• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದಿಂದ ಪಾಕಿಸ್ತಾನಕ್ಕೆ ಮೆಡಿಸಿನ್ ಬಂದ್! ಜೀವನಾವಶ್ಯಕ ಔಷಧಗಳಿಗೆ ಪರದಾಟ!

Tulunadu News Posted On April 30, 2025
0


0
Shares
  • Share On Facebook
  • Tweet It

ಕಾಶ್ಮೀರದ ಪಹಲ್ಗಾಮ್ ನಲ್ಲಿ 26 ನಾಗರಿಕರ ಹತ್ಯೆಯ ಬಳಿಕ ಪಾಕಿಸ್ತಾನಕ್ಕೆ ವಿವಿಧ ರೀತಿಯಲ್ಲಿ ಪಾಠ ಕಲಿಸಲು ಭಾರತ ಕ್ರಮ ಕೈಗೊಳ್ಳಲು ಮುಂದಾಗಿದ್ದು, ಅದರ ಭಾಗವಾಗಿ ಮೆಡಿಸಿನ್ ಪೂರೈಕೆ ಬಂದಾಗಿದೆ. ಈಗಾಗಲೇ ಭಾರತ ಪಾಕಿಸ್ತಾನ ಜೊತೆಗಿನ ವಿವಿಧ ವ್ಯವಹಾರಗಳನ್ನು ಸ್ಥಗಿತಗೊಳಿಸಿದ್ದು, ಔಷಧ ಪೂರೈಕೆಯನ್ನು ಬಂದ್ ಮಾಡಿದ ನಂತರ ಪಾಕಿಸ್ತಾನ ಅಕ್ಷರಶ: ಒದ್ದಾಡುವ ಸ್ಥಿತಿಗೆ ಬಂದಿದೆ. ಅದಕ್ಕಾಗಿ ಈಗಾಗಲೇ ಬೇರೆ ಬೇರೆ ದೇಶಗಳಿಗೆ ಮನವಿ ಮಾಡುವ ಪ್ರಕ್ರಿಯೆಯನ್ನು ಆರಂಭಿಸಿರುವ ಪಾಕಿಸ್ತಾನ ಹೇಗಾದರೂ ಮಾಡಿ ಔಷಧ ನೀಡುವಂತೆ ದಂಬಾಲು ಬೀಳುತ್ತಿದೆ.

ಆದರೆ ಪ್ರಸ್ತುತ ಔಷಧಗಳ ಕೊರತೆಯಿಂದಾಗಿ ವೈದ್ಯರು ರೋಗಿಗಳ ಮುಂದೆ ಅಸಹಾಯಕ ಸ್ಥಿತಿಗೆ ತಲುಪಿದ್ದಾರೆ. ಆದ್ದರಿಂದ ಅವರು ಸೇವೆ ನೀಡಲಾಗದ ಪರಿಸ್ಥಿತಿಯನ್ನು ತಂದುಕೊಂಡಿದ್ದಾರೆ. ಆದ್ದರಿಂದ ವೈದ್ಯರೇ ರೋಗಿಗಳಿಂದ ತಪ್ಪಿಸಿಕೊಂಡು ತಿರುಗಾಡುತ್ತಿದ್ದಾರೆ.

ಇನ್ನು ಭಾರತದ ಜೆನರಿಕ್ ಮೆಡಿಸಿನ್ ಮೇಲೆ ಪಾಕ್ ಅವಲಂಬಿತವಾಗಿತ್ತು. ವ್ಯಾಪಾರ ವಹಿವಾಟನ್ನು ಸ್ಥಗಿತಗೊಳಿಸಿದ ಬಳಿಕ ಅನೇಕ ಮಾತ್ರೆಗಳನ್ನು ತಯಾರಿಸಲು ಕಚ್ಚಾವಸ್ತುಗಳ ಕೊರತೆ ಎದುರಾಗಿದೆ. ಅಲ್ಲಿನ ಜನ ಹಾವು ಕಡಿತಕ್ಕೆ, ಕ್ಯಾನ್ಸರ್ ಗೆ ಔಷಧವಿಲ್ಲದೇ ಪರದಾಡುತ್ತಿದ್ದಾರೆ. ವಿಟಾಮಿನ್- ಡಿ, ವಿಟಾಮಿನ್ ಬಿ1, ವಿಟಾಮಿನ್ ಬಿ 12, ಮಕ್ಕಳಿಗೆ ಮಾಲ್ ನ್ಯೂಟ್ರೀಷನ್ಸ್ ಎಲ್ಲವೂ ಬಂದ್ ಆಗಿದೆ.

ಬೇಸಿಕ್ ಮೆಡಿಸಿನ್ ಇಲ್ಲದೇ ಪಾಕಿಸ್ತಾನ ಪರದಾಡುವಂತಾಗಿದೆ. ಭಾರತ ಔಷಧ ಕೊಡದಿದ್ದರೆ ಜೀವನಾವಶ್ಯಕ ಔಷಧಗಳೊಂದಿಗೆ ಏಂಟಿ ರ್ಯಾಬೀಸ್ ಔಷಧ, ಹಾವು, ಚೇಳು ಕಚ್ಚಿದರೆ ಔಷಧ, ಕ್ಯಾನರ್ ಚಿಕಿತ್ಸೆಗೆ ಔಷಧ, ಆಂಟಿಬಯೋಟಿಕ್ ಔಷಧ ಕೂಡ ಬೇರೆಡೆಯಿಂದ ತರಿಸಿಕೊಳ್ಳುವುದಾಗಿ ಪಾಕಿಸ್ತಾನ ಚಿಂತಿಸುತ್ತಿದೆ. ಒಂದು ವೇಳೆ ಈ ಔಷಧಗಳು ಸೂಕ್ತ ಸಮಯದಲ್ಲಿ ಸಿಗದಿದ್ದರೆ ಪಾಕಿಸ್ತಾನ ಚಿಂತಾಜನಕ ಸ್ಥಿತಿಗೆ ತಲುಪಲಿದೆ.

ಟರ್ಕಿ, ಯುರೋಪ್, ಅಮೇರಿಕಾ, ಚೀನಾ ಬಳಿ ಔಷಧಕ್ಕಾಗಿ ಪಾಕಿಸ್ತಾನ ಅಂಗಲಾಚುತ್ತಿದೆ. ಆದರೆ ನಮ್ಮಲ್ಲಿ ಸಿಗುವಷ್ಟು ಕಡಿಮೆ ದರಕ್ಕೆ ಬೇರೆ ದೇಶಗಳಿಂದ ಪಾಕ್ ಔಷಧ ಸಿಗುವುದಿಲ್ಲ. ಇದರ ನಡುವೆ ಪಾಕಿಸ್ತಾನದ ನಾಯಕರು ಔಷಧ ವ್ಯಾಪಾರ ನಿಷೇಧದಿಂದ ವಿನಾಯಿತಿ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪೆಹಲ್ಗಾಂನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ 26 ಮಂದಿ ಸಾವನ್ನಪ್ಪಿದ್ದರು.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search