• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಭಿಪ್ರಾಯ

ಈ ರೋಹಿಂಗ್ಯಾಗಳೂ ಬಾಂಗ್ಲಾ ವಲಸಿಗರಂತೆ ತಲೆನೋವಾಗದಿರರೇ?

ನಾಗೇಂದ್ರ ಶೆಣೈ, ಉಡುಪಿ Posted On September 5, 2017
0


0
Shares
  • Share On Facebook
  • Tweet It

ಆ ಮಹಮ್ಮದ್ ಘಜನಿ, ಘೋರಿ, ಅಕ್ಬರ್, ಬಾಬರ್… ಹೀಗೆ ಅನೇಕಾನೇಕ ರಾಜರು ಸಾಮ್ರಾಜ್ಯ ವಿಸ್ತರಣೆಗೆಂದು ಭಾರತಕ್ಕೆ ಬಂದು ದೇಶವನ್ನು ಕೊಳ್ಳೆೆ ಹೊಡೆಯುವ ಜತೆಗೆ ದೇವಾಲಯಗಳಲ್ಲಿದ್ದ ನಮ್ಮ ನಂಬಿಕೆಯ ಬೇರುಗಳನ್ನೇ ಅಲುಗಾಡಿಸಿದರು. ಬ್ರಿಟಿಷರು ತಕ್ಕಡಿ ಹಿಡಿದು ಬಂದು ದೇಶವನ್ನೇ ಹತೋಟೆಗೆ ಪಡೆದರು. ನಮ್ಮಿಂದ ಉದಯಿಸಿದ ಬಾಂಗ್ಲಾದೇಶ ನಮಗೇ ಸವಾಲಾಗಿದೆ. ತೀರಾ ಇತ್ತೀಚಿನ ಸಮಸ್ಯೆ ಹೇಳುವುದಾದರೆ, ಬಾಂಗ್ಲಾದ ಅಕ್ರಮ ವಲಸಿಗರು ಪಶ್ಚಿಮ ಬಂಗಾಳ ಸೇರೆ ಹಲವೆಡೆ ಇದ್ದು, ಇಲ್ಲಿಯ ಗುರುತಿನ ಚೀಟಿ ಪಡೆದು, ದೇಶಕ್ಕೇ ತಲೆನೋವಾಗಿದ್ದಾರೆ.

ಆದರೆ, ಇತಿಹಾಸ ಹಾಗೂ ಪ್ರಸ್ತುತದ ಪರಸ್ಥಿತಿ ಹೀಗಿರುವಾಗ…?
ಆಗಸ್ಟ್‌ 8ರಂದು ಸಂಸತ್‌ನ ಮುಂಗಾರು ಅಧಿವೇಶನ ನಡೆಯುತ್ತಿರುವಾಗ ಎದ್ದು ನಿಂತ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು, ಮ್ಯಾನ್ಮಾರ್‌ನಿಂದ ಅಕ್ರಮವಾಗಿ ದೇಶದೊಳಕ್ಕೆ ನುಸುಳಿರುವ 40 ಸಾವಿರ ರೋಹಿಂಗ್ಯಾ ಮುಸ್ಲಿಮರನ್ನು ವಾಪಸು ಕಳುಹಿಸಬೇಕುಎಂದು ಮೊದಲ ಬಾರಿಗೆ ವಿಷಯ ಪ್ರಸ್ತಾಪಿಸಿದರು. ಕೇಂದ್ರ ಸರಕಾರವೂ ಈ ಕುರಿತು ಚಿಂತನೆ ನಡೆಸಿತು. ಆದರೆ, ರೋಹಿಂಗ್ಯಾ ಮುಸ್ಲಿಮರ ಅರ್ಜಿ ಹಿನ್ನೆಲೆಯಲ್ಲಿ ಸೋಮವಾರ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಕೇಂದ್ರ ಸರಕಾರಕ್ಕೆ ಈ ಕುರಿತು ವರದಿ ನೀಡುವಂತೆ ಸೂಚಿಸಿದೆ.

ಮಾನವೀಯತೆಯ ಆಧಾರದ ಮೇಲೆ ಅವರಿಗೆ ಆಶ್ರಯ ನೀಡಬೇಕು ಎಂದು ಬುದ್ಧಿ ಜೀವಿಗಳು ಬೊಬ್ಬೆ ಹಾಕುವ ಮುನ್ನ, ಅವರಿಗೆ ವೋಟರ್ ಐಡಿ ಕೊಟ್ಟರೆ ಮತಗಳಾಗಿ ಪರಿಣಮಿಸುತ್ತಾರೆ ಎಂದು ರಾಜಕಾರಣಿಗಳು ಕುತಂತ್ರ ಮಾಡುವ ಮುನ್ನ, ಅಲ್ಪ ಸಂಖ್ಯಾತರು, ಮುಸ್ಲಿಮರನ್ನು ಓಲೈಸಲು ಕಾಂಗ್ರೆಸ್ ಮೊಂಡು ವಾದ ಆರಂಭಿಸುವ ಮುನ್ನ ಕೇಂದ್ರ ಸರಕಾರ ಸುಪ್ರೀಂ ಕೋರ್ಟ್‌ಗೆ ರೋಹಿಂಗ್ಯಾಗಳ ಕುರಿತು, ಅವರು ದೇಶಕ್ಕೆ ಸವಾಲಾಗುವ ಕುರಿತು ವರದಿ ನೀಡಬೇಕು. ಮೊದಲು ಅವರನ್ನು ದೇಶದಿಂದ ಹೊರದಬ್ಬಬೇಕು.

ಹೀಗೆ ಬಾಂಗ್ಲಾದೇಶದಿಂದ ನಾನಾ ಕಾರಣಗಳನ್ನು ಹೊತ್ತುಕೊಂಡು, ಅಕ್ರಮವಾಗಿ ಒಳನುಸುಳಿರುವ ಬಾಂಗ್ಲಾ ದೇಶೀಯರ ಸಂಖ್ಯೆ ಬರೋಬ್ಬರಿ 4 ಲಕ್ಷ. ಅವರೆಲ್ಲ ಇಲ್ಲಿ ದುಡಿದು ತಿನ್ನುವವರಲ್ಲ. ಬದಲಾಗಿ ಮೂಲಭೂತವಾದದ ಬೀಜ ಬಿತ್ತುವವರು. ಅದಕ್ಕಾಗಿಯೇ ಪಶ್ಚಿಮ ಬಂಗಾಳದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಹೆಚ್ಚಾಗಿದೆ, ಹಿಂಸೆ ತಾಂಡವವಾಡುತ್ತಿದೆ.

ಹಾಗಾಗಿ, ಈ ರೋಹಿಂಗ್ಯಾಗಳೂ ಮುಂದೆ ದೇಶಕ್ಕೆ ತಲೆನೋವಾಗಲಿದ್ದಾರೆ. ಅಷ್ಟಕ್ಕೂ,ಮ್ಯಾನ್ಮಾರ್‌ನಲ್ಲಿ ಹಿಂಸೆಯಾದರೆ, ಅದನ್ನು ಸರಿಪಡಿಸುವುದು ಆ ದೇಶದ ಕೆಲಸ. ಹೀಗೆ ಯಾವುದೋ ದೇಶದಲ್ಲಿ ಹಿಂಸೆಯಾದರೆ, ಅಲ್ಲಿಂದ ಬಂದವರನ್ನು ನಾವೇಕೆ ಸಾಕಬೇಕು? ಅದೂ ಬಾಂಗ್ಲಾ ವಲಸಿಗರಂಥ ಉದಾಹರಣೆ ಕಣ್ಣ ಮುಂದಿರುವಾಗ!

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
ನಾಗೇಂದ್ರ ಶೆಣೈ, ಉಡುಪಿ February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
ನಾಗೇಂದ್ರ ಶೆಣೈ, ಉಡುಪಿ January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search