ಟಸಾಧ್ಯ. ಆದ್ದರಿಂದ ಇಂತಹ ಘಟನೆ ನಡೆದಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ನಡುವೆ ಕಾಂಗ್ರೆಸ್ ಮುಖಂಡರು ಇದು ಕೇಂದ್ರ ಸರಕಾರದ ಭದ್ರತಾ ವೈಫಲ್ಯ, ಆಂತರಿಕ ಗುಪ್ತಚರ ಇಲಾಖೆ ವೈಫಲ್ಯ ಎಂದು ಹೇಳಿಕೆ ನೀಡುತ್ತಿದ್ದಾರೆ. ನಿನ್ನೆಯ ತನಕ ವ್ಯಾಪಾರ ವ್ಯವಹಾರಗಳಿಂದ ಕಳೆಗಟ್ಟಿದ್ದ ಲಾಲ್ ಚೌಕದಲ್ಲಿ ಈಗ ಎಲ್ಲವೂ ಬಂದ್ ಆಗಿದೆ. ಅಂಗಡಿ ಮುಂಗಟ್ಟುಗಳು ಮುಚ್ಚಿವೆ. ಜಮ್ಮು – ಕಾಶ್ಮೀರದ ಮಾಜಿ ಡಿಜಿಪಿ ಎಸ್ ವೈದ್ಯ ಅವರು ಮಾತನಾಡುತ್ತಾ, ಇದು ಒಂದು ರೀತಿಯಲ್ಲಿ ಫುಲ್ವಾಮಾ – 2 ದಾಳಿಯಂತೆ ಆಗಿದೆ. ಇದು ಯಾವುದೇ ಅಚಾನಕ್ ಆಗಿರುವಂತಹ ಘಟನೆಯಲ್ಲ. ಇದೊಂದು ವ್ಯವಸ್ಥಿತವಾಗಿರುವ ಯೋಜನೆಯಿಂದ ಮಾಡಿರುವಂತದ್ದು ಎಂದು ಹೇಳಿದ್ದಾರೆ

  • Share On Facebook
  • Tweet It


- Advertisement -


Trending Now
ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
Tulunadu News May 24, 2025
ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
Tulunadu News May 23, 2025
Leave A Reply

  • Recent Posts

    • ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
  • Popular Posts

    • 1
      ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • 2
      ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • 3
      ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • 4
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 5
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search