• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಹಲ್ಗಾಂ ಹತ್ಯಾಕಾಂಡದ ಬೆನ್ನಿಗೆ ಭಾರತದಲ್ಲಿರುವ ಪಾಕ್ ರಾಯಭಾರಿ ಕಚೇರಿಯಲ್ಲಿ ಕೇಕ್!

Tulunadu News Posted On April 24, 2025
0


0
Shares
  • Share On Facebook
  • Tweet It

ಕಾಶ್ಮೀರದ ಪಹಲ್ಗಾಂನಲ್ಲಿ ಭಯೋತ್ಪಾದನಾ ದಾಳಿಯ ನಂತರ ಭಾರತದಲ್ಲಿರುವ ಪಾಕಿಸ್ತಾನದ ರಾಯಭಾರಿ ಕಚೇರಿಯಲ್ಲಿ ಸಂಭ್ರಮೋತ್ಸವ ನಡೆಯಿತಾ ಎನ್ನುವ ಅನುಮಾನಗಳು ದಟ್ಟವಾಗಿದೆ.

ಇದಕ್ಕೆ ಕಾರಣ ಕೇಕ್ ಬಾಕ್ಸೊಂದನ್ನು ಹಿಡಿದುಕೊಂಡು ವ್ಯಕ್ತಿಯೊಬ್ಬ ರಾಯಭಾರಿ ಕಚೇರಿಯ ದಾರಿಯಲ್ಲಿ ಮಾಧ್ಯಮಗಳ ಕಣ್ಣಿಗೆ ಬಿದ್ದಿದ್ದಾನೆ. ನವದೆಹಲಿಯಲ್ಲಿ ಪಾಕ್ ರಾಯಭಾರ ಕಚೇರಿ ಇದೆ. ಅಲ್ಲಿ ಉತ್ತಮ ಪೋಷಾಕನ್ನು ಧರಿಸಿದ ವ್ಯಕ್ತಿಯೊಬ್ಬ ಕೇಕ್ ಬಾಕ್ಸ್ ಒಂದನ್ನು ಹಿಡಿದುಕೊಂಡು ರಾಯಭಾರ ಕಚೇರಿ ಪ್ರವೇಶಿಸಿದ್ದಾನೆ. ಇದು ಯಾವ ಸಂಭ್ರಮಕ್ಕೆ ಎಂದು ಮಾಧ್ಯಮದವರು ಎಷ್ಟೇ ಪ್ರಶ್ನಿಸಿದರೂ ಆತ ಉತ್ತರ ನೀಡಲಿಲ್ಲ. ಇಂತಹ ಸಂದರ್ಭದಲ್ಲಿ ಪಾಕ್ ರಾಯಭಾರಿ ಕಚೇರಿಯಲ್ಲಿ ಯಾವುದೇ ರೀತಿಯ ಸಂಭ್ರಮದ ಆಚರಣೆಗಳು ಬೇಕಾ ಎನ್ನುವ ಪ್ರಶ್ನೆ ಉದ್ಭವಿಸಿದೆ.

ಭಾರತದ ಕಾಶ್ಮೀರದಲ್ಲಿ ಪ್ರವಾಸದಲ್ಲಿ ನಿರತರಾಗಿದ್ದ ಹಿಂದೂ ಕುಟುಂಬಗಳ ಪುರುಷರನ್ನು ಪತ್ತೆ ಹಚ್ಚಿ ಒಂದು ಕಡೆ ಪಾಕ್ ಪ್ರಾಯೋಜಿತ ಉಗ್ರಗಾಮಿಗಳು ಹತ್ಯೆ ಮಾಡುತ್ತಿದ್ದರೆ ಮತ್ತೊಂದೆಡೆ ಮರುದಿನ ಪಾಕ್ ರಾಯಭಾರ ಕಚೇರಿಯಲ್ಲಿ ಕೇಕ್ ತರಿಸುವ ಔಚಿತ್ಯವಾದರೂ ಏನು ಎನ್ನುವ ಬಗ್ಗೆ ಉತ್ತರ ಸಿಕ್ಕಿಲ್ಲ. ಒಂದು ವೇಳೆ ಅಲ್ಲಿ ಯಾರಾದಾದರೂ ಹುಟ್ಟುಹಬ್ಬ ಇದ್ದರೂ ಈ ಪರಿಸ್ಥಿತಿಯಲ್ಲಿ ಕೇಕ್ ತರಿಸುವ ಮೂಲಕ ಬೇರೆ ಸಂದೇಶ ಹೋಗುತ್ತದೆ ಎನ್ನುವ ಕನಿಷ್ಟ ಜ್ಞಾನವಾದರೂ ಅವರಿಗೆ ಬೇಕಿತ್ತು. ಆದರೆ ನಾವು ಯಾವುದಕ್ಕೂ ಕೇರ್ ಮಾಡುವುದಿಲ್ಲ ಎನ್ನುವ ಭಂಡ ಧೈರ್ಯ ಅವರಿಗೆ ಇತ್ತಾ ಎನ್ನುವ ಪ್ರಶ್ನೆ ಉದ್ಭವಿಸಿದೆ.

ಇನ್ನು ಪಾಕ್ ರಾಯಭಾರಿ ಕಚೇರಿಯ ಉನ್ನತ ಅಧಿಕಾರಿ ಸಾದ್ ಅಹ್ಮದ್ ಅವರನ್ನು ಕಳೆದ ರಾತ್ರಿ ಕೇಂದ್ರ ಸರಕಾರ ಕರೆಸಿದ ಬಗ್ಗೆ ಮಾಹಿತಿ ಇದೆಯಾ ಎನ್ನುವ ಬಗ್ಗೆ ಆ ಕೇಕ್ ತಂದವನ ಬಳಿ ಏನೂ ಉತ್ತರವಿರಲಿಲ್ಲ. ಸದ್ಯ ಭಾರತದ ಕೇಂದ್ರ ಸರಕಾರ ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ರಾಯಭಾರ ಸಂಬಂಧಗಳನ್ನು ಕಡಿಮೆಗೊಳಿಸುವ ಸಂಬಂಧ ನಿರ್ಣಯ ಕೈಗೊಂಡಿದ್ದು ಪಾಕ್ ರಾಯಭಾರ ಕಚೇರಿಯ ಅಧಿಕಾರಿಗಳನ್ನು ಮತ್ತು ಅವರ ಸೇನಾ ಸಲಹೆಗಾರರನ್ನು ಮತ್ತೆ ಅವರ ದೇಶಕ್ಕೆ ಕಳುಹಿಸುವ ನಿರ್ಧಾರ ಕೈಗೊಂಡಿದೆ. ಇದರ ಅಂಗವಾಗಿ ನವದೆಹಲಿಯಲ್ಲಿರುವ ಪಾಕ್ ರಾಯಭಾರ ಕಚೇರಿಗೆ ನೀಡಿದ ಮೂರು ಹಂತಗಳ ಸುರಕ್ಷಾ ಬ್ಯಾರಿಕೇಡ್ ಗಳನ್ನು ತೆರವುಗೊಳಿಸಲಾಗಿದೆ.

ಗುರುವಾರ ಈ ಕಚೇರಿಗಳ ಹೊರಗೆ ನಾಗರಿಕರು ಪ್ರತಿಭಟನೆ ನಡೆಸಿ ಪೆಹಲ್ಗಾಂ ಹತ್ಯಾಕಾಂಡದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾವು ನುಗ್ಗಿ ಹೊಡೆಯುತ್ತೇವೆ, ಪಾಕಿಸ್ತಾನ ಮುರ್ದಾಬಾದ್ ಘೋಷಣೆಗಳು ತಾರಕಕ್ಕೆ ಏರಿದ್ದವು.
26 ಜನರ ಹತ್ಯೆಯ ಬಳಿಕ ಭಾರತ ಪಾಕಿಸ್ತಾನದ ಜೊತೆಗೆ ಯಾವುದೇ ಸೌಹಾರ್ದ ಮಾತುಕತೆಯ ಅವಶ್ಯಕತೆ ಇಲ್ಲದವಾಗಿರುವುದರಿಂದ ರಾಯಭಾರ ಕಚೇರಿ ತನ್ನ ಅಸ್ತಿತ್ವವನ್ನು ಈ ಕ್ಷಣಕ್ಕೆ ಕಳೆದುಕೊಂಡಂತೆ ಆಗಿದೆ. ಇದರೊಂದಿಗೆ ಭಾರತದಲ್ಲಿರುವ ಪಾಕಿಗಳಿಗೆ ಭಾರತ ಬಿಟ್ಟು ತೊಲಗುವಂತೆ 48 ಗಂಟೆಗಳ ಸಮಯಾವಕಾಶ ನೀಡಲಾಗಿದೆ. ಅದರೊಂದಿಗೆ ವಾಘಾ- ಅಟ್ಟಾರಿ ಗಡಿಯನ್ನು ಅನಿರ್ದಿಷ್ಠಾವಧಿಗೆ ಮುಚ್ಚಲಾಗಿದೆ.
ಈ ಎಲ್ಲಾ ಬೆಳವಣಿಗೆಯಿಂದ ಪಾಕ್ ಪ್ರಧಾನಿ ಶಹಬಾಜ್ ಷರೀಷ್ ಆತಂಕದ ಸನ್ನಿವೇಶವನ್ನು ಕಳೆಯುವಂತಾಗಿದೆ.

0
Shares
  • Share On Facebook
  • Tweet It




Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Tulunadu News September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search