• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕಿಸ್ತಾನ ಧ್ವಜಕ್ಕೆ ಅವಮಾನ, ಭಜರಂಗದಳದ ಕಾರ್ಯಕರ್ತರು ಪೊಲೀಸ್ ವಶಕ್ಕೆ!

Tulunadu News Posted On April 26, 2025
0


0
Shares
  • Share On Facebook
  • Tweet It

ಜಮ್ಮು ಕಾಶ್ಮೀರದ ಪ್ರಮುಖ ಪ್ರವಾಸಿ ಕೇಂದ್ರ ಪಹಲ್ಗಾಮ್ ನಲ್ಲಿ ಉಗ್ರಗಾಮಿಗಳು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆಯನ್ನು ಖಂಡಿಸಿ ಭಜರಂಗದಳದ ಕಾರ್ಯಕರ್ತರು ಕಲಬುರಗಿ ನಗರದಲ್ಲಿ ಎಪ್ರಿಲ್ 25 ರಂದು ವಿನೂತನವಾಗಿ ಪ್ರತಿಭಟಿಸಿದರು. ಪಾಕಿಸ್ತಾನದ ರಾಷ್ಟ್ರಧ್ವಜವನ್ನು ರಸ್ತೆ ಮತ್ತು ಇಕ್ಕೆಲಗಳಲ್ಲಿ ಬರೆದು ಸಾರ್ವಜನಿಕರು ಅದರ ಮೇಲೆ ಓಡಾಡಿ ತುಳಿದು ಅವಮಾನ ಮಾಡುವ ರೀತಿಯಲ್ಲಿ ವಿನೂತನವಾಗಿ ಪ್ರತಿಭಟನೆ ಮಾಡಿದ್ದರು.

ಈ ಹಿನ್ನಲೆಯಲ್ಲಿ ಪೊಲೀಸರು ಹಲವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಉಗ್ರರು ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ದಾಳಿ ಮಾಡಿರುವುದಕ್ಕೆ ಪ್ರತಿಕಾರವಾಗಿ ನಾವು ಪಾಕಿಸ್ತಾನದ ಧ್ವಜವನ್ನು ಕಾಲಡಿಯಲ್ಲಿ ತುಳಿದು ಸಾರ್ವಜನಿಕವಾಗಿ ಅವಮಾನ ಮಾಡುತ್ತಿದ್ದೇವೆ ಎಂದು ಬಜರಂಗದಳದ ಕಾರ್ಯಕರ್ತರು ಒಪ್ಪಿಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

ಆರಂಭದಲ್ಲಿ ಪಾಕಿಸ್ತಾನದ ಧ್ವಜವನ್ನು ರಸ್ತೆಯ ಮೇಲೆ ಅಂಟಿಸಿರುವುದು ಯಾರು ಎನ್ನುವ ಪ್ರಶ್ನೆ ಉಂಟಾಗಿತ್ತು. ಯಾಕೆಂದರೆ ಇಂತಹ ಘಟನೆಗಳಿಂದ ಪರಿಸರದಲ್ಲಿ ಉದ್ವಿಗ್ನ ವಾತಾವರಣ ಉಂಟಾಗುವ ಸಾಧ್ಯತೆ ಇತ್ತು. ಆದ್ದರಿಂದ ಪೊಲೀಸರು ಎಚ್ಚರಿಕೆಯ ಹೆಜ್ಜೆಗಳನ್ನು ಇಟ್ಟಿದ್ದರು. ನಂತರ ಈ ಘಟನೆಯನ್ನು ತಾವು ಮಾಡಿದ್ದಾಗಿ ಬಜರಂಗದಳದ ಕಾರ್ಯಕರ್ತರು ಸಮರ್ಥಿಸಿಕೊಂಡರು. ಕಲಬುರಗಿಯ ಜಗತ್ ವೃತ್ತ, ಸೂಪರ್ ಮಾರ್ಕೆಟ್ ಹಾಗೂ ಇನ್ನು ಕೆಲವು ಕಡೆಗಳಲ್ಲಿ ಪಾಕಿಸ್ತಾನ ಧ್ವಜವನ್ನು ನೆಲದ ಮೇಲೆ ಅಂಟಿಸಲಾಗಿತ್ತು.ಈ ಬಗ್ಗೆ ಪೊಲೀಸ್ ಕಮೀಷನರ್ ಎಸ್ ಡಿ ಶರಣಪ್ಪ ಅವರು ಮಾತನಾಡಿ ” ಸ್ಟಿಕ್ಕರ್ ಗಳನ್ನು ಅಂಟಿಸುವ ಪ್ರತಿಭಟನೆಗೆ ಯಾವುದೇ ರೀತಿಯ ಅನುಮತಿಯನ್ನು ಪಡೆದಿರಲಿಲ್ಲ” ಎಂದು ತಿಳಿಸಿದರು.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!
  • Popular Posts

    • 1
      ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • 2
      ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!

  • Privacy Policy
  • Contact
© Tulunadu Infomedia.

Press enter/return to begin your search