• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ – ಲಾರೆನ್ಸ್ ಬಿಷ್ಣೋಯಿ

Tulunadu News Posted On April 30, 2025
0


0
Shares
  • Share On Facebook
  • Tweet It

ಈಗ ಭಾರತ ಮತ್ತು ಪಾಕಿಸ್ತಾನ ನಡುವೆ ಯಾವಾಗ ಯುದ್ಧ ಆರಂಭವಾಗುತ್ತದೆ ಎನ್ನುವ ಕುತೂಹಲದ ನಡುವೆ ಈ ಒಟ್ಟು ಸಂಘರ್ಷಕ್ಕೆ ಕುಖ್ಯಾತ ಡಾನ್ ಲಾರೆನ್ಸ್ ಬಿಷ್ಣೋಯಿ ಎಂಟ್ರಿ ಹೊಡೆದಿದ್ದಾನೆ. ಅವನ ಗ್ಯಾಂಗಿನಿಂದ ಬಂದಿರುವ ಸುದ್ದಿಯ ಪ್ರಕಾರ ಭಾರತದ ಅಮಾಯಕ ಹಿಂದೂಗಳನ್ನು ಹತ್ಯೆ ಮಾಡಿರುವ ಭಯೋತ್ಪಾದಕರಿಗೆ ತಕ್ಕ ಉತ್ತರ ನೀಡಲಿದ್ದೇವೆ. ಅವರ ದೇಶಕ್ಕೆ ನುಗ್ಗಿ ಒಬ್ಬನನ್ನಾದರೂ ಮುಗಿಸಿ ಬರಲಿದ್ದೇವೆ. ಇನ್ನು ನಾವು ಹತ್ಯೆ ಮಾಡುವ ಒಬ್ಬ ಪಾಕಿಸ್ತಾನದ ಒಂದು ಲಕ್ಷ ಜನರಿಗೆ ಸಮನಾಗಿರಲಿದ್ದಾನೆ ಎಂದು ಹೇಳಲಾಗಿದೆ.

 

ಬಿಷ್ಣೋಯಿ ಗ್ಯಾಂಗ್ ಸಾಮಾಜಿಕ ಜಾಲತಾಣದಲ್ಲಿ ಈ ವಿಷಯವನ್ನು ತಿಳಿಸಿದೆ. ಬಿಷ್ಣೋಯಿ ಗ್ಯಾಂಗ್ ಬಿಡುಗಡೆಗೊಳಿಸಿದ ಫೋಟೋದಲ್ಲಿ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್ ಈ ತೋಯಿಬಾ ಮುಖ್ಯಸ್ಥ ಹಫೀಜ್ ಸಯಿದ್ ಫೋಟೋಗೆ ತಪ್ಪು ಸಮಾನಾರ್ಥಕ ಚಿನ್ನೆಯನ್ನು ಬಳಸಲಾಗಿದೆ.

ಅದರೊಂದಿಗೆ ಸಂದೇಶ ಬರೆಯಲಾಗಿದ್ದು ” ಜೈ ಶ್ರೀರಾಮ್ ರಾಮ್ ರಾಮ್, ಕಾಶ್ಮೀರದ ಪೆಹಲ್ಗಾಂನಲ್ಲಿ ಉಗ್ರಗಾಮಿಗಳಿಂದ ಅಮಾಯಕರ ಹತ್ಯಾಕಾಂಡ ನಡೆದು ಯಾವುದೇ ತಪ್ಪು ಮಾಡದ ಅಮಾಯಕರ ಅಂತ್ಯವಾಗಿದೆ. ಆದಷ್ಟು ಶೀಘ್ರದಲ್ಲಿ ಇದಕ್ಕೆ ಪ್ರತೀಕಾರ ನಾವು ತೆಗೆದುಕೊಳ್ಳಲಿದ್ದೇವೆ. ನಮ್ಮ ನಾಗರಿಕರ ಹತ್ಯೆಗೆ ಸಮನಾಗಿ ನಾವು ಪಾಕಿಸ್ತಾನದ ಒಳಗೆ ನುಗ್ಗಿ ಒಬ್ಬನನ್ನಾದರೂ ಮುಗಿಸಿ ಬರಲಿದ್ದೇವೆ. ಇನ್ನು ಆ ಒಬ್ಬ ಪಾಕಿಸ್ತಾನದ ಒಂದು ಲಕ್ಷ ಜನರಿಗೆ ಸಮನಾಗಿರುತ್ತಾನೆ” ಎಂದು ಬರೆಯಲಾಗಿದೆ. ಬಿಷ್ಣೋಯಿ ಗ್ಯಾಂಗಿನ ಬರವಣಿಗೆಯ ಒಟ್ಟು ತಾತ್ಪರ್ಯ ಇಷ್ಟೇ, ನಾವು ಪಾಕಿಸ್ತಾನದ ದೊಡ್ಡ ಮಿಕವೊಂದನ್ನು ಉರುಳಿಸಲಿದ್ದೇವೆ.

ಹಾಗಾದರೆ ಬಿಷ್ಣೋಯಿ ಗ್ಯಾಂಗ್ ಮೋಸ್ಟ್ ವಾಟೆಂಡ್ ಉಗ್ರ ಹಫೀಜ್ ಸೈಯಿದ್ ನನ್ನು ಮುಗಿಸಲಿದೆಯಾ? ಹಫೀಜ್ ಉಗ್ರ ಸಂಘಟನೆ ಲಷ್ಕರೆ ಈ ತೊಯಿಬಾದ ಮುಖ್ಯಸ್ಥನಾಗಿದ್ದಾನೆ. ಅವನು ಮುಂಬೈಯಲ್ಲಿ ನಡೆದ ಉಗ್ರರ ದಾಳಿಯ ಮಾಸ್ಟರ್ ಮೈಂಡ್ ಕೂಡ ಆಗಿದ್ದಾನೆ. ಹಫೀಜ್ ಭಾರತದ ವಿವಿದೆಡೆ ನಡೆದ ಉಗ್ರರ ದಾಳಿಗಳ ಪ್ರಮುಖ ಸೂತ್ರಧಾರನೂ ಆಗಿದ್ದಾನೆ. ಭಾರತ ಮಾತ್ರವಲ್ಲದೇ ಜಗತ್ತಿನ ಅನೇಕ ರಾಷ್ಟ್ರಗಳು ಅವನನ್ನು ಮೋಸ್ಟ್ ವಾಟೆಂಡ್ ಉಗ್ರರ ಪಟ್ಟಿಯಲ್ಲಿ ಸ್ಥಾನ ನೀಡಿವೆ. ಅವನನ್ನು ನಮಗೆ ಹಸ್ತಾಂತರಿಸಿ ಎಂದು ಭಾರತ ಅನೇಕ ಸಲ ಪಾಕಿಸ್ತಾನಕ್ಕೆ ಹೇಳಿದರೂ ಪಾಕಿಸ್ತಾನ ಇನ್ನು ಅವನನ್ನು ಸುರಕ್ಷಿತ ಸ್ಥಾನದಲ್ಲಿಟ್ಟು ಕಾಪಾಡುತ್ತಿದೆ.

0
Shares
  • Share On Facebook
  • Tweet It




Trending Now
'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
Tulunadu News February 11, 2026
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
  • Popular Posts

    • 1
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 2
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 3
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search