• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಂದೂತ್ವ ಬೆಂಬಲಿಸಿದ್ದೇ ದಾಳಿಗೆ ಕಾರಣ – ವಾದ್ರಾ ಹೇಳಿಕೆ

Tulunadu News Posted On April 24, 2025
0


0
Shares
  • Share On Facebook
  • Tweet It

ಕಾಶ್ಮೀರದ ಪಹಲ್ಗಾಂನಲ್ಲಿ ಉಗ್ರರ ದಾಳಿ ನಡೆದು 26 ಜನರು ಮೃತಪಟ್ಟ ಘಟನೆಯ ವಿಚಾರದಲ್ಲಿ ಇಡೀ ದೇಶ ಶೋಕತಪ್ತವಾಗಿದೆ. ಈ ವಿಷಯದಲ್ಲಿ ವಾಹಿನಿಯೊಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ವಾದ್ರಾ ಅವರ ಪತಿ ರಾಬರ್ಟ್ ವಾದ್ರಾ ಅವರ ಬಳಿ ಅಭಿಪ್ರಾಯ ಕೇಳಿದೆ. ಈ ಬಗ್ಗೆ ಮಾತನಾಡಿದ ವಾದ್ರಾ ಪಹಲ್ಗಾಂ ಉಗ್ರದಾಳಿ ಹಾಗೂ ಸರಕಾರದ ಹಿಂದೂತ್ವವಾದಕ್ಕೆ ನೇರ ಸಂಬಂಧವಿದೆ ಎಂದು ಹೇಳಿದ್ದಾರೆ. ಅವರ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ಹಿಂದೂತ್ವವನ್ನು ಬೆಂಬಲಿಸುತ್ತಿರುವ ಕಾರಣದಿಂದ ಮುಸ್ಲಿಮರು ಸೇರಿದಂತೆ ಅಲ್ಪಸಂಖ್ಯಾತರಿಗೆ ತಾವು ದುರ್ಬಲರಾದಂತೆ ಭಾಸವಾಗುತ್ತಿದೆ. ಹಿಂದೂ – ಮುಸ್ಲಿಮರ ನಡುವೆ ಒಡಕು ಸೃಷ್ಟಿಯಾಗಿದೆ. ಆದ್ದರಿಂದಲೇ ಪ್ರವಾಸಿಗರ ಗುರುತು ನೋಡಿ ಉಗ್ರರು ದಾಳಿ ನಡೆಸಿದರು. ಇದು ಪ್ರಧಾನಿ ಮೋದಿ ಅವರಿಗೆ ನೀಡಿದ ಸಂದೇಶ ಎಂದು ವಾದ್ರಾ ಹೇಳಿದ್ದಾರೆ.

ಈ ನಡುವೆ ಸೇನೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಹೊಸ ನೇಮಕಾತಿ ಆಗದಿದ್ದ ಕಾರಣ ಯೋಧರ ಕೊರತೆಯಿಂದ ಈ ಘಟನೆ ಸಂಭವಿಸಿದೆ ಎಂದು ಮಾಜಿ ಸೇನಾಧಿಕಾರಿ ಜಿಡಿ ಭಕ್ಷಿ ಹೇಳಿದ್ದಾರೆ. ಇದು ಸರಿಯಲ್ಲ. ಆ ಸೂಕ್ಷ್ಮ ಪ್ರದೇಶದಲ್ಲಿ ಯೋಧರ ನಿಯುಕ್ತಿ ಅಗತ್ಯವಾಗಿತ್ತು. ಆದರೆ ಈಗ ವಿಸ್ತ್ರತ ಪ್ರದೇಶದಲ್ಲಿ ಯೋಧರು ರಕ್ಷಣೆಯಲ್ಲಿ ತೊಡಗಬೇಕಾಗಿರುವುದರಿಂದ ಅವರಿಗೆ ಎಲ್ಲಾ ಪ್ರದೇಶದಲ್ಲಿ ಗಸ್ತು ತಿರುಗುವುದು ಕಷ್ಟಸಾಧ್ಯ. ಆದ್ದರಿಂದ ಇಂತಹ ಘಟನೆ ನಡೆದಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ನಡುವೆ ಕಾಂಗ್ರೆಸ್ ಮುಖಂಡರು ಇದು ಕೇಂದ್ರ ಸರಕಾರದ ಭದ್ರತಾ ವೈಫಲ್ಯ, ಆಂತರಿಕ ಗುಪ್ತಚರ ಇಲಾಖೆ ವೈಫಲ್ಯ ಎಂದು ಹೇಳಿಕೆ ನೀಡುತ್ತಿದ್ದಾರೆ. ನಿನ್ನೆಯ ತನಕ ವ್ಯಾಪಾರ ವ್ಯವಹಾರಗಳಿಂದ ಕಳೆಗಟ್ಟಿದ್ದ ಲಾಲ್ ಚೌಕದಲ್ಲಿ ಈಗ ಎಲ್ಲವೂ ಬಂದ್ ಆಗಿದೆ. ಅಂಗಡಿ ಮುಂಗಟ್ಟುಗಳು ಮುಚ್ಚಿವೆ. ಜಮ್ಮು – ಕಾಶ್ಮೀರದ ಮಾಜಿ ಡಿಜಿಪಿ ಎಸ್ ವೈದ್ಯ ಅವರು ಮಾತನಾಡುತ್ತಾ, ಇದು ಒಂದು ರೀತಿಯಲ್ಲಿ ಫುಲ್ವಾಮಾ – 2 ದಾಳಿಯಂತೆ ಆಗಿದೆ. ಇದು ಯಾವುದೇ ಅಚಾನಕ್ ಆಗಿರುವಂತಹ ಘಟನೆಯಲ್ಲ. ಇದೊಂದು ವ್ಯವಸ್ಥಿತವಾಗಿರುವ ಯೋಜನೆಯಿಂದ ಮಾಡಿರುವಂತದ್ದು ಎಂದು ಹೇಳಿದ್ದಾರೆ

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!
  • Popular Posts

    • 1
      ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • 2
      ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!

  • Privacy Policy
  • Contact
© Tulunadu Infomedia.

Press enter/return to begin your search