• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಧರ್ಮಸ್ಥಳದ ಆಕಾಂಕ್ಷ ಆತ್ಮಹತ್ಯೆಯ ಬಗ್ಗೆ ಅನುಮಾನ ಎಂದ ಹೆತ್ತವರು!

Tulunadu News Posted On May 19, 2025
0


0
Shares
  • Share On Facebook
  • Tweet It

ಕೈಯಲ್ಲಿ ಕಾಲೇಜಿನ ಪ್ರಮಾಣಪತ್ರಗಳನ್ನು ಹಿಡಿದುಕೊಂಡು ಹೆತ್ತವರಿಗೆ ಫೋನ್ ಮಾಡಿ ಮಾತನಾಡಿದ 22 ವಯಸ್ಸಿನ ಯುವತಿ ಕೆಲವೇ ಕ್ಷಣಗಳಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಹೇಗೆ ಸಾಧ್ಯ ಎಂದು ಆಕೆಯ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ಆಗಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಆಕೆಯ ಹೆಸರು ಆಕಾಂಕ್ಷ. ಸುರೇಂದ್ರ ಹಾಗೂ ಸಿಂಧೂ ದೇವಿಯವರ ಮಗಳು. ಊರು ಕರ್ನಾಟಕದ ಬೆಳ್ತಂಗಡಿಯ ಧರ್ಮಸ್ಥಳದ ಬೋಳಿಯೂರು. ಆಕೆ ಮೇ 17 ರಂದು ಪಂಜಾಬಿನಲ್ಲಿ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾಳೆ.

ಆಕಾಂಕ್ಷ ಎಸ್ ನಾಯರ್ ಏರೋಸ್ಪೇಸ್ ಇಂಜಿನಿಯರ್. ಆರು ತಿಂಗಳಿನಿಂದ ದೆಹಲಿಯ ಸ್ಪೈಸ್ ಜೆಟ್ ಏರೋಸ್ಪೇಸ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದಳು. ಅವಳಿಗೆ ಹೆಚ್ಚಿನ ಉದ್ಯೋಗಾವಕಾಶದ ಬಾಗಿಲು ತೆರೆದಿತ್ತು. ಅದಕ್ಕಾಗಿ ಕೆಲವು ದಾಖಲೆಗಳನ್ನು ಕಾಲೇಜಿನಿಂದ ಪಡೆಯಬೇಕಿತ್ತು. ಅದಕ್ಕಾಗಿ ತಾನು ಕಲಿತ ಪಂಜಾಬಿನ ಲವ್ಲಿ ಪ್ರೋಫೆಷನಲ್ ವಿಶ್ವವಿದ್ಯಾನಿಲಯಕ್ಕೆ ತೆರಳಿದ್ದಳು. ಅಲ್ಲಿ ಪ್ರಮಾಣಪತ್ರಗಳನ್ನು ಪಡೆದಿದ್ದಾಳೆ. ನಂತರ ಹೆತ್ತವರೊಂದಿಗೆ ಮಾತನಾಡಿದ್ದಾಳೆ. ನಂತರ ಏಕಾಏಕಿ ಕಾಲೇಜಿನ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಇಲ್ಲಿ ಹೆತ್ತವರೊಂದಿಗೆ ಮಾತನಾಡಿದಾಗ ಆಕೆ ಆತ್ಮಹತ್ಯೆ ಮಾಡಿಕೊಳ್ಳುವ ಯಾವ ಸುಳಿವೂ ಆಕೆಯ ಮನೆಯವರಿಗೆ ಸಿಕ್ಕಿರಲಿಲ್ಲ. ಅದರೆ ಆ ಫೋನ್ ಕರೆ ಮತ್ತು ಆತ್ಮಹತ್ಯೆಯ ನಡುವೆ ಏನು ಆಯಿತು ಎನ್ನುವುದೇ ಈಗ ತನಿಖೆ ಆಗಬೇಕಾದ ಸಂಗತಿ. ಸದ್ಯ ಪೊಲೀಸರು ಆಕೆ ಕಲಿತ ಕಾಲೇಜಿನ ಪ್ರೋಫೆಸರ್ ಮ್ಯಾಥ್ಯೂ ವಿರುದ್ಧ ಆತ್ಮಹತ್ಯೆಗೆ ಪ್ರೇರಣೆ ಎನ್ನುವ ಕೇಸನ್ನು ಯುವತಿಯ ಸಹೋದರ ನೀಡಿದ ದೂರಿನ ಆಧಾರದ ಮೇಲೆ ದಾಖಲಿಸಿದ್ದಾರೆ.

ಅಷ್ಟಕ್ಕೂ ಕೇರಳದ ಕೊಟ್ಟಾಯಂ ನಿವಾಸಿ ಬಿಜಿಲ್ ಮ್ಯಾಥ್ಯೂಗೂ ಈ ಕೇಸಿಗೂ ಸಂಬಂಧ ಏನು ಎನ್ನುವುದು ತನಿಖೆಯಿಂದ ತಿಳಿದು ಬರಬೇಕಿದೆ. ಬಿಜಿಲ್ ಮ್ಯಾಥ್ಯೂಗೆ ಈಗಾಗಲೇ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಆತನಿಗೂ, ಈಕೆಗೂ ಲವ್ ಎಫೇರ್ ಇತ್ತಾ? ತನ್ನನ್ನು ಮದುವೆಯಾಗು ಎಂದು ಆತನ ಮನೆಗೆ ಹೋಗಿ ಈಕೆ ರಂಪಾಟ ಮಾಡಿದ್ದಳಾ? ಕಾಲೇಜಿನಲ್ಲಿಯೂ ಇವರಿಬ್ಬರ ನಡುವೆ ಅದೇ ವಿಷಯಕ್ಕೆ ಮೊನ್ನೆ ಗಲಾಟೆಯಾಯಿತಾ? ಇದೆಲ್ಲವೂ ತನಿಖೆಯಿಂದ ಸಾಬೀತಾಗಬೇಕು. ಇನ್ನೊಂದೆಡೆ ಆತ ಈಕೆಯನ್ನು ಬಲವಂತವಾಗಿ ಪೀಡಿಸುತ್ತಿದ್ದಾನಾ ಎನ್ನುವುದು ಕೂಡ ತನಿಖೆಯಿಂದಲೇ ಹೊರಬೀಳಬೇಕಾಗಿದೆ. ಇದು ಪ್ರೇಮ ವೈಫಲ್ಯದ ಪ್ರಕರಣವೋ ಅಲ್ಲವೋ ಎಂದು ಗೊತ್ತಾದ ನಂತರವೇ ಸತ್ಯಾಸತ್ಯತೆ ಹೊರಬೀಳಲಿದೆ.

ಸದ್ಯ ಆಕೆಯ ಮೃತದೇಹವನ್ನು ಹೆತ್ತವರಿಗೆ ಹಸ್ತಾಂತರಿಸಲಾಗಿದ್ದು, ಧರ್ಮಸ್ಥಳದ ಬೊಳಿಯೂರು ಮನೆಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.

0
Shares
  • Share On Facebook
  • Tweet It




Trending Now
'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
Tulunadu News February 11, 2026
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
  • Popular Posts

    • 1
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 2
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 3
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search