• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!

Tulunadu News Posted On May 3, 2025
0


0
Shares
  • Share On Facebook
  • Tweet It

ಬಡತನ ಎನ್ನುವುದು ಈ ಹೆಣ್ಣುಮಗಳ ಪಾಲಿಗೆ ವಿದ್ಯೆ ಪಡೆಯಲು ಅಡ್ಡಿಯಾಗಲೇ ಇಲ್ಲ. ಕಷ್ಟಪಟ್ಟು ವಿದ್ಯೆ ಕಲಿತು ಈಗ ತನ್ನ ಪೋಷಕರಿಗೆ, ಶಾಲೆಗೆ ಹೆಮ್ಮೆ ಉಂಟು ಮಾಡಿದ್ದಾಳೆ. ಈ ಹೆಣ್ಣುಮಗಳ ಹೆಸರು ಅಪೇಕ್ಷಾ. ಕೂಲಿ ಮಾಡಿ, ಬೀಡಿ ಕಟ್ಟಿ ಜೀವನ ಸಾಗಿಸುವ ಬಡ ಕುಟುಂಬದ ವಿದ್ಯಾರ್ಥಿನಿ. ಮಂಗಳೂರು ತಾಲೂಕಿನ ಕೈರಂಗಳ ಪುಣ್ಯಕೋಟಿ ನಗರದ ಶಾರದಾ ಗಣಪತಿ ವಿದ್ಯಾ ಕೇಂದ್ರದ ವಿದ್ಯಾರ್ಥಿನಿ.

ವಿದ್ಯಾನಗರದ ಪುಂಡಿಕಾಯಿ ನಿವಾಸಿ ಅಪೇಕ್ಷಾ ಹತ್ತನೇ ತರಗತಿಯ ಪರೀಕ್ಷೆಯಲ್ಲಿ 616 ಅಂದರೆ 98.6 ಶೇಕಡಾ ಅಂಕ ಪಡೆಯುವ ಮೂಲಕ ರಾಜ್ಯಕ್ಕೆ 10 ನೇ ಸ್ಥಾನ ಗಳಿಸಿದ್ದಾರೆ. ಈಕೆ ಮುಂದೆ ಕೆಮಿಕಲ್ ಇಂಜಿನಿಯರ್ ಆಗುವ ಗುರಿ ಇಟ್ಟುಕೊಂಡಿದ್ದಾಳೆ. ಈಕೆಯ ತಂದೆ ಚಂದ್ರಶೇಖರ್ ಕೂಲಿ ಕೆಲಸ ಮಾಡುತ್ತಾರೆ. ತಾಯಿ ಸರಸ್ವತಿ ಬೀಡಿ ಕಟ್ಟುವ ಉದ್ಯೋಗ ಮಾಡುತ್ತಾರೆ. ಇವರ ಏಕೈಕ ಪುತ್ರಿ ಅಪೇಕ್ಷಾ ಬಡತನ ಮೆಟ್ಟಿ ನಿಂತು ಉನ್ನತ ಅಂಕಗಳಿಸಿದ್ದಾಳೆ.

ದಿನದ ಪಾಠವನ್ನು ಅಂದೇ ಓದಿ ಮುಗಿಸುತ್ತಿದ್ದ ಅಪೇಕ್ಷಾ ತರಗತಿಗಳಲ್ಲಿ ತುಂಬಾ ಜಾಣೆ ವಿದ್ಯಾರ್ಥಿನಿಯಾಗಿದ್ದಳು. ಈ ಕುರಿತು ಶಾಲಾ ಸಂಚಾಲಕ ಟಿ.ಜಿ.ರಾಜಾರಾಂ ಭಟ್ ಅವರು ಮಾತನಾಡಿ, ಅಪೇಕ್ಷಾ ಬಡತನವನ್ನು ಅಡ್ಡಿಯೆಂದು ತಿಳಿದುಕೊಳ್ಳದೇ, ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ವಿಶೇಷ ತರಬೇತಿ ಪಡೆದು ಶಾಲೆಗೆ ಕೀರ್ತಿ ತಂದಿದ್ದಳು ಎಂದಿದ್ದಾರೆ. ಒಟ್ಟಿನಲ್ಲಿ ಅಪೇಕ್ಷಾ ಅವರ ಈ ಸಾಧನೆ ವಿದ್ಯಾರ್ಥಿ ಸಮುದಾಯಕ್ಕೆ ಸ್ಫೂರ್ತಿಯಾಗಿದೆ.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search