• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಂದೂತ್ವ ಬೆಂಬಲಿಸಿದ್ದೇ ದಾಳಿಗೆ ಕಾರಣ – ವಾದ್ರಾ ಹೇಳಿಕೆ

Tulunadu News Posted On April 24, 2025
0


0
Shares
  • Share On Facebook
  • Tweet It

ಕಾಶ್ಮೀರದ ಪಹಲ್ಗಾಂನಲ್ಲಿ ಉಗ್ರರ ದಾಳಿ ನಡೆದು 26 ಜನರು ಮೃತಪಟ್ಟ ಘಟನೆಯ ವಿಚಾರದಲ್ಲಿ ಇಡೀ ದೇಶ ಶೋಕತಪ್ತವಾಗಿದೆ. ಈ ವಿಷಯದಲ್ಲಿ ವಾಹಿನಿಯೊಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ವಾದ್ರಾ ಅವರ ಪತಿ ರಾಬರ್ಟ್ ವಾದ್ರಾ ಅವರ ಬಳಿ ಅಭಿಪ್ರಾಯ ಕೇಳಿದೆ. ಈ ಬಗ್ಗೆ ಮಾತನಾಡಿದ ವಾದ್ರಾ ಪಹಲ್ಗಾಂ ಉಗ್ರದಾಳಿ ಹಾಗೂ ಸರಕಾರದ ಹಿಂದೂತ್ವವಾದಕ್ಕೆ ನೇರ ಸಂಬಂಧವಿದೆ ಎಂದು ಹೇಳಿದ್ದಾರೆ. ಅವರ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ಹಿಂದೂತ್ವವನ್ನು ಬೆಂಬಲಿಸುತ್ತಿರುವ ಕಾರಣದಿಂದ ಮುಸ್ಲಿಮರು ಸೇರಿದಂತೆ ಅಲ್ಪಸಂಖ್ಯಾತರಿಗೆ ತಾವು ದುರ್ಬಲರಾದಂತೆ ಭಾಸವಾಗುತ್ತಿದೆ. ಹಿಂದೂ – ಮುಸ್ಲಿಮರ ನಡುವೆ ಒಡಕು ಸೃಷ್ಟಿಯಾಗಿದೆ. ಆದ್ದರಿಂದಲೇ ಪ್ರವಾಸಿಗರ ಗುರುತು ನೋಡಿ ಉಗ್ರರು ದಾಳಿ ನಡೆಸಿದರು. ಇದು ಪ್ರಧಾನಿ ಮೋದಿ ಅವರಿಗೆ ನೀಡಿದ ಸಂದೇಶ ಎಂದು ವಾದ್ರಾ ಹೇಳಿದ್ದಾರೆ.

ಈ ನಡುವೆ ಸೇನೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಹೊಸ ನೇಮಕಾತಿ ಆಗದಿದ್ದ ಕಾರಣ ಯೋಧರ ಕೊರತೆಯಿಂದ ಈ ಘಟನೆ ಸಂಭವಿಸಿದೆ ಎಂದು ಮಾಜಿ ಸೇನಾಧಿಕಾರಿ ಜಿಡಿ ಭಕ್ಷಿ ಹೇಳಿದ್ದಾರೆ. ಇದು ಸರಿಯಲ್ಲ. ಆ ಸೂಕ್ಷ್ಮ ಪ್ರದೇಶದಲ್ಲಿ ಯೋಧರ ನಿಯುಕ್ತಿ ಅಗತ್ಯವಾಗಿತ್ತು. ಆದರೆ ಈಗ ವಿಸ್ತ್ರತ ಪ್ರದೇಶದಲ್ಲಿ ಯೋಧರು ರಕ್ಷಣೆಯಲ್ಲಿ ತೊಡಗಬೇಕಾಗಿರುವುದರಿಂದ ಅವರಿಗೆ ಎಲ್ಲಾ ಪ್ರದೇಶದಲ್ಲಿ ಗಸ್ತು ತಿರುಗುವುದು ಕಷ್ಟಸಾಧ್ಯ. ಆದ್ದರಿಂದ ಇಂತಹ ಘಟನೆ ನಡೆದಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ನಡುವೆ ಕಾಂಗ್ರೆಸ್ ಮುಖಂಡರು ಇದು ಕೇಂದ್ರ ಸರಕಾರದ ಭದ್ರತಾ ವೈಫಲ್ಯ, ಆಂತರಿಕ ಗುಪ್ತಚರ ಇಲಾಖೆ ವೈಫಲ್ಯ ಎಂದು ಹೇಳಿಕೆ ನೀಡುತ್ತಿದ್ದಾರೆ. ನಿನ್ನೆಯ ತನಕ ವ್ಯಾಪಾರ ವ್ಯವಹಾರಗಳಿಂದ ಕಳೆಗಟ್ಟಿದ್ದ ಲಾಲ್ ಚೌಕದಲ್ಲಿ ಈಗ ಎಲ್ಲವೂ ಬಂದ್ ಆಗಿದೆ. ಅಂಗಡಿ ಮುಂಗಟ್ಟುಗಳು ಮುಚ್ಚಿವೆ. ಜಮ್ಮು – ಕಾಶ್ಮೀರದ ಮಾಜಿ ಡಿಜಿಪಿ ಎಸ್ ವೈದ್ಯ ಅವರು ಮಾತನಾಡುತ್ತಾ, ಇದು ಒಂದು ರೀತಿಯಲ್ಲಿ ಫುಲ್ವಾಮಾ – 2 ದಾಳಿಯಂತೆ ಆಗಿದೆ. ಇದು ಯಾವುದೇ ಅಚಾನಕ್ ಆಗಿರುವಂತಹ ಘಟನೆಯಲ್ಲ. ಇದೊಂದು ವ್ಯವಸ್ಥಿತವಾಗಿರುವ ಯೋಜನೆಯಿಂದ ಮಾಡಿರುವಂತದ್ದು ಎಂದು ಹೇಳಿದ್ದಾರೆ

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • 2
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search