• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದಿಂದ ಪಾಕಿಸ್ತಾನಕ್ಕೆ ಮೆಡಿಸಿನ್ ಬಂದ್! ಜೀವನಾವಶ್ಯಕ ಔಷಧಗಳಿಗೆ ಪರದಾಟ!

Tulunadu News Posted On April 30, 2025
0


0
Shares
  • Share On Facebook
  • Tweet It

ಕಾಶ್ಮೀರದ ಪಹಲ್ಗಾಮ್ ನಲ್ಲಿ 26 ನಾಗರಿಕರ ಹತ್ಯೆಯ ಬಳಿಕ ಪಾಕಿಸ್ತಾನಕ್ಕೆ ವಿವಿಧ ರೀತಿಯಲ್ಲಿ ಪಾಠ ಕಲಿಸಲು ಭಾರತ ಕ್ರಮ ಕೈಗೊಳ್ಳಲು ಮುಂದಾಗಿದ್ದು, ಅದರ ಭಾಗವಾಗಿ ಮೆಡಿಸಿನ್ ಪೂರೈಕೆ ಬಂದಾಗಿದೆ. ಈಗಾಗಲೇ ಭಾರತ ಪಾಕಿಸ್ತಾನ ಜೊತೆಗಿನ ವಿವಿಧ ವ್ಯವಹಾರಗಳನ್ನು ಸ್ಥಗಿತಗೊಳಿಸಿದ್ದು, ಔಷಧ ಪೂರೈಕೆಯನ್ನು ಬಂದ್ ಮಾಡಿದ ನಂತರ ಪಾಕಿಸ್ತಾನ ಅಕ್ಷರಶ: ಒದ್ದಾಡುವ ಸ್ಥಿತಿಗೆ ಬಂದಿದೆ. ಅದಕ್ಕಾಗಿ ಈಗಾಗಲೇ ಬೇರೆ ಬೇರೆ ದೇಶಗಳಿಗೆ ಮನವಿ ಮಾಡುವ ಪ್ರಕ್ರಿಯೆಯನ್ನು ಆರಂಭಿಸಿರುವ ಪಾಕಿಸ್ತಾನ ಹೇಗಾದರೂ ಮಾಡಿ ಔಷಧ ನೀಡುವಂತೆ ದಂಬಾಲು ಬೀಳುತ್ತಿದೆ.

ಆದರೆ ಪ್ರಸ್ತುತ ಔಷಧಗಳ ಕೊರತೆಯಿಂದಾಗಿ ವೈದ್ಯರು ರೋಗಿಗಳ ಮುಂದೆ ಅಸಹಾಯಕ ಸ್ಥಿತಿಗೆ ತಲುಪಿದ್ದಾರೆ. ಆದ್ದರಿಂದ ಅವರು ಸೇವೆ ನೀಡಲಾಗದ ಪರಿಸ್ಥಿತಿಯನ್ನು ತಂದುಕೊಂಡಿದ್ದಾರೆ. ಆದ್ದರಿಂದ ವೈದ್ಯರೇ ರೋಗಿಗಳಿಂದ ತಪ್ಪಿಸಿಕೊಂಡು ತಿರುಗಾಡುತ್ತಿದ್ದಾರೆ.

ಇನ್ನು ಭಾರತದ ಜೆನರಿಕ್ ಮೆಡಿಸಿನ್ ಮೇಲೆ ಪಾಕ್ ಅವಲಂಬಿತವಾಗಿತ್ತು. ವ್ಯಾಪಾರ ವಹಿವಾಟನ್ನು ಸ್ಥಗಿತಗೊಳಿಸಿದ ಬಳಿಕ ಅನೇಕ ಮಾತ್ರೆಗಳನ್ನು ತಯಾರಿಸಲು ಕಚ್ಚಾವಸ್ತುಗಳ ಕೊರತೆ ಎದುರಾಗಿದೆ. ಅಲ್ಲಿನ ಜನ ಹಾವು ಕಡಿತಕ್ಕೆ, ಕ್ಯಾನ್ಸರ್ ಗೆ ಔಷಧವಿಲ್ಲದೇ ಪರದಾಡುತ್ತಿದ್ದಾರೆ. ವಿಟಾಮಿನ್- ಡಿ, ವಿಟಾಮಿನ್ ಬಿ1, ವಿಟಾಮಿನ್ ಬಿ 12, ಮಕ್ಕಳಿಗೆ ಮಾಲ್ ನ್ಯೂಟ್ರೀಷನ್ಸ್ ಎಲ್ಲವೂ ಬಂದ್ ಆಗಿದೆ.

ಬೇಸಿಕ್ ಮೆಡಿಸಿನ್ ಇಲ್ಲದೇ ಪಾಕಿಸ್ತಾನ ಪರದಾಡುವಂತಾಗಿದೆ. ಭಾರತ ಔಷಧ ಕೊಡದಿದ್ದರೆ ಜೀವನಾವಶ್ಯಕ ಔಷಧಗಳೊಂದಿಗೆ ಏಂಟಿ ರ್ಯಾಬೀಸ್ ಔಷಧ, ಹಾವು, ಚೇಳು ಕಚ್ಚಿದರೆ ಔಷಧ, ಕ್ಯಾನರ್ ಚಿಕಿತ್ಸೆಗೆ ಔಷಧ, ಆಂಟಿಬಯೋಟಿಕ್ ಔಷಧ ಕೂಡ ಬೇರೆಡೆಯಿಂದ ತರಿಸಿಕೊಳ್ಳುವುದಾಗಿ ಪಾಕಿಸ್ತಾನ ಚಿಂತಿಸುತ್ತಿದೆ. ಒಂದು ವೇಳೆ ಈ ಔಷಧಗಳು ಸೂಕ್ತ ಸಮಯದಲ್ಲಿ ಸಿಗದಿದ್ದರೆ ಪಾಕಿಸ್ತಾನ ಚಿಂತಾಜನಕ ಸ್ಥಿತಿಗೆ ತಲುಪಲಿದೆ.

ಟರ್ಕಿ, ಯುರೋಪ್, ಅಮೇರಿಕಾ, ಚೀನಾ ಬಳಿ ಔಷಧಕ್ಕಾಗಿ ಪಾಕಿಸ್ತಾನ ಅಂಗಲಾಚುತ್ತಿದೆ. ಆದರೆ ನಮ್ಮಲ್ಲಿ ಸಿಗುವಷ್ಟು ಕಡಿಮೆ ದರಕ್ಕೆ ಬೇರೆ ದೇಶಗಳಿಂದ ಪಾಕ್ ಔಷಧ ಸಿಗುವುದಿಲ್ಲ. ಇದರ ನಡುವೆ ಪಾಕಿಸ್ತಾನದ ನಾಯಕರು ಔಷಧ ವ್ಯಾಪಾರ ನಿಷೇಧದಿಂದ ವಿನಾಯಿತಿ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪೆಹಲ್ಗಾಂನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ 26 ಮಂದಿ ಸಾವನ್ನಪ್ಪಿದ್ದರು.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!
  • Popular Posts

    • 1
      ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • 2
      ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!

  • Privacy Policy
  • Contact
© Tulunadu Infomedia.

Press enter/return to begin your search