ಹಿಂದೂತ್ವ ಬೆಂಬಲಿಸಿದ್ದೇ ದಾಳಿಗೆ ಕಾರಣ – ವಾದ್ರಾ ಹೇಳಿಕೆ

ಕಾಶ್ಮೀರದ ಪಹಲ್ಗಾಂನಲ್ಲಿ ಉಗ್ರರ ದಾಳಿ ನಡೆದು 26 ಜನರು ಮೃತಪಟ್ಟ ಘಟನೆಯ ವಿಚಾರದಲ್ಲಿ ಇಡೀ ದೇಶ ಶೋಕತಪ್ತವಾಗಿದೆ. ಈ ವಿಷಯದಲ್ಲಿ ವಾಹಿನಿಯೊಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ವಾದ್ರಾ ಅವರ ಪತಿ ರಾಬರ್ಟ್ ವಾದ್ರಾ ಅವರ ಬಳಿ ಅಭಿಪ್ರಾಯ ಕೇಳಿದೆ. ಈ ಬಗ್ಗೆ ಮಾತನಾಡಿದ ವಾದ್ರಾ ಪಹಲ್ಗಾಂ ಉಗ್ರದಾಳಿ ಹಾಗೂ ಸರಕಾರದ ಹಿಂದೂತ್ವವಾದಕ್ಕೆ ನೇರ ಸಂಬಂಧವಿದೆ ಎಂದು ಹೇಳಿದ್ದಾರೆ. ಅವರ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ಹಿಂದೂತ್ವವನ್ನು ಬೆಂಬಲಿಸುತ್ತಿರುವ ಕಾರಣದಿಂದ ಮುಸ್ಲಿಮರು ಸೇರಿದಂತೆ ಅಲ್ಪಸಂಖ್ಯಾತರಿಗೆ ತಾವು ದುರ್ಬಲರಾದಂತೆ ಭಾಸವಾಗುತ್ತಿದೆ. ಹಿಂದೂ – ಮುಸ್ಲಿಮರ ನಡುವೆ ಒಡಕು ಸೃಷ್ಟಿಯಾಗಿದೆ. ಆದ್ದರಿಂದಲೇ ಪ್ರವಾಸಿಗರ ಗುರುತು ನೋಡಿ ಉಗ್ರರು ದಾಳಿ ನಡೆಸಿದರು. ಇದು ಪ್ರಧಾನಿ ಮೋದಿ ಅವರಿಗೆ ನೀಡಿದ ಸಂದೇಶ ಎಂದು ವಾದ್ರಾ ಹೇಳಿದ್ದಾರೆ.
ಈ ನಡುವೆ ಸೇನೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಹೊಸ ನೇಮಕಾತಿ ಆಗದಿದ್ದ ಕಾರಣ ಯೋಧರ ಕೊರತೆಯಿಂದ ಈ ಘಟನೆ ಸಂಭವಿಸಿದೆ ಎಂದು ಮಾಜಿ ಸೇನಾಧಿಕಾರಿ ಜಿಡಿ ಭಕ್ಷಿ ಹೇಳಿದ್ದಾರೆ. ಇದು ಸರಿಯಲ್ಲ. ಆ ಸೂಕ್ಷ್ಮ ಪ್ರದೇಶದಲ್ಲಿ ಯೋಧರ ನಿಯುಕ್ತಿ ಅಗತ್ಯವಾಗಿತ್ತು. ಆದರೆ ಈಗ ವಿಸ್ತ್ರತ ಪ್ರದೇಶದಲ್ಲಿ ಯೋಧರು ರಕ್ಷಣೆಯಲ್ಲಿ ತೊಡಗಬೇಕಾಗಿರುವುದರಿಂದ ಅವರಿಗೆ ಎಲ್ಲಾ ಪ್ರದೇಶದಲ್ಲಿ ಗಸ್ತು ತಿರುಗುವುದು ಕಷ್ಟಸಾಧ್ಯ. ಆದ್ದರಿಂದ ಇಂತಹ ಘಟನೆ ನಡೆದಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಈ ನಡುವೆ ಕಾಂಗ್ರೆಸ್ ಮುಖಂಡರು ಇದು ಕೇಂದ್ರ ಸರಕಾರದ ಭದ್ರತಾ ವೈಫಲ್ಯ, ಆಂತರಿಕ ಗುಪ್ತಚರ ಇಲಾಖೆ ವೈಫಲ್ಯ ಎಂದು ಹೇಳಿಕೆ ನೀಡುತ್ತಿದ್ದಾರೆ. ನಿನ್ನೆಯ ತನಕ ವ್ಯಾಪಾರ ವ್ಯವಹಾರಗಳಿಂದ ಕಳೆಗಟ್ಟಿದ್ದ ಲಾಲ್ ಚೌಕದಲ್ಲಿ ಈಗ ಎಲ್ಲವೂ ಬಂದ್ ಆಗಿದೆ. ಅಂಗಡಿ ಮುಂಗಟ್ಟುಗಳು ಮುಚ್ಚಿವೆ. ಜಮ್ಮು – ಕಾಶ್ಮೀರದ ಮಾಜಿ ಡಿಜಿಪಿ ಎಸ್ ವೈದ್ಯ ಅವರು ಮಾತನಾಡುತ್ತಾ, ಇದು ಒಂದು ರೀತಿಯಲ್ಲಿ ಫುಲ್ವಾಮಾ – 2 ದಾಳಿಯಂತೆ ಆಗಿದೆ. ಇದು ಯಾವುದೇ ಅಚಾನಕ್ ಆಗಿರುವಂತಹ ಘಟನೆಯಲ್ಲ. ಇದೊಂದು ವ್ಯವಸ್ಥಿತವಾಗಿರುವ ಯೋಜನೆಯಿಂದ ಮಾಡಿರುವಂತದ್ದು ಎಂದು ಹೇಳಿದ್ದಾರೆ
Leave A Reply