• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಬಿಜೆಪಿ ರ್ಯಾಲಿ ಸರಕಾರಕ್ಕೆೆ ಭೀತಿ, ಕಾರ್ಯಕರ್ತರ ಬಂಧನ

TNN Correspondent Posted On September 5, 2017
0


0
Shares
  • Share On Facebook
  • Tweet It

ಬೆಂಗಳೂರು: ಹಿಂದೂ ಸಂಘಟನೆಗಳ ಕಾರ್ಯಕರ್ತರ ಕೊಲೆ ಖಂಡಿಸಿ, ಸಚಿವ ರಮಾನಾಥ್ ರೈ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಹಮ್ಮಿಕೊಂಡಿರುವ ಮಂಗಳೂರು ಚಲೋ ಬೈಕ್ ರ್ಯಾಲಿಗೆ ರಾಜ್ಯಾದ್ಯಂತ ಸರಕಾರ ನಿರಾಕಣೆ ಮಾಡಿದ್ದು, ಅಲ್ಲಲ್ಲಿ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಮಂಗಳೂರು ಚಲೋ ರ್ಯಾಲಿಯಿಂದ ಸರಕಾರಕ್ಕೆೆ ಭೀತಿ ಉಂಟಾಗಿದ್ದು, ಆದ್ದರಿಂದಲೇ ಈ ರೀತಿ ರ್ಯಾಲಿ ಹತ್ತಿಕುವ ಕಾರ್ಯ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದ್ದು, ಯಾವುದೇ ಕಾರಣಕ್ಕೂ ರ್ಯಾಲಿ ನಿಲ್ಲುವುದಿಲ್ಲ ಎಂದು ಹೇಳಿದೆ.
ರ್ಯಾಲಿ ಯಶಸ್ವಿಯಾಗುವ ಭೀತಿಯಲ್ಲಿ ರಾಜ್ಯ ಸರಕಾರ ಈ ನಿರ್ಧಾರ ಕೈಗೊಂಡಿದ್ದು, ಶಾಂತಿ ಸುವ್ಯವಸ್ಥೆೆಯ ನೆಪ ಹೇಳಿ ಮಂಗಳೂರು ಚಲೋಗೆ ಅಡ್ಡಿ ವ್ಯಕ್ತಪಡಿಸಿದೆ ಎಂದು ಬಿಜೆಪಿ ಆರೋಪಿಸಿದೆ.
‘ಮಂಗಳೂರು ಚಲೋ’ ಬೈಕ್ ಜಾಥಾ, ಹುಬ್ಬಳ್ಳಿ, ಶಿವಮೊಗ್ಗ, ಮೈಸೂರು, ಬೆಂಗಳೂರು, ಚಿಕ್ಕಮಗಳೂರಿನಿಂದ ಬೈಕ್ ಜಾಥಾ ಮಂಗಳವಾರ ಹೊರಡಲಿದ್ದು, ಸೆ.7ರಂದು ಮಂಗಳೂರು ತಲುಪಲಿದೆ. ಸೆ.7ರಂದು ಬೃಹತ್ ಸಮಾವೇಶ ನಡೆಸಲು ಯೋಜನೆ ರೂಪಿಸಿದೆ. ಆದರೆ ಜಾಥಾ ನಡೆಸಲು ಪೊಲೀಸರು ಅನುಮತಿ ನೀಡದೆ ಸರಕಾರದ ಅಣತಿಯಂತೆ ಕಾರ್ಯ ನಿರ್ವಹಿಸಿ ಹೋರಾಟಗಾರರನ್ನು ಹತ್ತಿಕುತ್ತಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ.

ಎಲ್ಲೆೆಲ್ಲಿ ರ್ಯಾಲಿಗೆ ನಿರಾಕರಣೆ
ಬೆಳಗಾವಿ, ಹುಬ್ಬಳಿ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜ ನಗರ, ಗದಗ ಸೇರಿ ಹಲವು ಜಿಲ್ಲೆೆಗಳಲ್ಲಿ ರ್ಯಾಲಿಗೆ ನಿರಾಕರಣೆ.

ರ್ಯಾಲಿಗೆ ಸರಕಾರದ ವಿರೋಧಕ್ಕೆೆ ನೀಡಿರುವ ಕಾರಣ
* ಸಂಚಾರ ಅಸ್ತವ್ಯಸ್ತ
* ಶಾಂತಿ ಭಂಗ ಉಂಟು ಮಾಡುವ ಸಾಧ್ಯತೆ
*ಕಾನೂನು ಸುವ್ಯವಸ್ಥೆೆಗೆ ಭಂಗ ತರುವ ಸಾಧ್ಯತೆ
*ಸಂಚಾರ ವಿಭಾಗದಿಂದ ಅನುಮತಿ ಪಡೆದಿಲ್ಲ
* ಪೊಲೀಸ್ ಬಂದೋಬ್ತ್ ಕಲ್ಪಿಸಲು ಅಸಾಧ್ಯ
* ಬೈಕ್ ರ್ಯಾಲಿಗೆ ಮಂಗಳೂರಿನ ಆಯುಕ್ತರ ಅನುಮತಿ ಪಡೆದಿಲ್ಲ

 

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search