• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕಿಸ್ತಾನ ಟಿವಿಯಲ್ಲಿ ಸಿದ್ಧರಾಮಯ್ಯನವರ ಹೇಳಿಕೆ ಸುದ್ದಿ!

Tulunadu News Posted On April 28, 2025
0


0
Shares
  • Share On Facebook
  • Tweet It

ಭಾರತದ ಕಾಶ್ಮೀರದ ಪಹಲ್ಗಾಂನ ವಿಹರಿಸುತ್ತಿದ್ದ ಪ್ರವಾಸಿಗರ ಮೇಲೆ ಪಾಕ್ ಉಗ್ರಗಾಮಿಗಳು ದಾಳಿ ಮಾಡಿ 26 ಜನರ ಸಾವಿಗೆ ಕಾರಣರಾದ ಬಳಿಕ ಯಾವುದೇ ಕ್ಷಣದಲ್ಲಿಯೂ ಪಾಕಿಸ್ತಾನದ ಮೇಲೆ ಭಾರತ ಮುಗಿಬೀಳುವ ಸಾಧ್ಯತೆ ಇದ್ದು, ಈ ನಡುವೆ ಯುದ್ಧದ ಪರ ಮತ್ತು ಕೆಲವರು ಯುದ್ಧದ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ನಡುವೆ ಯಾರೂ ಊಹಿಸಲಾರದ ವಿದ್ಯಮಾನವೊಂದು ಜರುಗಿದೆ.

ಪಾಕಿಸ್ತಾನದ ವಿರುದ್ಧ ಯುದ್ಧ ಅನಗತ್ಯ ಎಂದು ಹೇಳಿಕೆ ನೀಡಿದ ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯನವರನ ಮಾತನ್ನೇ ಸುದ್ದಿಯನ್ನಾಗಿಸಿಕೊಂಡಿರುವ ಪಾಕಿಸ್ತಾನದ ಟಿವಿ ವಾಹಿನಿಯೊಂದು ಅದನ್ನೇ ಸ್ಟೋರಿ ಮಾಡಿದೆ. ಭಾರತದಲ್ಲಿಯೂ ಯುದ್ಧಕ್ಕೆ ಅಪಸ್ವರವಿದೆ ಎಂದು ಹೇಳಿರುವ ನಿರೂಪಕಿ ಅದಕ್ಕೆ ಸಾಕ್ಷಿಯನ್ನಾಗಿಸಿ ಸಿದ್ಧರಾಮಯ್ಯನವರನ್ನು ಉದಾಹರಿಸಿದ್ದಾರೆ.

ಒಂದು ರಾಜ್ಯದ ಮುಖ್ಯಮಂತ್ರಿಯೇ ಪಾಕಿಸ್ತಾನದ ವಿರುದ್ಧ ಯುದ್ಧ ಸಾರುವುದಕ್ಕೆ ವಿರೋಧವಾಗಿದೆ ಎನ್ನುವ ಅರ್ಥದ ಸುದ್ದಿಯನ್ನು ಪಾಕಿಸ್ತಾನದ ಟಿವಿ ವಾಹಿನಿ ಪ್ರಸಾರ ಮಾಡಿದೆ. ಈ ಮೂಲಕ ಭಾರತದಲ್ಲಿ ಪಾಕ್ ಮೇಲಿನ ಯುದ್ಧದ ಬಗ್ಗೆ ಎಲ್ಲರಲ್ಲಿಯೂ ಸಹಮತವಿಲ್ಲ ಎನ್ನುವ ಸಂದೇಶವನ್ನು ಸಾರಲಾಗಿದೆ. ನಿರೂಪಕಿ ಮುಂದುವರೆದು ಪಾಕಿಸ್ತಾನದ ಮೇಲೆ ಯುದ್ಧ ಮಾಡುವ ಯಾವ ಅಗತ್ಯವೂ ಇಲ್ಲ. ಪೆಹಲ್ಗಾಂ ಕೃತ್ಯ ಭಾರತದ ಭದ್ರತಾ ವೈಫಲ್ಯ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ ಎಂದು ಸಿದ್ಧರಾಮಯ್ಯನವರ ಫೋಟೋ ತೋರಿಸಿ ಹೇಳಿದ್ದಾರೆ. ಸಿದ್ಧರಾಮಯ್ಯನವರ ಹೇಳಿಕೆಯನ್ನು ಬಿಜೆಪಿ ಮುಖಂಡರು ವಿರೋಧಿಸಿದ್ದಾರೆ ಎಂದು ಕೂಡ ನಿರೂಪಕಿ ಸೇರಿಸಿದ್ದಾರೆ. ಸಿದ್ಧರಾಮಯ್ಯನವರು ಯುದ್ಧದ ವಿರುದ್ಧ ತಮ್ಮ ಹೇಳಿಕೆಯಿಂದ ಕರ್ನಾಟಕದಲ್ಲಿ ಸುದ್ದಿಯಲ್ಲಿದ್ದು ನಿಜ. ಆದರೆ ಅವರ ಈ ಹೇಳಿಕೆಯನ್ನು ಪಾಕಿಸ್ತಾನದ ಟಿವಿ ಚಾನೆಲ್ ಒಂದು ಸುದ್ದಿ ಮಾಡುತ್ತದೆ ಎಂದು ಯಾರೂ ಊಹಿಸಿರಲಿಲ್ಲ. ಆದರೆ ಪಾಕಿಸ್ತಾನದ ಮಾಧ್ಯಮದವರಿಗೆ ಇದೊಂದು ಖುಷಿಯ ಸಂಗತಿಯಾಗಿದೆ.

ಭಾರತದಲ್ಲಿ ಸಮರದ ಬಗ್ಗೆ ಏಕಧ್ವನಿ ಇಲ್ಲ ಎನ್ನುವುದನ್ನು ಅವರು ವಿಶ್ವಕ್ಕೆ ತಿಳಿಸಬೇಕಿತ್ತು. ಅದಕ್ಕೆ ಒಬ್ಬ ಪ್ರಮುಖ ನಾಯಕನ ಹೇಳಿಕೆ ಅವರಿಗೆ ಅಗತ್ತವಿತ್ತು. ಅದು ಸಿದ್ಧರಾಮಯ್ಯ ಮೂಲಕ ಅವರಿಗೆ ಸಿಕ್ಕಿದೆ.

ಆದರೆ ಈ ಹೇಳಿಕೆ ಪಾಕಿಸ್ತಾನದಲ್ಲಿ ಸದ್ದು ಮಾಡುತ್ತಿರುವುದು ಗೊತ್ತಾದ ನಂತರ ಸಿದ್ಧರಾಮಯ್ಯ ಉಲ್ಟಾ ಹೊಡೆದಿದ್ದಾರೆ. ತಾವು ಯುದ್ಧದ ವಿರುದ್ಧ ಹೇಳಿಕೆ ನೀಡಿಲ್ಲ ಎಂದಿದ್ದಾರೆ. ಸಿದ್ಧರಾಮಯ್ಯನವರ ಈ ಹೇಳಿಕೆಗಳಿಂದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಂತರ ಕಾಯ್ದುಕೊಂಡಿದ್ದಾರೆ.

0
Shares
  • Share On Facebook
  • Tweet It




Trending Now
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
  • Popular Posts

    • 1
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 2
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search