• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪೆಹಲ್ಗಾಮ್ ಹತ್ಯಾಕಾಂಡ! ಎಪ್ರಿಲ್ 25 ಕ್ಕೆ ದೆಹಲಿ ಬಂದ್!

Tulunadu News Posted On April 24, 2025
0


0
Shares
  • Share On Facebook
  • Tweet It

ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಆದ ಘಟನೆಯನ್ನು ಖಂಡಿಸಿ ದೆಹಲಿ ವರ್ತಕರ ಸಂಘದವರು ಎಪ್ರಿಲ್ 25 ರಂದು ದೆಹಲಿ ಬಂದ್ ಗೆ ಕರೆ ನೀಡಿದ್ದಾರೆ. ವರ್ತಕರ ವಿವಿಧ ಒಕ್ಕೂಟಗಳು ಜಂಟಿಯಾಗಿ ಈ ಬಂದ್ ನಲ್ಲಿ ಭಾಗವಹಿಸಲಿದ್ದು, ಅಂದು ದೆಹಲಿಯಲ್ಲಿ ಎಲ್ಲಾ ಅಂಗಡಿ, ಮುಂಗಟ್ಟುಗಳು ಬಂದ್ ಆಗಲಿವೆ. ಈ ಮೂಲಕ ಹತ್ಯಾಕಾಂಡದಲ್ಲಿ ಮಡಿದವರ ಕುಟುಂಬಕ್ಕೆ ನೈತಿಕ ಸ್ಥೈರ್ಯ ನೀಡಿ ದೇಶ ತೆಗೆದುಕೊಳ್ಳುವ ಯಾವುದೇ ನಿರ್ಧಾರದೊಂದಿಗೆ ನಿಲ್ಲುವ ದೃಢ ಸಂಕಲ್ಪವನ್ನು ದೆಹಲಿಯ ವ್ಯಾಪಾರಿಗಳು ಮಾಡಿದ್ದಾರೆ.

ಭಯೋತ್ಪಾದಕರು ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಮಿನಿ ಸ್ವಿಝರ್ ಲ್ಯಾಂಡ್ ಎಂದು ಕರೆಸಿಕೊಂಡಿರುವ ಪ್ರದೇಶದಲ್ಲಿ ವಿಹರಿಸುತ್ತಿದ್ದ ಅನೇಕ ಜೋಡಿಗಳಲ್ಲಿ ಹಿಂದೂ ಪುರುಷರನ್ನು ಗುರುತಿಸಿ ಹತ್ಯೆ ಮಾಡಿದ್ದಾರೆ. ಪೆಹಲ್ಗಾಮ್ ದಕ್ಷಿಣ ಕಾಶ್ಮೀರದಲ್ಲಿ ಇದ್ದು, ಭಯೋತ್ಪಾದಕರ ದಾಳಿಯಲ್ಲಿ ಒಟ್ಟು 26 ಜನ ಸಾವೀಗೀಡಾಗಿದ್ದು, ಅನೇಕರು ಗಾಯಾಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಕಣಿವೆ ರಾಜ್ಯದಲ್ಲಿ 2019 ರಲ್ಲಿ ಫುಲ್ವಾಮಾ ದಾಳಿ ನಡೆದು 40 ಸಿ ಆರ್ ಪಿಎಫ್ ಯೋಧರು ಹುತಾತ್ಮರಾದ ನಂತರ ನಡೆದ ಅತೀ ದೊಡ್ಡ ಮಾರಣ ಹೋಮ ಇದಾಗಿದೆ.

ದೆಹಲಿ ವ್ಯಾಪಾರ್ ಮಹಾಸಂಘದವರು ಈ ದುರ್ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದು, ಅಮಾಯಕ ಪ್ರವಾಸಿಗರ ಜೀವವನ್ನು ಕಸಿದ ಭಯೋತ್ಪಾದಕರು ಕಾಶ್ಮೀರದ ಶಾಂತಿ, ಸುವ್ಯವಸ್ಥೆ, ಅಭಿವೃದ್ಧಿಯಯನ್ನು ಹಾಳುಗೆಡವಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಬಂದ್ ಗೆ ಎಲ್ಲಾ ರೀತಿಯ ಉದ್ಯಮ, ವ್ಯವಹಾರ, ವ್ಯಾಪಾರಿಗಳ ಒಕ್ಕೂಟ ಒಕ್ಕೂರಲಿನಿಂದ ಸಹಮತಿಯನ್ನು ತೋರಿಸಿದ್ದು, ಈ ಬಂದ್ ಯಶಸ್ವಿಯಾಗುವುದರಲ್ಲಿ ಸಂಶಯವಿಲ್ಲ ಎಂದು ವರ್ತಕರ ಸಂಘದ ಪ್ರಮುಖರು ಹೇಳಿದ್ದಾರೆ.

” ನಾವು ವ್ಯಾಪಾರಿಗಳನ್ನು, ಅಂಗಡಿ ಮಾಲೀಕರನ್ನು, ಉದ್ಯಮ, ವ್ಯವಹಾರಗಳನ್ನು ನಡೆಸುವವರನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡುವಂತೆ ವಿನಂತಿಸಿದ್ದೇವೆ. ಈ ಮೂಲಕ ಎಪ್ರಿಲ್ 25 ರಂದು ಭಯೋತ್ಪಾದನೆಯ ವಿರುದ್ಧ ದಿಟ್ಟ ಉತ್ತರ ನೀಡಲಿದ್ದೇವೆ” ಎಂದು ವರ್ತಕ ಸಂಘ ಮಾಧ್ಯಮ ಪ್ರಕಟನೆಯಲ್ಲಿ ತಿಳಿಸಿದೆ.

ಈಗಾಗಲೇ ದೆಹಲಿಯ ವರ್ತಕರು ಚಾಂದನಿ ಚೌಕದಲ್ಲಿ ಸೇರಿ ಕ್ಯಾಂಡಲ್ ಮಾರ್ಚ್ ನಡಿಗೆಯ ಮೂಲಕ ಆತಂಕ್ ವಾದ್ ಬಂದ್ ಕರೋ ಘೋಷಣೆ ಮೊಳಗಿಸುತ್ತಾ ಒಗ್ಗಟ್ಟು ಪ್ರದರ್ಶಿಸಿದ್ದಾರೆ.

0
Shares
  • Share On Facebook
  • Tweet It




Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Tulunadu News September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search