• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪೆಹಲ್ಗಾಮ್ ಹತ್ಯಾಕಾಂಡ! ಎಪ್ರಿಲ್ 25 ಕ್ಕೆ ದೆಹಲಿ ಬಂದ್!

Tulunadu News Posted On April 24, 2025
0


0
Shares
  • Share On Facebook
  • Tweet It

ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಆದ ಘಟನೆಯನ್ನು ಖಂಡಿಸಿ ದೆಹಲಿ ವರ್ತಕರ ಸಂಘದವರು ಎಪ್ರಿಲ್ 25 ರಂದು ದೆಹಲಿ ಬಂದ್ ಗೆ ಕರೆ ನೀಡಿದ್ದಾರೆ. ವರ್ತಕರ ವಿವಿಧ ಒಕ್ಕೂಟಗಳು ಜಂಟಿಯಾಗಿ ಈ ಬಂದ್ ನಲ್ಲಿ ಭಾಗವಹಿಸಲಿದ್ದು, ಅಂದು ದೆಹಲಿಯಲ್ಲಿ ಎಲ್ಲಾ ಅಂಗಡಿ, ಮುಂಗಟ್ಟುಗಳು ಬಂದ್ ಆಗಲಿವೆ. ಈ ಮೂಲಕ ಹತ್ಯಾಕಾಂಡದಲ್ಲಿ ಮಡಿದವರ ಕುಟುಂಬಕ್ಕೆ ನೈತಿಕ ಸ್ಥೈರ್ಯ ನೀಡಿ ದೇಶ ತೆಗೆದುಕೊಳ್ಳುವ ಯಾವುದೇ ನಿರ್ಧಾರದೊಂದಿಗೆ ನಿಲ್ಲುವ ದೃಢ ಸಂಕಲ್ಪವನ್ನು ದೆಹಲಿಯ ವ್ಯಾಪಾರಿಗಳು ಮಾಡಿದ್ದಾರೆ.

ಭಯೋತ್ಪಾದಕರು ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಮಿನಿ ಸ್ವಿಝರ್ ಲ್ಯಾಂಡ್ ಎಂದು ಕರೆಸಿಕೊಂಡಿರುವ ಪ್ರದೇಶದಲ್ಲಿ ವಿಹರಿಸುತ್ತಿದ್ದ ಅನೇಕ ಜೋಡಿಗಳಲ್ಲಿ ಹಿಂದೂ ಪುರುಷರನ್ನು ಗುರುತಿಸಿ ಹತ್ಯೆ ಮಾಡಿದ್ದಾರೆ. ಪೆಹಲ್ಗಾಮ್ ದಕ್ಷಿಣ ಕಾಶ್ಮೀರದಲ್ಲಿ ಇದ್ದು, ಭಯೋತ್ಪಾದಕರ ದಾಳಿಯಲ್ಲಿ ಒಟ್ಟು 26 ಜನ ಸಾವೀಗೀಡಾಗಿದ್ದು, ಅನೇಕರು ಗಾಯಾಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಕಣಿವೆ ರಾಜ್ಯದಲ್ಲಿ 2019 ರಲ್ಲಿ ಫುಲ್ವಾಮಾ ದಾಳಿ ನಡೆದು 40 ಸಿ ಆರ್ ಪಿಎಫ್ ಯೋಧರು ಹುತಾತ್ಮರಾದ ನಂತರ ನಡೆದ ಅತೀ ದೊಡ್ಡ ಮಾರಣ ಹೋಮ ಇದಾಗಿದೆ.

ದೆಹಲಿ ವ್ಯಾಪಾರ್ ಮಹಾಸಂಘದವರು ಈ ದುರ್ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದು, ಅಮಾಯಕ ಪ್ರವಾಸಿಗರ ಜೀವವನ್ನು ಕಸಿದ ಭಯೋತ್ಪಾದಕರು ಕಾಶ್ಮೀರದ ಶಾಂತಿ, ಸುವ್ಯವಸ್ಥೆ, ಅಭಿವೃದ್ಧಿಯಯನ್ನು ಹಾಳುಗೆಡವಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಬಂದ್ ಗೆ ಎಲ್ಲಾ ರೀತಿಯ ಉದ್ಯಮ, ವ್ಯವಹಾರ, ವ್ಯಾಪಾರಿಗಳ ಒಕ್ಕೂಟ ಒಕ್ಕೂರಲಿನಿಂದ ಸಹಮತಿಯನ್ನು ತೋರಿಸಿದ್ದು, ಈ ಬಂದ್ ಯಶಸ್ವಿಯಾಗುವುದರಲ್ಲಿ ಸಂಶಯವಿಲ್ಲ ಎಂದು ವರ್ತಕರ ಸಂಘದ ಪ್ರಮುಖರು ಹೇಳಿದ್ದಾರೆ.

” ನಾವು ವ್ಯಾಪಾರಿಗಳನ್ನು, ಅಂಗಡಿ ಮಾಲೀಕರನ್ನು, ಉದ್ಯಮ, ವ್ಯವಹಾರಗಳನ್ನು ನಡೆಸುವವರನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡುವಂತೆ ವಿನಂತಿಸಿದ್ದೇವೆ. ಈ ಮೂಲಕ ಎಪ್ರಿಲ್ 25 ರಂದು ಭಯೋತ್ಪಾದನೆಯ ವಿರುದ್ಧ ದಿಟ್ಟ ಉತ್ತರ ನೀಡಲಿದ್ದೇವೆ” ಎಂದು ವರ್ತಕ ಸಂಘ ಮಾಧ್ಯಮ ಪ್ರಕಟನೆಯಲ್ಲಿ ತಿಳಿಸಿದೆ.

ಈಗಾಗಲೇ ದೆಹಲಿಯ ವರ್ತಕರು ಚಾಂದನಿ ಚೌಕದಲ್ಲಿ ಸೇರಿ ಕ್ಯಾಂಡಲ್ ಮಾರ್ಚ್ ನಡಿಗೆಯ ಮೂಲಕ ಆತಂಕ್ ವಾದ್ ಬಂದ್ ಕರೋ ಘೋಷಣೆ ಮೊಳಗಿಸುತ್ತಾ ಒಗ್ಗಟ್ಟು ಪ್ರದರ್ಶಿಸಿದ್ದಾರೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search