• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಂದಿನಿ ನದಿ ಮಾಲಿನ್ಯ ಮಾಡುವವರಿಗೆ ಕಾದಿದೆ ಶಿಕ್ಷೆ: ಉಳ್ಳಾಯ ದೈವ ಅಭಯ

Tulunadu News Posted On May 19, 2025
0


0
Shares
  • Share On Facebook
  • Tweet It

ನಂದಿನಿ ನದಿ ನೀರನ್ನು ಮಾಲಿನ್ಯ ಮಾಡುವವರಿಗೆ ಸೂಕ್ತ ಶಿಕ್ಷೆ ವಿಧಿಸುವುದಾಗಿ ಚೇಳ್ಯಾರು ಖಂಡಿಗೆ ಧರ್ಮರಸು ಶ್ರೀ ಉಳ್ಳಾಯ ದೈವ ಭರವಸೆ ನೀಡಿದೆ. ನದಿಯ ಮಾಲಿನ್ಯದಿಂದಾಗಿ ಸಾಂಪ್ರದಾಯಿಕ ಮೀನು ಹಿಡಿಯುವ ಜಾತ್ರೆಗೆ ಅಡ್ಡಿಯಾಗಿದೆ ಎಂದು ಭಕ್ತರು ದೈವದಲ್ಲಿ ನಿವೇದಿಸಿದ್ದರು. ಈ ಅಭಯ ದೊರಕಿದ್ದು ಚೇಳ್ಯಾರು ಖಂಡಿಗೆ ಧರ್ಮರಸು ಶ್ರೀ ಉಳ್ಳಾಯ ಪರಿವಾರ ದೈವಗಳ ನೇಮೋತ್ಸವ ಸಂದರ್ಭದಲ್ಲಿ.

ಖಂಡಿಗೆ ಚೇಳ್ಯಾರು ಧರ್ಮರಸು ಶ್ರೀ ಉಳ್ಳಾಯ ದೈವಸ್ಥಾನದ ವಾರ್ಷಿಕ ಜಾತ್ರೆ ಸಂದರ್ಭ ಸಂಪ್ರದಾಯದಂತೆ ಮೀನು ಹಿಡಿಯುವ ಕಾರ್ಯಕ್ರಮ ಜರಗುತ್ತದೆ. ಸದ್ಯ ನಂದಿನಿ ನದಿಯಲ್ಲಿ ತ್ಯಾಜ್ಯ ನೀರು ಹರಿಯುವುದರ ಜೊತೆಗೆ ಕಳೆ ಸಿಕ್ಕಾಪಟ್ಟೆ ತುಂಬಿರುವುದರಿಂದ ಮೀನು ಹಿಡಿಯಲು ಬರುವ ಭಕ್ತರ ಸಂಖ್ಯೆ ಕಡಿಮೆಯಾಗಿದೆ. ನದಿಯಲ್ಲಿ ಮೀನಿನ ಸಂತತಿ ಕೊರತೆ ಕಂಡು ಬಂದಿದ್ದು, ಇದೇ ರೀತಿ ಮುಂದುವರೆದಲ್ಲಿ ಭವಿಷ್ಯದಲ್ಲಿ ಈ ಸಂಪ್ರದಾಯವೇ ನಾಶವಾಗುವ ಆತಂಕವಿದೆ.

ಈ ಹಿನ್ನಲೆಯಲ್ಲಿ ಈ ಬಾರಿ ದೈವಗಳ ನೇಮೋತ್ಸವ ಸಂದರ್ಭ ನಂದಿನಿ ನದಿ ಮಾಲಿನ್ಯದಿಂದ ಜಾತ್ರೆ ಪ್ರಯುಕ್ತ ಖಂಡಿಗೆ ಮೀನು ಹಿಡಿಯುವ ಕಾರ್ಯಕ್ರಮ ನಿಂತು ಹೋಗುವ ಪರಿಸ್ಥಿತಿ ಬಂದಿರುವ ಬಗ್ಗೆ ಆಡಳಿತ ಸಮಿತಿ, ನಂದಿನಿ ನದಿ ಸಂರಕ್ಷಣಾ ಸಮಿತಿ ಪದಾಧಿಕಾರಿಗಳು ದೈವದಲ್ಲೇ ನಿವೇದಿಸಿದ್ದರು.

ಈ ಬಗ್ಗೆ ಅಭಯ ನೀಡಿದ ಉಳ್ಳಾಯ ದೈವ, ತನ್ನ ಸವಾರಿಯ ನಂದಿನಿ ನದಿ ಉಳಿಸಿಯೇ ಸಿದ್ಧ, ನದಿಯನ್ನು ಮಾಲಿನ್ಯ ಮಾಡಿದವರಿಗೆ ತಕ್ಕ ಶಾಸ್ತ್ರಿ ಮಾಡುತ್ತೇನೆ ಎಂದು ಅಭಯ ನೀಡಿದೆ.
ಕಳೆದ ವರ್ಷ ಕೂಡ ಈ ಬಗ್ಗೆ ಪ್ರಮುಖರು ದೈವಕ್ಕೆ ಮೊರೆ ಹೋಗಿದ್ದು, ನಂದಿನಿ ನದಿ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಪ್ರತಿಭಟನಾ ಸ್ಥಳಕ್ಕೆ ಲೋಕಾಯುಕ್ತರು ಭೇಟಿ ಕೂಡಲೇ ಕ್ರಮ ತೆಗೆದುಕೊಳ್ಳುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ಆದೇಶ ನೀಡಿದ್ದರು.

0
Shares
  • Share On Facebook
  • Tweet It


- Advertisement -


Trending Now
PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
Tulunadu News June 27, 2025
ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
Tulunadu News June 26, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
    • ನಮ್ಮ ಸರಕಾರವಿದ್ದೇ ಒಂದು ಚರಂಡಿ ಮಾಡಲು ಆಗಿಲ್ಲ - ಕಾಂಗ್ರೆಸ್ ಶಾಸಕ ಬಹಿರಂಗ ಬೇಸರ!
    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
  • Popular Posts

    • 1
      PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • 2
      ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • 3
      ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • 4
      ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • 5
      ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search