• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದಿಂದ ಪಾಕಿಸ್ತಾನಕ್ಕೆ ಮೆಡಿಸಿನ್ ಬಂದ್! ಜೀವನಾವಶ್ಯಕ ಔಷಧಗಳಿಗೆ ಪರದಾಟ!

Tulunadu News Posted On April 30, 2025
0


0
Shares
  • Share On Facebook
  • Tweet It

ಕಾಶ್ಮೀರದ ಪಹಲ್ಗಾಮ್ ನಲ್ಲಿ 26 ನಾಗರಿಕರ ಹತ್ಯೆಯ ಬಳಿಕ ಪಾಕಿಸ್ತಾನಕ್ಕೆ ವಿವಿಧ ರೀತಿಯಲ್ಲಿ ಪಾಠ ಕಲಿಸಲು ಭಾರತ ಕ್ರಮ ಕೈಗೊಳ್ಳಲು ಮುಂದಾಗಿದ್ದು, ಅದರ ಭಾಗವಾಗಿ ಮೆಡಿಸಿನ್ ಪೂರೈಕೆ ಬಂದಾಗಿದೆ. ಈಗಾಗಲೇ ಭಾರತ ಪಾಕಿಸ್ತಾನ ಜೊತೆಗಿನ ವಿವಿಧ ವ್ಯವಹಾರಗಳನ್ನು ಸ್ಥಗಿತಗೊಳಿಸಿದ್ದು, ಔಷಧ ಪೂರೈಕೆಯನ್ನು ಬಂದ್ ಮಾಡಿದ ನಂತರ ಪಾಕಿಸ್ತಾನ ಅಕ್ಷರಶ: ಒದ್ದಾಡುವ ಸ್ಥಿತಿಗೆ ಬಂದಿದೆ. ಅದಕ್ಕಾಗಿ ಈಗಾಗಲೇ ಬೇರೆ ಬೇರೆ ದೇಶಗಳಿಗೆ ಮನವಿ ಮಾಡುವ ಪ್ರಕ್ರಿಯೆಯನ್ನು ಆರಂಭಿಸಿರುವ ಪಾಕಿಸ್ತಾನ ಹೇಗಾದರೂ ಮಾಡಿ ಔಷಧ ನೀಡುವಂತೆ ದಂಬಾಲು ಬೀಳುತ್ತಿದೆ.

ಆದರೆ ಪ್ರಸ್ತುತ ಔಷಧಗಳ ಕೊರತೆಯಿಂದಾಗಿ ವೈದ್ಯರು ರೋಗಿಗಳ ಮುಂದೆ ಅಸಹಾಯಕ ಸ್ಥಿತಿಗೆ ತಲುಪಿದ್ದಾರೆ. ಆದ್ದರಿಂದ ಅವರು ಸೇವೆ ನೀಡಲಾಗದ ಪರಿಸ್ಥಿತಿಯನ್ನು ತಂದುಕೊಂಡಿದ್ದಾರೆ. ಆದ್ದರಿಂದ ವೈದ್ಯರೇ ರೋಗಿಗಳಿಂದ ತಪ್ಪಿಸಿಕೊಂಡು ತಿರುಗಾಡುತ್ತಿದ್ದಾರೆ.

ಇನ್ನು ಭಾರತದ ಜೆನರಿಕ್ ಮೆಡಿಸಿನ್ ಮೇಲೆ ಪಾಕ್ ಅವಲಂಬಿತವಾಗಿತ್ತು. ವ್ಯಾಪಾರ ವಹಿವಾಟನ್ನು ಸ್ಥಗಿತಗೊಳಿಸಿದ ಬಳಿಕ ಅನೇಕ ಮಾತ್ರೆಗಳನ್ನು ತಯಾರಿಸಲು ಕಚ್ಚಾವಸ್ತುಗಳ ಕೊರತೆ ಎದುರಾಗಿದೆ. ಅಲ್ಲಿನ ಜನ ಹಾವು ಕಡಿತಕ್ಕೆ, ಕ್ಯಾನ್ಸರ್ ಗೆ ಔಷಧವಿಲ್ಲದೇ ಪರದಾಡುತ್ತಿದ್ದಾರೆ. ವಿಟಾಮಿನ್- ಡಿ, ವಿಟಾಮಿನ್ ಬಿ1, ವಿಟಾಮಿನ್ ಬಿ 12, ಮಕ್ಕಳಿಗೆ ಮಾಲ್ ನ್ಯೂಟ್ರೀಷನ್ಸ್ ಎಲ್ಲವೂ ಬಂದ್ ಆಗಿದೆ.

ಬೇಸಿಕ್ ಮೆಡಿಸಿನ್ ಇಲ್ಲದೇ ಪಾಕಿಸ್ತಾನ ಪರದಾಡುವಂತಾಗಿದೆ. ಭಾರತ ಔಷಧ ಕೊಡದಿದ್ದರೆ ಜೀವನಾವಶ್ಯಕ ಔಷಧಗಳೊಂದಿಗೆ ಏಂಟಿ ರ್ಯಾಬೀಸ್ ಔಷಧ, ಹಾವು, ಚೇಳು ಕಚ್ಚಿದರೆ ಔಷಧ, ಕ್ಯಾನರ್ ಚಿಕಿತ್ಸೆಗೆ ಔಷಧ, ಆಂಟಿಬಯೋಟಿಕ್ ಔಷಧ ಕೂಡ ಬೇರೆಡೆಯಿಂದ ತರಿಸಿಕೊಳ್ಳುವುದಾಗಿ ಪಾಕಿಸ್ತಾನ ಚಿಂತಿಸುತ್ತಿದೆ. ಒಂದು ವೇಳೆ ಈ ಔಷಧಗಳು ಸೂಕ್ತ ಸಮಯದಲ್ಲಿ ಸಿಗದಿದ್ದರೆ ಪಾಕಿಸ್ತಾನ ಚಿಂತಾಜನಕ ಸ್ಥಿತಿಗೆ ತಲುಪಲಿದೆ.

ಟರ್ಕಿ, ಯುರೋಪ್, ಅಮೇರಿಕಾ, ಚೀನಾ ಬಳಿ ಔಷಧಕ್ಕಾಗಿ ಪಾಕಿಸ್ತಾನ ಅಂಗಲಾಚುತ್ತಿದೆ. ಆದರೆ ನಮ್ಮಲ್ಲಿ ಸಿಗುವಷ್ಟು ಕಡಿಮೆ ದರಕ್ಕೆ ಬೇರೆ ದೇಶಗಳಿಂದ ಪಾಕ್ ಔಷಧ ಸಿಗುವುದಿಲ್ಲ. ಇದರ ನಡುವೆ ಪಾಕಿಸ್ತಾನದ ನಾಯಕರು ಔಷಧ ವ್ಯಾಪಾರ ನಿಷೇಧದಿಂದ ವಿನಾಯಿತಿ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪೆಹಲ್ಗಾಂನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ 26 ಮಂದಿ ಸಾವನ್ನಪ್ಪಿದ್ದರು.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search