• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕಿಸ್ತಾನ ಧ್ವಜಕ್ಕೆ ಅವಮಾನ, ಭಜರಂಗದಳದ ಕಾರ್ಯಕರ್ತರು ಪೊಲೀಸ್ ವಶಕ್ಕೆ!

Tulunadu News Posted On April 26, 2025
0


0
Shares
  • Share On Facebook
  • Tweet It

ಜಮ್ಮು ಕಾಶ್ಮೀರದ ಪ್ರಮುಖ ಪ್ರವಾಸಿ ಕೇಂದ್ರ ಪಹಲ್ಗಾಮ್ ನಲ್ಲಿ ಉಗ್ರಗಾಮಿಗಳು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆಯನ್ನು ಖಂಡಿಸಿ ಭಜರಂಗದಳದ ಕಾರ್ಯಕರ್ತರು ಕಲಬುರಗಿ ನಗರದಲ್ಲಿ ಎಪ್ರಿಲ್ 25 ರಂದು ವಿನೂತನವಾಗಿ ಪ್ರತಿಭಟಿಸಿದರು. ಪಾಕಿಸ್ತಾನದ ರಾಷ್ಟ್ರಧ್ವಜವನ್ನು ರಸ್ತೆ ಮತ್ತು ಇಕ್ಕೆಲಗಳಲ್ಲಿ ಬರೆದು ಸಾರ್ವಜನಿಕರು ಅದರ ಮೇಲೆ ಓಡಾಡಿ ತುಳಿದು ಅವಮಾನ ಮಾಡುವ ರೀತಿಯಲ್ಲಿ ವಿನೂತನವಾಗಿ ಪ್ರತಿಭಟನೆ ಮಾಡಿದ್ದರು.

ಈ ಹಿನ್ನಲೆಯಲ್ಲಿ ಪೊಲೀಸರು ಹಲವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಉಗ್ರರು ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ದಾಳಿ ಮಾಡಿರುವುದಕ್ಕೆ ಪ್ರತಿಕಾರವಾಗಿ ನಾವು ಪಾಕಿಸ್ತಾನದ ಧ್ವಜವನ್ನು ಕಾಲಡಿಯಲ್ಲಿ ತುಳಿದು ಸಾರ್ವಜನಿಕವಾಗಿ ಅವಮಾನ ಮಾಡುತ್ತಿದ್ದೇವೆ ಎಂದು ಬಜರಂಗದಳದ ಕಾರ್ಯಕರ್ತರು ಒಪ್ಪಿಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

ಆರಂಭದಲ್ಲಿ ಪಾಕಿಸ್ತಾನದ ಧ್ವಜವನ್ನು ರಸ್ತೆಯ ಮೇಲೆ ಅಂಟಿಸಿರುವುದು ಯಾರು ಎನ್ನುವ ಪ್ರಶ್ನೆ ಉಂಟಾಗಿತ್ತು. ಯಾಕೆಂದರೆ ಇಂತಹ ಘಟನೆಗಳಿಂದ ಪರಿಸರದಲ್ಲಿ ಉದ್ವಿಗ್ನ ವಾತಾವರಣ ಉಂಟಾಗುವ ಸಾಧ್ಯತೆ ಇತ್ತು. ಆದ್ದರಿಂದ ಪೊಲೀಸರು ಎಚ್ಚರಿಕೆಯ ಹೆಜ್ಜೆಗಳನ್ನು ಇಟ್ಟಿದ್ದರು. ನಂತರ ಈ ಘಟನೆಯನ್ನು ತಾವು ಮಾಡಿದ್ದಾಗಿ ಬಜರಂಗದಳದ ಕಾರ್ಯಕರ್ತರು ಸಮರ್ಥಿಸಿಕೊಂಡರು. ಕಲಬುರಗಿಯ ಜಗತ್ ವೃತ್ತ, ಸೂಪರ್ ಮಾರ್ಕೆಟ್ ಹಾಗೂ ಇನ್ನು ಕೆಲವು ಕಡೆಗಳಲ್ಲಿ ಪಾಕಿಸ್ತಾನ ಧ್ವಜವನ್ನು ನೆಲದ ಮೇಲೆ ಅಂಟಿಸಲಾಗಿತ್ತು.ಈ ಬಗ್ಗೆ ಪೊಲೀಸ್ ಕಮೀಷನರ್ ಎಸ್ ಡಿ ಶರಣಪ್ಪ ಅವರು ಮಾತನಾಡಿ ” ಸ್ಟಿಕ್ಕರ್ ಗಳನ್ನು ಅಂಟಿಸುವ ಪ್ರತಿಭಟನೆಗೆ ಯಾವುದೇ ರೀತಿಯ ಅನುಮತಿಯನ್ನು ಪಡೆದಿರಲಿಲ್ಲ” ಎಂದು ತಿಳಿಸಿದರು.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 4
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 5
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search