• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕುಡ್ಲದ ಯುವಕನ ಸಿನೆಮಾಗೆ ಯಶ್ ತಾಯಿ ನಿರ್ಮಾಪಕಿ!

Tulunadu News Posted On April 30, 2025
0


0
Shares
  • Share On Facebook
  • Tweet It

ರಾಕಿಂಗ್ ಸ್ಟಾರ್ ಯಶ್ ಕುಟುಂಬದಿಂದ ಇನ್ನೊಬ್ಬರು ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಯಶ್ ಪತ್ನಿ ರಾಧಿಕಾ ಪಂಡಿತ್ ಖ್ಯಾತ ನಟಿ ಎನ್ನುವುದು ಎಲ್ಲರಿಗೂ ಗೊತ್ತು. ಈಗ ಯಶ್ ತಾಯಿ ಸಿನೆಮಾ ರಂಗಕ್ಕೆ ಪ್ರವೇಶಿಸುವ ಮೂಲಕ ಚಿತ್ರರಂಗಕ್ಕೆ ಕೊಡುಗೆಯನ್ನು ನೀಡಲು ಬಯಸಿದ್ದಾರೆ. ಅವರು ಸಿನೆಮಾ ನಿರ್ಮಾಣವನ್ನು ಆರಂಭಿಸಿದ್ದು ತಮ್ಮ ಮೊದಲ ಸಿನೆಮಾಕ್ಕೆ ಕುಡ್ಲ ಅಂದರೆ ಗಡಿನಾಡ ಯುವಕ ಪೃರ್ಥಿ ಅಂಬರ್ ನಾಯಕನಾಗಿದ್ದಾರೆ. ಈ ಮೂಲಕ ಪೃರ್ಥಿ ಅಂಬರ್ ಅವರಂತಹ ಪ್ರತಿಭೆಯನ್ನು ಹೊಸ ನಿರ್ಮಾಪಕರನ್ನು ಗುರುತಿಸಿದಂತೆ ಆಗಿದೆ.

ಈಗಾಗಲೇ ಚಿತ್ರಿಕರಣ ಸಂಪೂರ್ಣ ಮುಗಿದಿದ್ದು ಬಿಡುಗಡೆಗೆ ರೆಡಿ ಇದೆ. ಹಳ್ಳಿಯ ಕಥೆಯಾದರೂ ಈಗಿನ ತಲೆಮಾರಿಗೆ ಸಿನೆಮಾ ಮನಸ್ಸಿಗೆ ಹತ್ತಿರವಾಗುತ್ತದೆ ಎಂದು ಹೇಳಿದ ಪುಷ್ಪಾ ಅರುಣ್ ಕುಮಾರ್ ಪೃರ್ಥಿ ಅಂಬರ್ ತುಂಬಾ ಒಳ್ಳೆಯ ನಟ, ಆ ಹುಡುಗ ಗೆಲ್ಲಬೇಕು ಎಂದು ಶುಭ ಹಾರೈಸಿದ್ದಾರೆ.

ಅಷ್ಟಕ್ಕೂ ಈ ಸಿನೆಮಾದ ಕಥೆಯನ್ನಾಗಲಿ, ತಂಡದ ಕುರಿತಾಗಲಿ ಏನನ್ನು ಪುಷ್ಪಾ ಅವರು ತಮ್ಮ ಮಗ ಯಶ್ ಗೆ ಹೇಳಿಲ್ಲವಂತೆ. ಇದು ನನ್ನ ವೈಯಕ್ತಿಕ ಆಸೆ, ಕನಸಾಗಿರುವುದರಿಂದ ನಾನು ಹಾಗೂ ನನ್ನ ಪತಿ ಅರುಣ್ ಕುಮಾರ್ ಅವರು ಸೇರಿ ಮಾಡಿದ ಯೋಜನೆ ಇದಾಗಿರುವುದರಿಂದ ಹೆಸರು ಕೂಡ ಪಿಎ ಎಂದೇ ಇಟ್ಟಿದ್ದೇವೆ. ಪಿಎ ಅಂದರೆ ಪುಷ್ಪಾ ಅರುಣ್ ಕುಮಾರ್ ಅಂತ. ಡ್ರೈವರ್ ಮಗ ಹೀರೋ ಆಗಿ ಗೆದ್ದಿದ್ದಾನೆ ಎಂದ ಮೇಲೆ ಡ್ರೈವರ್ ಹೆಂಡ್ತಿಯೂ ನಿರ್ಮಾಪಕಿಯಾಗಿ ಗೆಲ್ಲುತ್ತಾರೆಂಬ ನಂಬಿಕೆ ಇದೆ ಎನ್ನುವ ವಿಶ್ವಾಸದಲ್ಲಿ ಇರುವ ಪುಷ್ಪಾ ಅವರು ದುಡ್ಡು ಮಾಡಕ್ಕೆ ಅಂತ ಬಂದಿಲ್ಲ, ಹೀಗಾಗಿ ಕಷ್ಟ, ನಷ್ಟದ ಬಗ್ಗೆ ಯೋಚನೆ ಮಾಡಿಲ್ಲ ಎಂದು ಹೇಳಿದ್ದಾರೆ.

ಸಿನೆಮಾಕ್ಕೆ ಕಾವ್ಯಾ ಶೈವ ನಾಯಕಿ, ಶ್ರೀರಾಜ್ ನಿರ್ದೇಶನವಿದೆ. ಕಾರ್ತಿಕ್ ಛಾಯಾಗ್ರಹಣ ಮಾಡಿದ್ದಾರೆ. ಗೋಪಾಲಕೃಷ್ಣ ದೇಶಪಾಂಡೆ, ರಾಜೇಶ್ ನಟರಂಗ ನಟಿಸಿದ್ದಾರೆ. ಯಶ್ ನಾಯಕತ್ವದ ಸಿನೆಮಾ ಮಾಡುವ ಯೋಚನೆ ಅವರಿಗೆ ಸದ್ಯ ಇಲ್ಲವಂತೆ. ಯಶ್ ಗಾಗಿ ಸಿನೆಮಾ ಮಾಡುವಷ್ಟು ತುಂಬಾ ದುಡ್ಡಿರೋ ನಿರ್ಮಾಪಕಿ ತಾನು ಅಲ್ಲ ಎಂದು ಪುಷ್ಪಾ ಅರುಣ್ ಕುಮಾರ್ ಹೇಳಿದ್ದಾರೆ.

ದುಡ್ಡಿರೋವಿಗೆ, ಗೆದ್ದಿರೋ ಜನರ ಜೊತೆ ಸಿನೆಮಾ ಮಾಡುವುದಕ್ಕಿಂತ ಹೊಸಬರ ಜೊತೆ ಸಿನೆಮಾ ಮಾಡಿ ಅವರನ್ನು ಬೆಳೆಸಬೇಕು, ಅವರಿಗೆ ವೇದಿಕೆ ಕಲ್ಪಿಸಬೇಕು ಎನ್ನುವುದು ನಮ್ಮ ಸಂಸ್ಥೆಯ ಗುರಿ ಎಂದು ಅವರು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 4
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 5
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search