• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಧರ್ಮಸ್ಥಳದ ಆಕಾಂಕ್ಷ ಆತ್ಮಹತ್ಯೆಯ ಬಗ್ಗೆ ಅನುಮಾನ ಎಂದ ಹೆತ್ತವರು!

Tulunadu News Posted On May 19, 2025
0


0
Shares
  • Share On Facebook
  • Tweet It

ಕೈಯಲ್ಲಿ ಕಾಲೇಜಿನ ಪ್ರಮಾಣಪತ್ರಗಳನ್ನು ಹಿಡಿದುಕೊಂಡು ಹೆತ್ತವರಿಗೆ ಫೋನ್ ಮಾಡಿ ಮಾತನಾಡಿದ 22 ವಯಸ್ಸಿನ ಯುವತಿ ಕೆಲವೇ ಕ್ಷಣಗಳಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಹೇಗೆ ಸಾಧ್ಯ ಎಂದು ಆಕೆಯ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ಆಗಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಆಕೆಯ ಹೆಸರು ಆಕಾಂಕ್ಷ. ಸುರೇಂದ್ರ ಹಾಗೂ ಸಿಂಧೂ ದೇವಿಯವರ ಮಗಳು. ಊರು ಕರ್ನಾಟಕದ ಬೆಳ್ತಂಗಡಿಯ ಧರ್ಮಸ್ಥಳದ ಬೋಳಿಯೂರು. ಆಕೆ ಮೇ 17 ರಂದು ಪಂಜಾಬಿನಲ್ಲಿ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾಳೆ.

ಆಕಾಂಕ್ಷ ಎಸ್ ನಾಯರ್ ಏರೋಸ್ಪೇಸ್ ಇಂಜಿನಿಯರ್. ಆರು ತಿಂಗಳಿನಿಂದ ದೆಹಲಿಯ ಸ್ಪೈಸ್ ಜೆಟ್ ಏರೋಸ್ಪೇಸ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದಳು. ಅವಳಿಗೆ ಹೆಚ್ಚಿನ ಉದ್ಯೋಗಾವಕಾಶದ ಬಾಗಿಲು ತೆರೆದಿತ್ತು. ಅದಕ್ಕಾಗಿ ಕೆಲವು ದಾಖಲೆಗಳನ್ನು ಕಾಲೇಜಿನಿಂದ ಪಡೆಯಬೇಕಿತ್ತು. ಅದಕ್ಕಾಗಿ ತಾನು ಕಲಿತ ಪಂಜಾಬಿನ ಲವ್ಲಿ ಪ್ರೋಫೆಷನಲ್ ವಿಶ್ವವಿದ್ಯಾನಿಲಯಕ್ಕೆ ತೆರಳಿದ್ದಳು. ಅಲ್ಲಿ ಪ್ರಮಾಣಪತ್ರಗಳನ್ನು ಪಡೆದಿದ್ದಾಳೆ. ನಂತರ ಹೆತ್ತವರೊಂದಿಗೆ ಮಾತನಾಡಿದ್ದಾಳೆ. ನಂತರ ಏಕಾಏಕಿ ಕಾಲೇಜಿನ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಇಲ್ಲಿ ಹೆತ್ತವರೊಂದಿಗೆ ಮಾತನಾಡಿದಾಗ ಆಕೆ ಆತ್ಮಹತ್ಯೆ ಮಾಡಿಕೊಳ್ಳುವ ಯಾವ ಸುಳಿವೂ ಆಕೆಯ ಮನೆಯವರಿಗೆ ಸಿಕ್ಕಿರಲಿಲ್ಲ. ಅದರೆ ಆ ಫೋನ್ ಕರೆ ಮತ್ತು ಆತ್ಮಹತ್ಯೆಯ ನಡುವೆ ಏನು ಆಯಿತು ಎನ್ನುವುದೇ ಈಗ ತನಿಖೆ ಆಗಬೇಕಾದ ಸಂಗತಿ. ಸದ್ಯ ಪೊಲೀಸರು ಆಕೆ ಕಲಿತ ಕಾಲೇಜಿನ ಪ್ರೋಫೆಸರ್ ಮ್ಯಾಥ್ಯೂ ವಿರುದ್ಧ ಆತ್ಮಹತ್ಯೆಗೆ ಪ್ರೇರಣೆ ಎನ್ನುವ ಕೇಸನ್ನು ಯುವತಿಯ ಸಹೋದರ ನೀಡಿದ ದೂರಿನ ಆಧಾರದ ಮೇಲೆ ದಾಖಲಿಸಿದ್ದಾರೆ.

ಅಷ್ಟಕ್ಕೂ ಕೇರಳದ ಕೊಟ್ಟಾಯಂ ನಿವಾಸಿ ಬಿಜಿಲ್ ಮ್ಯಾಥ್ಯೂಗೂ ಈ ಕೇಸಿಗೂ ಸಂಬಂಧ ಏನು ಎನ್ನುವುದು ತನಿಖೆಯಿಂದ ತಿಳಿದು ಬರಬೇಕಿದೆ. ಬಿಜಿಲ್ ಮ್ಯಾಥ್ಯೂಗೆ ಈಗಾಗಲೇ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಆತನಿಗೂ, ಈಕೆಗೂ ಲವ್ ಎಫೇರ್ ಇತ್ತಾ? ತನ್ನನ್ನು ಮದುವೆಯಾಗು ಎಂದು ಆತನ ಮನೆಗೆ ಹೋಗಿ ಈಕೆ ರಂಪಾಟ ಮಾಡಿದ್ದಳಾ? ಕಾಲೇಜಿನಲ್ಲಿಯೂ ಇವರಿಬ್ಬರ ನಡುವೆ ಅದೇ ವಿಷಯಕ್ಕೆ ಮೊನ್ನೆ ಗಲಾಟೆಯಾಯಿತಾ? ಇದೆಲ್ಲವೂ ತನಿಖೆಯಿಂದ ಸಾಬೀತಾಗಬೇಕು. ಇನ್ನೊಂದೆಡೆ ಆತ ಈಕೆಯನ್ನು ಬಲವಂತವಾಗಿ ಪೀಡಿಸುತ್ತಿದ್ದಾನಾ ಎನ್ನುವುದು ಕೂಡ ತನಿಖೆಯಿಂದಲೇ ಹೊರಬೀಳಬೇಕಾಗಿದೆ. ಇದು ಪ್ರೇಮ ವೈಫಲ್ಯದ ಪ್ರಕರಣವೋ ಅಲ್ಲವೋ ಎಂದು ಗೊತ್ತಾದ ನಂತರವೇ ಸತ್ಯಾಸತ್ಯತೆ ಹೊರಬೀಳಲಿದೆ.

ಸದ್ಯ ಆಕೆಯ ಮೃತದೇಹವನ್ನು ಹೆತ್ತವರಿಗೆ ಹಸ್ತಾಂತರಿಸಲಾಗಿದ್ದು, ಧರ್ಮಸ್ಥಳದ ಬೊಳಿಯೂರು ಮನೆಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.

0
Shares
  • Share On Facebook
  • Tweet It


- Advertisement -


Trending Now
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
    • 114 ಮುಸ್ಲಿಮರು ಸೇರಿ ದೇಗುಲದ 167 ಸಿಬ್ಬಂದಿ ವಜಾ ಮಾಡಿ ಆದೇಶ!
  • Popular Posts

    • 1
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 2
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 3
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 4
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • 5
      ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search