• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಬಿಜೆಪಿ ರ್ಯಾಲಿ ಸರಕಾರಕ್ಕೆೆ ಭೀತಿ, ಕಾರ್ಯಕರ್ತರ ಬಂಧನ

TNN Correspondent Posted On September 5, 2017
0


0
Shares
  • Share On Facebook
  • Tweet It

ಬೆಂಗಳೂರು: ಹಿಂದೂ ಸಂಘಟನೆಗಳ ಕಾರ್ಯಕರ್ತರ ಕೊಲೆ ಖಂಡಿಸಿ, ಸಚಿವ ರಮಾನಾಥ್ ರೈ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಹಮ್ಮಿಕೊಂಡಿರುವ ಮಂಗಳೂರು ಚಲೋ ಬೈಕ್ ರ್ಯಾಲಿಗೆ ರಾಜ್ಯಾದ್ಯಂತ ಸರಕಾರ ನಿರಾಕಣೆ ಮಾಡಿದ್ದು, ಅಲ್ಲಲ್ಲಿ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಮಂಗಳೂರು ಚಲೋ ರ್ಯಾಲಿಯಿಂದ ಸರಕಾರಕ್ಕೆೆ ಭೀತಿ ಉಂಟಾಗಿದ್ದು, ಆದ್ದರಿಂದಲೇ ಈ ರೀತಿ ರ್ಯಾಲಿ ಹತ್ತಿಕುವ ಕಾರ್ಯ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದ್ದು, ಯಾವುದೇ ಕಾರಣಕ್ಕೂ ರ್ಯಾಲಿ ನಿಲ್ಲುವುದಿಲ್ಲ ಎಂದು ಹೇಳಿದೆ.
ರ್ಯಾಲಿ ಯಶಸ್ವಿಯಾಗುವ ಭೀತಿಯಲ್ಲಿ ರಾಜ್ಯ ಸರಕಾರ ಈ ನಿರ್ಧಾರ ಕೈಗೊಂಡಿದ್ದು, ಶಾಂತಿ ಸುವ್ಯವಸ್ಥೆೆಯ ನೆಪ ಹೇಳಿ ಮಂಗಳೂರು ಚಲೋಗೆ ಅಡ್ಡಿ ವ್ಯಕ್ತಪಡಿಸಿದೆ ಎಂದು ಬಿಜೆಪಿ ಆರೋಪಿಸಿದೆ.
‘ಮಂಗಳೂರು ಚಲೋ’ ಬೈಕ್ ಜಾಥಾ, ಹುಬ್ಬಳ್ಳಿ, ಶಿವಮೊಗ್ಗ, ಮೈಸೂರು, ಬೆಂಗಳೂರು, ಚಿಕ್ಕಮಗಳೂರಿನಿಂದ ಬೈಕ್ ಜಾಥಾ ಮಂಗಳವಾರ ಹೊರಡಲಿದ್ದು, ಸೆ.7ರಂದು ಮಂಗಳೂರು ತಲುಪಲಿದೆ. ಸೆ.7ರಂದು ಬೃಹತ್ ಸಮಾವೇಶ ನಡೆಸಲು ಯೋಜನೆ ರೂಪಿಸಿದೆ. ಆದರೆ ಜಾಥಾ ನಡೆಸಲು ಪೊಲೀಸರು ಅನುಮತಿ ನೀಡದೆ ಸರಕಾರದ ಅಣತಿಯಂತೆ ಕಾರ್ಯ ನಿರ್ವಹಿಸಿ ಹೋರಾಟಗಾರರನ್ನು ಹತ್ತಿಕುತ್ತಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ.

ಎಲ್ಲೆೆಲ್ಲಿ ರ್ಯಾಲಿಗೆ ನಿರಾಕರಣೆ
ಬೆಳಗಾವಿ, ಹುಬ್ಬಳಿ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜ ನಗರ, ಗದಗ ಸೇರಿ ಹಲವು ಜಿಲ್ಲೆೆಗಳಲ್ಲಿ ರ್ಯಾಲಿಗೆ ನಿರಾಕರಣೆ.

ರ್ಯಾಲಿಗೆ ಸರಕಾರದ ವಿರೋಧಕ್ಕೆೆ ನೀಡಿರುವ ಕಾರಣ
* ಸಂಚಾರ ಅಸ್ತವ್ಯಸ್ತ
* ಶಾಂತಿ ಭಂಗ ಉಂಟು ಮಾಡುವ ಸಾಧ್ಯತೆ
*ಕಾನೂನು ಸುವ್ಯವಸ್ಥೆೆಗೆ ಭಂಗ ತರುವ ಸಾಧ್ಯತೆ
*ಸಂಚಾರ ವಿಭಾಗದಿಂದ ಅನುಮತಿ ಪಡೆದಿಲ್ಲ
* ಪೊಲೀಸ್ ಬಂದೋಬ್ತ್ ಕಲ್ಪಿಸಲು ಅಸಾಧ್ಯ
* ಬೈಕ್ ರ್ಯಾಲಿಗೆ ಮಂಗಳೂರಿನ ಆಯುಕ್ತರ ಅನುಮತಿ ಪಡೆದಿಲ್ಲ

 

0
Shares
  • Share On Facebook
  • Tweet It




Trending Now
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
  • Popular Posts

    • 1
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 2
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 3
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search