• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!

Tulunadu News Posted On May 5, 2025
0


0
Shares
  • Share On Facebook
  • Tweet It

ಕೇಂದ್ರ ಗೃಹ ಇಲಾಖೆ ಮೇ 7 ರಂದು ಅಣಕು ದಾಳಿ ರಕ್ಷಣಾ ಸಿದ್ಧತೆಯನ್ನು ಮಾಡಿಕೊಳ್ಳುವಂತೆ ರಾಜ್ಯಗಳಿಗೆ ಸೂಚಿಸಿದೆ. ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಭಯೋತ್ಪಾದಕರಿಂದ ಪ್ರವಾಸಿಗರ ಹತ್ಯಾಕಾಂಡದ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ಸಂಘರ್ಷ ಏರ್ಪಡುವ ಸಾಧ್ಯತೆ ಇದ್ದು, ಅದಕ್ಕಾಗಿ ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆ ನಡೆಸಲು ಕೇಂದ್ರ ಗೃಹ ಇಲಾಖೆಯಿಂದ ಸೂಚನೆ ಬಂದಿದೆ.

ಒಂದು ವೇಳೆ ದೇಶದ ಹೊರಗಿನಿಂದ ವಾಯುದಾಳಿ ನಡೆದಲ್ಲಿ ಅದನ್ನು ಎದುರಿಸಲು ನಾಗರಿಕರು ಯಾವ ರೀತಿ ಮಾನಸಿಕವಾಗಿ, ದೈಹಿಕವಾಗಿ ಸಿದ್ಧರಿರಬೇಕು ಎನ್ನುವ ಕಾರಣಕ್ಕೆ ಈ ಅಣಕು ಕಾರ್ಯಾಚರಣೆ ನಡೆಸಲು ತೀರ್ಮಾನಿಸಲಾಗಿದೆ. ಇಂತಹ ಒಂದು ಅಣಕು ಕಾರ್ಯಾಚರಣೆ 1971 ರಲ್ಲಿಯೂ ನಡೆದಿತ್ತು. ಅದರ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಆರಂಭವಾಗಿತ್ತು.

ಹಾಗಾದರೆ ಕೇಂದ್ರ ಗೃಹ ಇಲಾಖೆ ಯಾವ ರೀತಿಯ ತಯಾರಿ ಮಾಡಬೇಕೆಂದು ರಾಜ್ಯಗಳಲ್ಲಿ ಸೂಚಿಸಿದೆ ಎನ್ನುವುದನ್ನು ಈ ಕೆಳಗೆ ವಿವರಿಸಲಾಗಿದೆ.

1. ವಾಯು ದಾಳಿಯ ಮುನ್ಸೂಚನೆ ಬಂದಲ್ಲಿ ಏನು ಮಾಡಬೇಕು.

2. ದೇಶದ ಹೊರಭಾಗದಿಂದ ಪ್ರತಿಕೂಲ ದಾಳಿ ನಡೆದ್ದಲ್ಲಿ ನಾಗರಿಕರು, ವಿದ್ಯಾರ್ಥಿಗಳು ನಾಗರಿಕ ಯೋಧರಾಗಿ ತಮ್ಮನ್ನು ತಾವು ಹೇಗೆ ರಕ್ಷಿಸಿಕೊಳ್ಳಬಹುದು.

3. ದಾಳಿ ಸಂಭವಿಸಿದಲ್ಲಿ ಬೆಳಕನ್ನು ಹೇಗೆ ನಂದಿಸಿ ಕ್ರಮ ಕೈಗೊಳ್ಳುವುದು.

4. ದೇಶದ ಪ್ರಮುಖ ಸ್ಥಾವರಗಳನ್ನು ದಾಳಿಯಿಂದ ರಕ್ಷಿಸಿಕೊಳ್ಳುವುದು ಅಥವಾ ರಕ್ಷಣೆಗಾಗಿ ಸ್ಥಾಪಿಸುವುದು.

5. ಪರಿಸ್ಥಿತಿಯನ್ನು ಅರಿತು ನಾಗರಿಕರ ಸ್ಥಳಾಂತರ ಪ್ರಕ್ರಿಯೆ ಹೇಗೆ ನಡೆಸುವುದು.

ಪಾಕಿಸ್ತಾನ ಸತತ 11 ರಾತ್ರಿ ಭಾರತದ ಗಡಿಯಲ್ಲಿ ಅಪ್ರಚೋದಿತ ದಾಳಿಗಳನ್ನು ನಡೆಸುತ್ತಾ ಬಂದಿದೆ. ಇದಕ್ಕೆ ಭಾರತ ತೀಕ್ಣವಾಗಿ ಉತ್ತರ ನೀಡಿದ್ದು, ಈಗ ಅಣಕು ದಾಳಿ ರಕ್ಷಣಾ ಕಾರ್ಯಾಚರಣೆ ಈ ಹಂತದಲ್ಲಿ ಬಹಳ ಮುಖ್ಯವಾದ ಅಂಗವಾಗಿದೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search