• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಂಗಳೂರು, ಭಟ್ಕಳದಲ್ಲಿದ್ದಾರೆ ಪಾಕಿಗಳು.. ಆದರೆ ಅವರನ್ನು ಕಳುಹಿಸಲು ಸಾಧ್ಯವಿಲ್ಲ!

Tulunadu News Posted On April 26, 2025
0


0
Shares
  • Share On Facebook
  • Tweet It

ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರಗಾಮಿಗಳ ಕೃತ್ಯಕ್ಕೆ ಪ್ರತಿಕಾರವಾಗಿ ಭಾರತ ಸರಕಾರವು ಪಾಕ್ ಪ್ರಜೆಗಳ ವೀಸಾ ರದ್ದುಗೊಳಿಸುವ ನಿರ್ಧಾರ ಕೈಗೊಂಡ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂವರು ಪಾಕಿಸ್ತಾನದ ಪ್ರಜೆಗಳನ್ನು ಪೊಲೀಸ್ ಇಲಾಖೆ ಗುರುತಿಸಿದೆ.

ಈ ಮೂವರು ಮಹಿಳೆಯರಾಗಿದ್ದು, ಮಂಗಳೂರು ನಗರದ ವಿವಿಧೆಡೆ ವಾಸವಾಗಿದ್ದಾರೆ. 13 ವರ್ಷಗಳ ಹಿಂದೆ ಕರಾವಳಿ ಕರ್ನಾಟಕದ ಯುವಕರನ್ನು ವಿವಾಹವಾಗಿ ಇಲ್ಲೇ ಪತಿಯ ಕುಟುಂಬದೊಂದಿಗೆ ವಾಸವಾಗಿದ್ದಾರೆ. ಇವರೆಲ್ಲರೂ ದೀರ್ಘಾವಧಿಯ ವೀಸಾ ಯೋಜನೆಯಡಿ ವಾಸವಾಗಿದ್ದಾರೆ. ಕೇಂದ್ರ ಸರಕಾರದ ಸುತ್ತೋಲೆಯ ಪ್ರಕಾರ ದೀರ್ಘಾವಧಿಯ ವೀಸಾ ಹೊಂದಿರುವವರು ತಮ್ಮ ದೇಶಕ್ಕೆ ಹಿಂತಿರುಗುವುದರಿಂದ ವಿನಾಯ್ತಿ ಪಡೆದಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ.

ವಿದೇಶಾಂಗ ಇಲಾಖೆಯ ಸುತ್ತೋಲೆಯಂತೆ ಯಾವ ಪಾಕಿಸ್ತಾನಿಯ ಬಳಿ ಭಾರತದ ದೀರ್ಘಾವಧಿಯ ವೀಸಾ ಇರುತ್ತದೆಯೋ ಅದು ಸಿಂಧುವಾಗಿರುತ್ತದೆ. ವಿದೇಶಾಂಗ ಇಲಾಖೆಯ ಕಾರ್ಯದರ್ಶಿ ವಿಕ್ರಂ ಮಿಸ್ತ್ರಿಯವರು ಸುದ್ದಿಗೋಷ್ಟಿ ನಡೆಸಿ ಪಾಕಿಸ್ತಾನಿಗಳು ಭಾರತದಲ್ಲಿದ್ದರೆ ಅವರ ವೀಸಾ ರದ್ದುಗೊಳ್ಳುವುದರಿಂದ ತಕ್ಷಣ ಪಾಕಿಸ್ತಾನಕ್ಕೆ ಹಿಂತಿರುಗಬೇಕು ಎಂದು ಸೂಚಿಸಿದ್ದರು. ಅದರ ಬೆನ್ನಲ್ಲೇ ದೀರ್ಘಾವಧಿಯ ವೀಸಾ ಹೊಂದಿರುವವರಿಗೂ ಗೊಂದಲ ಎರ್ಪಟ್ಟಿತ್ತು. ಆದರೆ ಈಗ ಸ್ಪಷ್ಟನೆ ಸಿಕ್ಕಿದ್ದು, ಪ್ರವಾಸಿ ವೀಸಾದಲ್ಲಿರುವವರು ಮಾತ್ರ 48 ಗಂಟೆಯೊಳಗೆ ಹಾಗೂ ವೈದ್ಯಕೀಯ ಚಿಕಿತ್ಸೆಗೆ ಒಳಪಟ್ಟಿರುವವರು 29 ಎಪ್ರಿಲ್ ಒಳಗೆ ಹಿಂತಿರುಗಬೇಕು ಎಂದು ತಿಳಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಪಾಕಿಸ್ತಾನದ ಪ್ರಜೆಗಳು ನೆಲೆಸಿದ್ದಾರೆ. ಭಟ್ಕಳದಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ನವಾಯತ್ ಮುಸ್ಲಿಮರು ಇರುವುದರಿಂದ ಅವರಲ್ಲಿ ಅನೇಕರು ಪಾಕಿಸ್ತಾನದ ಯುವತಿಯರು ಮದುವೆಯಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 15 ಪಾಕಿಸ್ತಾನಿ ಪ್ರಜೆಗಳು ಇದ್ದರೆ ಅದರಲ್ಲಿ 14 ಜನ ಭಟ್ಕಳದಲ್ಲಿ ಮತ್ತು ಒಬ್ಬರು ಕಾರವಾರದಲ್ಲಿದ್ದಾರೆ. ಭಟ್ಕಳದಲ್ಲಿರುವ ಪಾಕಿಸ್ತಾನಿಗಳ ಪೈಕಿ 14 ಮಹಿಳೆಯರಾಗಿದ್ದಾರೆ. ಈ ಎಲ್ಲಾ ಹೆಂಗಸರು ಭಟ್ಕಳದಲ್ಲಿರುವ ಮುಸ್ಲಿಂ ಸಂಬಂಧಿಗಳನ್ನು ಮದುವೆಯಾಗಿ ಇಲ್ಲಿಯೇ ನೆಲೆಸಿದ್ದಾರೆ. ಈ ವೀಸಾಗಳು ಪ್ರತಿ ಎರಡು ವರ್ಷಗಳಿಗೊಮ್ಮೆ ರಿನಿವಲ್ ಆಗುತ್ತಾ ಇರುತ್ತವೆ. ಇವರೆಲ್ಲರೂ ಭಾರತೀಯ ಪೌರತ್ವಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಭಾರತೀಯರನ್ನು ಮದುವೆಯಾಗಿ ಇಲ್ಲಿಯೇ ನೆಲೆಸಿದರೆ ಅಂತವರಿಗೆ ದೀರ್ಘಾವಧಿಯ ವೀಸಾ ನೀಡುವ ಪದ್ಧತಿ ಜಾರಿಯಲ್ಲಿದೆ. ಕರ್ನಾಟಕದಲ್ಲಿ ಅಂದಾಜು 88 ಪಾಕಿಸ್ತಾನಿಗಳು ಇದ್ದರೆ 84 ಜನ ದೀರ್ಘಾವಧಿ ವೀಸಾ ಹೊಂದಿದ್ದಾರೆ.

0
Shares
  • Share On Facebook
  • Tweet It




Trending Now
ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
Tulunadu News July 15, 2025
ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
Tulunadu News July 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
    • ಜಪಾನ್ ಮ್ಯಾರಥಾನ್.. 46 ಗಂಟೆ ನಿದ್ದೆ ಮಾಡದೇ ಓಡಿದ ಕನ್ನಡತಿ ಅಶ್ವಿನಿ!
    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
  • Popular Posts

    • 1
      ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • 2
      ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • 3
      ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • 4
      ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • 5
      ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!

  • Privacy Policy
  • Contact
© Tulunadu Infomedia.

Press enter/return to begin your search