• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪೆಹಲ್ಗಾಮ್ ಹತ್ಯಾಕಾಂಡ! ಎಪ್ರಿಲ್ 25 ಕ್ಕೆ ದೆಹಲಿ ಬಂದ್!

Tulunadu News Posted On April 24, 2025


  • Share On Facebook
  • Tweet It

ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಆದ ಘಟನೆಯನ್ನು ಖಂಡಿಸಿ ದೆಹಲಿ ವರ್ತಕರ ಸಂಘದವರು ಎಪ್ರಿಲ್ 25 ರಂದು ದೆಹಲಿ ಬಂದ್ ಗೆ ಕರೆ ನೀಡಿದ್ದಾರೆ. ವರ್ತಕರ ವಿವಿಧ ಒಕ್ಕೂಟಗಳು ಜಂಟಿಯಾಗಿ ಈ ಬಂದ್ ನಲ್ಲಿ ಭಾಗವಹಿಸಲಿದ್ದು, ಅಂದು ದೆಹಲಿಯಲ್ಲಿ ಎಲ್ಲಾ ಅಂಗಡಿ, ಮುಂಗಟ್ಟುಗಳು ಬಂದ್ ಆಗಲಿವೆ. ಈ ಮೂಲಕ ಹತ್ಯಾಕಾಂಡದಲ್ಲಿ ಮಡಿದವರ ಕುಟುಂಬಕ್ಕೆ ನೈತಿಕ ಸ್ಥೈರ್ಯ ನೀಡಿ ದೇಶ ತೆಗೆದುಕೊಳ್ಳುವ ಯಾವುದೇ ನಿರ್ಧಾರದೊಂದಿಗೆ ನಿಲ್ಲುವ ದೃಢ ಸಂಕಲ್ಪವನ್ನು ದೆಹಲಿಯ ವ್ಯಾಪಾರಿಗಳು ಮಾಡಿದ್ದಾರೆ.

ಭಯೋತ್ಪಾದಕರು ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಮಿನಿ ಸ್ವಿಝರ್ ಲ್ಯಾಂಡ್ ಎಂದು ಕರೆಸಿಕೊಂಡಿರುವ ಪ್ರದೇಶದಲ್ಲಿ ವಿಹರಿಸುತ್ತಿದ್ದ ಅನೇಕ ಜೋಡಿಗಳಲ್ಲಿ ಹಿಂದೂ ಪುರುಷರನ್ನು ಗುರುತಿಸಿ ಹತ್ಯೆ ಮಾಡಿದ್ದಾರೆ. ಪೆಹಲ್ಗಾಮ್ ದಕ್ಷಿಣ ಕಾಶ್ಮೀರದಲ್ಲಿ ಇದ್ದು, ಭಯೋತ್ಪಾದಕರ ದಾಳಿಯಲ್ಲಿ ಒಟ್ಟು 26 ಜನ ಸಾವೀಗೀಡಾಗಿದ್ದು, ಅನೇಕರು ಗಾಯಾಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಕಣಿವೆ ರಾಜ್ಯದಲ್ಲಿ 2019 ರಲ್ಲಿ ಫುಲ್ವಾಮಾ ದಾಳಿ ನಡೆದು 40 ಸಿ ಆರ್ ಪಿಎಫ್ ಯೋಧರು ಹುತಾತ್ಮರಾದ ನಂತರ ನಡೆದ ಅತೀ ದೊಡ್ಡ ಮಾರಣ ಹೋಮ ಇದಾಗಿದೆ.

ದೆಹಲಿ ವ್ಯಾಪಾರ್ ಮಹಾಸಂಘದವರು ಈ ದುರ್ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದು, ಅಮಾಯಕ ಪ್ರವಾಸಿಗರ ಜೀವವನ್ನು ಕಸಿದ ಭಯೋತ್ಪಾದಕರು ಕಾಶ್ಮೀರದ ಶಾಂತಿ, ಸುವ್ಯವಸ್ಥೆ, ಅಭಿವೃದ್ಧಿಯಯನ್ನು ಹಾಳುಗೆಡವಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಬಂದ್ ಗೆ ಎಲ್ಲಾ ರೀತಿಯ ಉದ್ಯಮ, ವ್ಯವಹಾರ, ವ್ಯಾಪಾರಿಗಳ ಒಕ್ಕೂಟ ಒಕ್ಕೂರಲಿನಿಂದ ಸಹಮತಿಯನ್ನು ತೋರಿಸಿದ್ದು, ಈ ಬಂದ್ ಯಶಸ್ವಿಯಾಗುವುದರಲ್ಲಿ ಸಂಶಯವಿಲ್ಲ ಎಂದು ವರ್ತಕರ ಸಂಘದ ಪ್ರಮುಖರು ಹೇಳಿದ್ದಾರೆ.

” ನಾವು ವ್ಯಾಪಾರಿಗಳನ್ನು, ಅಂಗಡಿ ಮಾಲೀಕರನ್ನು, ಉದ್ಯಮ, ವ್ಯವಹಾರಗಳನ್ನು ನಡೆಸುವವರನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡುವಂತೆ ವಿನಂತಿಸಿದ್ದೇವೆ. ಈ ಮೂಲಕ ಎಪ್ರಿಲ್ 25 ರಂದು ಭಯೋತ್ಪಾದನೆಯ ವಿರುದ್ಧ ದಿಟ್ಟ ಉತ್ತರ ನೀಡಲಿದ್ದೇವೆ” ಎಂದು ವರ್ತಕ ಸಂಘ ಮಾಧ್ಯಮ ಪ್ರಕಟನೆಯಲ್ಲಿ ತಿಳಿಸಿದೆ.

ಈಗಾಗಲೇ ದೆಹಲಿಯ ವರ್ತಕರು ಚಾಂದನಿ ಚೌಕದಲ್ಲಿ ಸೇರಿ ಕ್ಯಾಂಡಲ್ ಮಾರ್ಚ್ ನಡಿಗೆಯ ಮೂಲಕ ಆತಂಕ್ ವಾದ್ ಬಂದ್ ಕರೋ ಘೋಷಣೆ ಮೊಳಗಿಸುತ್ತಾ ಒಗ್ಗಟ್ಟು ಪ್ರದರ್ಶಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
Tulunadu News May 24, 2025
ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
Tulunadu News May 23, 2025
Leave A Reply

  • Recent Posts

    • ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
  • Popular Posts

    • 1
      ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • 2
      ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • 3
      ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • 4
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 5
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search