• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಣ್ಣೇದುರೇ ಶೂಟೌಟ್, ಜಿಪ್ ಲೈನ್ ಆಪರೇಟರ್ “ಅಲ್ಲಾಹು ಅಕ್ಬರ್”! ತನಿಖೆ ಶುರು..

Tulunadu News Posted On April 29, 2025
0


0
Shares
  • Share On Facebook
  • Tweet It

ಪೆಹಲ್ಗಾಂನಲ್ಲಿ ಉಗ್ರಗಾಮಿಗಳು ಅಮಾಯಕ ಹಿಂದೂ ಪ್ರವಾಸಿಗರನ್ನೇ ಗುರಿಯಾಗಿಟ್ಟು ಗುಂಡಿನ ದಾಳಿ ಮಾಡಿದಾಗ ಒಬ್ಬ ಪ್ರವಾಸಿ ಜಿಪ್ ಲೈನ್ ( ರೋಪ್ ವೇ) ನಲ್ಲಿ ನೇತಾಡಲು ಸಜ್ಜಾಗಿದ್ದ. ಅವರ ಹೆಸರು ರಿಶಿ ಭಟ್. ಅವರು ಇನ್ನೇನೂ ಅಲ್ಲಿಂದ ಮೂವ್ ಆಗಬೇಕು ಎನ್ನುವ ಕೆಲವೇ ಸೆಕೆಂಡ್ ಗಳ ಮೊದಲು ಅಲ್ಲಿದ್ದ ಜಿಪ್ ಲೈನ್ ಆಪರೇಟರ್ ಅಲ್ಲಾಹು ಅಕ್ಬರ್ ಎನ್ನುವ ಶಬ್ದಗಳನ್ನು ಉಚ್ಚರಿಸಿದ್ದಾನೆ. ಅವನು ಹಾಗೆ ಹೇಳುವಾಗ ಕೆಳಗೆ ನೋಡುತ್ತಿದ್ದ. ಆಗ ಗುಂಡಿನ ಶಬ್ದಗಳು ಕೇಳಿಸಿವೆ. ಅದನ್ನು ನೋಡಿಯೇ ಅವನು ಹಾಗೆ ಪಠಿಸುತ್ತಾ ಈ ರಿಶಿ ಭಟ್ ಎನ್ನುವ ಪ್ರವಾಸಿಯನ್ನು ಕೆಳಗೆ ಕಳುಹಿಸಲು ಸಜ್ಜಾಗಿದ್ದಾನೆ.

ಇದರ ಅರ್ಥ ಏನು?

ಈ ಪ್ರವಾಸಿ ಕೂಡ ಸಾಯಲಿ ಎನ್ನುವ ಕಾರಣಕ್ಕಾ? ಒಂದು ವೇಳೆ ಅಲ್ಲಿ ಜಿಪ್ ಲೈನ್ ಆಪರೇಟರ್ ಗೆ ಭಯೋತ್ಪಾದಕರು ಕಾಣಿಸದೇ ಇದ್ದಲ್ಲಿ ಆ ವಿಷಯ ಬೇರೆ. ಆದರೆ ಇಲ್ಲಿ ಬಹಳ ಸ್ಪಷ್ಟವಾಗಿ ಮರದ ಮೇಲೆ ನಿಂತಿರುವ ಆಪರೇಟರ್ ಗೂ ಆತನ ಹಿಂದೆ ನಿಂತಿರುವ ಇನ್ನೊಬ್ಬ ವ್ಯಕ್ತಿಗೂ ಎಲ್ಲವೂ ಬಹಳ ನಿಖರವಾಗಿ ಕಾಣಿಸುತ್ತಿತ್ತು. ಅದರ ನಂತರವೇ ಈ ಪ್ರವಾಸಿಗನನ್ನು ಕೆಳಗೆ ಬಿಡಲಾಗಿದೆ. ಇಲ್ಲಿ ಆ ಸ್ಥಳೀಯ ಆಪರೇಟರ್ ಮತ್ತು ಅವನ ಜೊತೆಗಿದ್ದ ವ್ಯಕ್ತಿಗೆ ಈ ಗುಂಡಿನ ಮೊರೆತ ಕೇಳಿಸುತ್ತಿತ್ತು. ಇದರಿಂದ ಆ ಉಗ್ರರಿಗೆ ಇವರೇ ಸುಳಿವು ಕೊಟ್ಟು ರೈಟ್ ಟೈಮ್ ಬಗ್ಗೆ ಹಿಂಟ್ ಕೊಟ್ಟರಾ ಎನ್ನುವ ಬಗ್ಗೆ ಈಗ ತನಿಖೆ ನಡೆಯುತ್ತಿದೆ. ರಾಷ್ಟ್ರೀಯ ತನಿಖಾ ದಳದವರು ಜಿಪ್ ಲೈನ್ ಆಪರೇಟರನನ್ನು ತೀವ್ರವಾಗಿ ವಿಚಾರಿಸುತ್ತಿದ್ದಾರೆ.

ಈ ಬಗ್ಗೆ ಮಾತನಾಡಿರುವ ಪಿಡಿಪಿ ವಕ್ತಾರ ಮೊಹಮ್ಮದ್ ಇಕ್ಬಾಲ್ ಟ್ರಬೊ ” ನಮ್ಮ ಆಚಾರ, ವಿಚಾರದ ಬಗ್ಗೆ ಕೆಲವರಿಗೆ ಗೊತ್ತಿಲ್ಲ. ನಾವು ಯಾವಾಗಲೂ ಏನಾದರೂ ದುರ್ಘಟನೆಯನ್ನು ನೋಡಿದರೆ ಆಗ ಕಾಶ್ಮೀರಿಗಳ ಬಾಯಿಯಿಂದ ಅಲ್ಲಾಹು ಅಕ್ಬರ್ ಎನ್ನುವ ಮಾತು ಹೊರಗೆ ಬರುತ್ತದೆ. ಅಂತಹ ಭಯಾನಕ ಘಟನೆಗಳು ಆದಾಗ ನಾವು ಅಲ್ಲಾಹನನ್ನು ಸ್ಮರಿಸುತ್ತೇವೆ. ಈಗ ಅವನನ್ನು ವಿಚಾರಣೆಗೆ ಕರೆದಿರುವುದು ನಮ್ಮ ಪೊಲೀಸ್ ಇಲಾಖೆ ಹಾಗೂ ರಕ್ಷಣಾ ಪಡೆಗಳು ತಮ್ಮ ಲೋಪವನ್ನು ಮುಚ್ಚಿಡಲು ಮಾತ್ರ. ಭಯೋತ್ಪಾದಕ ಕೃತ್ಯಗಳಿಗೂ, ಪಾಕಿಸ್ತಾನದ ಜನಸಾಮಾನ್ಯರಿಗೂ ಯಾವುದೇ ಸಂಬಂಧವಿಲ್ಲ. ಏನೇ ಘಟನೆಗಳಿಗೆ ನಾವು ಅಲ್ಲಾಹು ಅಕ್ಬರ್ ಎಂದು ಹೇಳುವ ಮೂಲಕ ನಮ್ಮ ಪ್ರತಿಕ್ರಿಯೆಯನ್ನು ನೀಡುವುದು ಸರ್ವೇ ಸಾಮಾನ್ಯ” ಎಂದು ಹೇಳಿದ್ದಾರೆ.

ಇಡೀ ಘಟನೆ ಜಿಪ್ ಲೈನ್ ನಲ್ಲಿ ತೂಗುತ್ತಿದ್ದ ರಿಶಿ ಭಟ್ ಮೊಬೈಲಿನಲ್ಲಿ ದಾಖಲಾಗಿದೆ. ರಿಶಿ ಭಟ್ ಅದೃಷ್ಟ ಚೆನ್ನಾಗಿತ್ತು. ಅವನು ಗುಂಡಿನ ದಾಳಿಯಿಂದ ಪಾರಾಗಿದ್ದಾನೆ. ಅವನ ಮಾತಿನ ಪ್ರಕಾರ ಇವನು ಎಲ್ಲಿ ಲ್ಯಾಂಡ್ ಆಗಬೇಕಿತ್ತೋ ಅಲ್ಲಿ ಉಗ್ರರು ಇದ್ದರು. ಅದಕ್ಕಾಗಿ ನಿಗದಿತ ಸ್ಥಳಕ್ಕಿಂತ ಮೊದಲೇ ಇವನು ಕೆಳಗೆ ಹಾರಿದ್ದಾನೆ. ಅಲ್ಲಿ ಹೆಂಡತಿ ಮತ್ತು ಮಗನೊಂದಿಗೆ ಸ್ಥಳದಿಂದ ಪಾರಾಗಿದ್ದಾನೆ.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search