• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪಾಕಿಸ್ತಾನ ಟಿವಿಯಲ್ಲಿ ಸಿದ್ಧರಾಮಯ್ಯನವರ ಹೇಳಿಕೆ ಸುದ್ದಿ!

Tulunadu News Posted On April 28, 2025


  • Share On Facebook
  • Tweet It

ಭಾರತದ ಕಾಶ್ಮೀರದ ಪಹಲ್ಗಾಂನ ವಿಹರಿಸುತ್ತಿದ್ದ ಪ್ರವಾಸಿಗರ ಮೇಲೆ ಪಾಕ್ ಉಗ್ರಗಾಮಿಗಳು ದಾಳಿ ಮಾಡಿ 26 ಜನರ ಸಾವಿಗೆ ಕಾರಣರಾದ ಬಳಿಕ ಯಾವುದೇ ಕ್ಷಣದಲ್ಲಿಯೂ ಪಾಕಿಸ್ತಾನದ ಮೇಲೆ ಭಾರತ ಮುಗಿಬೀಳುವ ಸಾಧ್ಯತೆ ಇದ್ದು, ಈ ನಡುವೆ ಯುದ್ಧದ ಪರ ಮತ್ತು ಕೆಲವರು ಯುದ್ಧದ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ನಡುವೆ ಯಾರೂ ಊಹಿಸಲಾರದ ವಿದ್ಯಮಾನವೊಂದು ಜರುಗಿದೆ.

ಪಾಕಿಸ್ತಾನದ ವಿರುದ್ಧ ಯುದ್ಧ ಅನಗತ್ಯ ಎಂದು ಹೇಳಿಕೆ ನೀಡಿದ ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯನವರನ ಮಾತನ್ನೇ ಸುದ್ದಿಯನ್ನಾಗಿಸಿಕೊಂಡಿರುವ ಪಾಕಿಸ್ತಾನದ ಟಿವಿ ವಾಹಿನಿಯೊಂದು ಅದನ್ನೇ ಸ್ಟೋರಿ ಮಾಡಿದೆ. ಭಾರತದಲ್ಲಿಯೂ ಯುದ್ಧಕ್ಕೆ ಅಪಸ್ವರವಿದೆ ಎಂದು ಹೇಳಿರುವ ನಿರೂಪಕಿ ಅದಕ್ಕೆ ಸಾಕ್ಷಿಯನ್ನಾಗಿಸಿ ಸಿದ್ಧರಾಮಯ್ಯನವರನ್ನು ಉದಾಹರಿಸಿದ್ದಾರೆ.

ಒಂದು ರಾಜ್ಯದ ಮುಖ್ಯಮಂತ್ರಿಯೇ ಪಾಕಿಸ್ತಾನದ ವಿರುದ್ಧ ಯುದ್ಧ ಸಾರುವುದಕ್ಕೆ ವಿರೋಧವಾಗಿದೆ ಎನ್ನುವ ಅರ್ಥದ ಸುದ್ದಿಯನ್ನು ಪಾಕಿಸ್ತಾನದ ಟಿವಿ ವಾಹಿನಿ ಪ್ರಸಾರ ಮಾಡಿದೆ. ಈ ಮೂಲಕ ಭಾರತದಲ್ಲಿ ಪಾಕ್ ಮೇಲಿನ ಯುದ್ಧದ ಬಗ್ಗೆ ಎಲ್ಲರಲ್ಲಿಯೂ ಸಹಮತವಿಲ್ಲ ಎನ್ನುವ ಸಂದೇಶವನ್ನು ಸಾರಲಾಗಿದೆ. ನಿರೂಪಕಿ ಮುಂದುವರೆದು ಪಾಕಿಸ್ತಾನದ ಮೇಲೆ ಯುದ್ಧ ಮಾಡುವ ಯಾವ ಅಗತ್ಯವೂ ಇಲ್ಲ. ಪೆಹಲ್ಗಾಂ ಕೃತ್ಯ ಭಾರತದ ಭದ್ರತಾ ವೈಫಲ್ಯ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ ಎಂದು ಸಿದ್ಧರಾಮಯ್ಯನವರ ಫೋಟೋ ತೋರಿಸಿ ಹೇಳಿದ್ದಾರೆ. ಸಿದ್ಧರಾಮಯ್ಯನವರ ಹೇಳಿಕೆಯನ್ನು ಬಿಜೆಪಿ ಮುಖಂಡರು ವಿರೋಧಿಸಿದ್ದಾರೆ ಎಂದು ಕೂಡ ನಿರೂಪಕಿ ಸೇರಿಸಿದ್ದಾರೆ. ಸಿದ್ಧರಾಮಯ್ಯನವರು ಯುದ್ಧದ ವಿರುದ್ಧ ತಮ್ಮ ಹೇಳಿಕೆಯಿಂದ ಕರ್ನಾಟಕದಲ್ಲಿ ಸುದ್ದಿಯಲ್ಲಿದ್ದು ನಿಜ. ಆದರೆ ಅವರ ಈ ಹೇಳಿಕೆಯನ್ನು ಪಾಕಿಸ್ತಾನದ ಟಿವಿ ಚಾನೆಲ್ ಒಂದು ಸುದ್ದಿ ಮಾಡುತ್ತದೆ ಎಂದು ಯಾರೂ ಊಹಿಸಿರಲಿಲ್ಲ. ಆದರೆ ಪಾಕಿಸ್ತಾನದ ಮಾಧ್ಯಮದವರಿಗೆ ಇದೊಂದು ಖುಷಿಯ ಸಂಗತಿಯಾಗಿದೆ.

ಭಾರತದಲ್ಲಿ ಸಮರದ ಬಗ್ಗೆ ಏಕಧ್ವನಿ ಇಲ್ಲ ಎನ್ನುವುದನ್ನು ಅವರು ವಿಶ್ವಕ್ಕೆ ತಿಳಿಸಬೇಕಿತ್ತು. ಅದಕ್ಕೆ ಒಬ್ಬ ಪ್ರಮುಖ ನಾಯಕನ ಹೇಳಿಕೆ ಅವರಿಗೆ ಅಗತ್ತವಿತ್ತು. ಅದು ಸಿದ್ಧರಾಮಯ್ಯ ಮೂಲಕ ಅವರಿಗೆ ಸಿಕ್ಕಿದೆ.

ಆದರೆ ಈ ಹೇಳಿಕೆ ಪಾಕಿಸ್ತಾನದಲ್ಲಿ ಸದ್ದು ಮಾಡುತ್ತಿರುವುದು ಗೊತ್ತಾದ ನಂತರ ಸಿದ್ಧರಾಮಯ್ಯ ಉಲ್ಟಾ ಹೊಡೆದಿದ್ದಾರೆ. ತಾವು ಯುದ್ಧದ ವಿರುದ್ಧ ಹೇಳಿಕೆ ನೀಡಿಲ್ಲ ಎಂದಿದ್ದಾರೆ. ಸಿದ್ಧರಾಮಯ್ಯನವರ ಈ ಹೇಳಿಕೆಗಳಿಂದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಂತರ ಕಾಯ್ದುಕೊಂಡಿದ್ದಾರೆ.

  • Share On Facebook
  • Tweet It


- Advertisement -


Trending Now
ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
Tulunadu News May 24, 2025
ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
Tulunadu News May 23, 2025
Leave A Reply

  • Recent Posts

    • ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
  • Popular Posts

    • 1
      ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • 2
      ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • 3
      ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • 4
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 5
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search