• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಂದೂತ್ವ ಬೆಂಬಲಿಸಿದ್ದೇ ದಾಳಿಗೆ ಕಾರಣ – ವಾದ್ರಾ ಹೇಳಿಕೆ

Tulunadu News Posted On April 24, 2025
0


0
Shares
  • Share On Facebook
  • Tweet It

ಕಾಶ್ಮೀರದ ಪಹಲ್ಗಾಂನಲ್ಲಿ ಉಗ್ರರ ದಾಳಿ ನಡೆದು 26 ಜನರು ಮೃತಪಟ್ಟ ಘಟನೆಯ ವಿಚಾರದಲ್ಲಿ ಇಡೀ ದೇಶ ಶೋಕತಪ್ತವಾಗಿದೆ. ಈ ವಿಷಯದಲ್ಲಿ ವಾಹಿನಿಯೊಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ವಾದ್ರಾ ಅವರ ಪತಿ ರಾಬರ್ಟ್ ವಾದ್ರಾ ಅವರ ಬಳಿ ಅಭಿಪ್ರಾಯ ಕೇಳಿದೆ. ಈ ಬಗ್ಗೆ ಮಾತನಾಡಿದ ವಾದ್ರಾ ಪಹಲ್ಗಾಂ ಉಗ್ರದಾಳಿ ಹಾಗೂ ಸರಕಾರದ ಹಿಂದೂತ್ವವಾದಕ್ಕೆ ನೇರ ಸಂಬಂಧವಿದೆ ಎಂದು ಹೇಳಿದ್ದಾರೆ. ಅವರ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ಹಿಂದೂತ್ವವನ್ನು ಬೆಂಬಲಿಸುತ್ತಿರುವ ಕಾರಣದಿಂದ ಮುಸ್ಲಿಮರು ಸೇರಿದಂತೆ ಅಲ್ಪಸಂಖ್ಯಾತರಿಗೆ ತಾವು ದುರ್ಬಲರಾದಂತೆ ಭಾಸವಾಗುತ್ತಿದೆ. ಹಿಂದೂ – ಮುಸ್ಲಿಮರ ನಡುವೆ ಒಡಕು ಸೃಷ್ಟಿಯಾಗಿದೆ. ಆದ್ದರಿಂದಲೇ ಪ್ರವಾಸಿಗರ ಗುರುತು ನೋಡಿ ಉಗ್ರರು ದಾಳಿ ನಡೆಸಿದರು. ಇದು ಪ್ರಧಾನಿ ಮೋದಿ ಅವರಿಗೆ ನೀಡಿದ ಸಂದೇಶ ಎಂದು ವಾದ್ರಾ ಹೇಳಿದ್ದಾರೆ.

ಈ ನಡುವೆ ಸೇನೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಹೊಸ ನೇಮಕಾತಿ ಆಗದಿದ್ದ ಕಾರಣ ಯೋಧರ ಕೊರತೆಯಿಂದ ಈ ಘಟನೆ ಸಂಭವಿಸಿದೆ ಎಂದು ಮಾಜಿ ಸೇನಾಧಿಕಾರಿ ಜಿಡಿ ಭಕ್ಷಿ ಹೇಳಿದ್ದಾರೆ. ಇದು ಸರಿಯಲ್ಲ. ಆ ಸೂಕ್ಷ್ಮ ಪ್ರದೇಶದಲ್ಲಿ ಯೋಧರ ನಿಯುಕ್ತಿ ಅಗತ್ಯವಾಗಿತ್ತು. ಆದರೆ ಈಗ ವಿಸ್ತ್ರತ ಪ್ರದೇಶದಲ್ಲಿ ಯೋಧರು ರಕ್ಷಣೆಯಲ್ಲಿ ತೊಡಗಬೇಕಾಗಿರುವುದರಿಂದ ಅವರಿಗೆ ಎಲ್ಲಾ ಪ್ರದೇಶದಲ್ಲಿ ಗಸ್ತು ತಿರುಗುವುದು ಕಷ್ಟಸಾಧ್ಯ. ಆದ್ದರಿಂದ ಇಂತಹ ಘಟನೆ ನಡೆದಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ನಡುವೆ ಕಾಂಗ್ರೆಸ್ ಮುಖಂಡರು ಇದು ಕೇಂದ್ರ ಸರಕಾರದ ಭದ್ರತಾ ವೈಫಲ್ಯ, ಆಂತರಿಕ ಗುಪ್ತಚರ ಇಲಾಖೆ ವೈಫಲ್ಯ ಎಂದು ಹೇಳಿಕೆ ನೀಡುತ್ತಿದ್ದಾರೆ. ನಿನ್ನೆಯ ತನಕ ವ್ಯಾಪಾರ ವ್ಯವಹಾರಗಳಿಂದ ಕಳೆಗಟ್ಟಿದ್ದ ಲಾಲ್ ಚೌಕದಲ್ಲಿ ಈಗ ಎಲ್ಲವೂ ಬಂದ್ ಆಗಿದೆ. ಅಂಗಡಿ ಮುಂಗಟ್ಟುಗಳು ಮುಚ್ಚಿವೆ. ಜಮ್ಮು – ಕಾಶ್ಮೀರದ ಮಾಜಿ ಡಿಜಿಪಿ ಎಸ್ ವೈದ್ಯ ಅವರು ಮಾತನಾಡುತ್ತಾ, ಇದು ಒಂದು ರೀತಿಯಲ್ಲಿ ಫುಲ್ವಾಮಾ – 2 ದಾಳಿಯಂತೆ ಆಗಿದೆ. ಇದು ಯಾವುದೇ ಅಚಾನಕ್ ಆಗಿರುವಂತಹ ಘಟನೆಯಲ್ಲ. ಇದೊಂದು ವ್ಯವಸ್ಥಿತವಾಗಿರುವ ಯೋಜನೆಯಿಂದ ಮಾಡಿರುವಂತದ್ದು ಎಂದು ಹೇಳಿದ್ದಾರೆ

0
Shares
  • Share On Facebook
  • Tweet It




Trending Now
ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
Tulunadu News August 13, 2025
ಮುಂದಿನ ಚುನಾವಣೆಯಲ್ಲಿಯೂ ನನ್ನ ಕೈ ಹಿಡಿಯಿರಿ: ವರುಣಾದಲ್ಲಿ ಸಿಎಂ ಮನವಿ!
Tulunadu News August 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
    • ಮುಂದಿನ ಚುನಾವಣೆಯಲ್ಲಿಯೂ ನನ್ನ ಕೈ ಹಿಡಿಯಿರಿ: ವರುಣಾದಲ್ಲಿ ಸಿಎಂ ಮನವಿ!
    • ಮಂಗಳೂರು: ಈಜುತ್ತಿರುವಾಗಲೇ ಹೃದಯಾಘಾತ: ಮೃತಪಟ್ಟ ಕೋಚ್!
    • ಅಗಸ್ಟ್ 16 ರಂದು ಧರ್ಮಸ್ಥಳ ಚಲೋ ಅಭಿಯಾನ - ಶಾಸಕ ವಿಶ್ವನಾಥ!
    • ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ:- ಶಾಸಕ ಕಾಮತ್
    • ಎದೆಹಾಲು ದಾನದಲ್ಲಿ ದಾಖಲೆ ಬರೆದ ತಮಿಳುನಾಡಿನ ಮಹಿಳೆ!
    • ಭಾರತದಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿದ ಕೇಂದ್ರ ಗೃಹ ಸಚಿವರಾಗಿ ಅಮಿತ್ ಶಾ ದಾಖಲೆ!
    • ಮಾಲೆಗಾಂ ಸ್ಫೋಟದಲ್ಲಿ ಯೋಗಿ, ಭಾಗವತ್ ಹೆಸರು ಹೇಳಲು ಒತ್ತಡ ಇತ್ತು ಎಂದ ನಿವೃತ್ತ ಮೇಜರ್!
    • "2 ರೂಪಾಯಿ ಡಾಕ್ಟರ್" ನಿಧನ.. ಜನಸಾಮಾನ್ಯರ ಕಂಬನಿ
    • ಬಂಧೀಖಾನೆ ಮುಖ್ಯಸ್ಥರಾಗಿ ದಯಾನಂದ ಮತ್ತೆ ಸೇವೆಯಲ್ಲಿ!
  • Popular Posts

    • 1
      ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
    • 2
      ಮುಂದಿನ ಚುನಾವಣೆಯಲ್ಲಿಯೂ ನನ್ನ ಕೈ ಹಿಡಿಯಿರಿ: ವರುಣಾದಲ್ಲಿ ಸಿಎಂ ಮನವಿ!
    • 3
      ಮಂಗಳೂರು: ಈಜುತ್ತಿರುವಾಗಲೇ ಹೃದಯಾಘಾತ: ಮೃತಪಟ್ಟ ಕೋಚ್!
    • 4
      ಅಗಸ್ಟ್ 16 ರಂದು ಧರ್ಮಸ್ಥಳ ಚಲೋ ಅಭಿಯಾನ - ಶಾಸಕ ವಿಶ್ವನಾಥ!
    • 5
      ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ:- ಶಾಸಕ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search