• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಯೋತ್ಪಾದಕತೆಯ ವಿರುದ್ಧ ವಿದೇಶಕ್ಕೆ ತೆರಳುವ ಭಾರತದ ನಿಯೋಗದಲ್ಲಿ ಓವೈಸಿ! ಹೇಳಿದ್ದೇನು?

Tulunadu News Posted On May 19, 2025
0


0
Shares
  • Share On Facebook
  • Tweet It

ಸಂಸದ ಅಸಾದುದ್ದೀನ್ ಓವೈಸಿ ಭಾರತದಿಂದ ವಿದೇಶದ ವಿವಿಧ ರಾಷ್ಟ್ರಗಳಿಗೆ ತೆರಳುವ ಏಳು ನಿಯೋಗಗಳ ಪೈಕಿ ಒಂದರಲ್ಲಿ ಸ್ಥಾನ ಪಡೆದಿದ್ದಾರೆ. ಕೇಂದ್ರ ಸರಕಾರ ಸರ್ವ ಪಕ್ಷಗಳನ್ನು ಸೇರಿಸಿ ಏಳು ನಿಯೋಗಗಳನ್ನು ರಚಿಸಿದೆ. ಅದರಲ್ಲಿ ಓವೈಸಿಗೂ ಸ್ಥಾನ ನೀಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಹೈದ್ರಾಬಾದ್ ಸಂಸದ ಓವೈಸಿ, ನಾನು ನನ್ನ ಪಕ್ಷ ಎಐಎಂಐಎಂ ಪ್ರತಿನಿಧಿಯಾಗಿ ತೆರಳುತ್ತಿಲ್ಲ. ನಾನು ಭಾರತ ದೇಶವನ್ನು ಪ್ರತಿನಿಧಿಸಲು ಹೋಗುತ್ತಿದ್ದೇನೆ ಎಂದು ಹೇಳಿದ್ದಾರೆ.

ನಾನು ಪಾಕಿಸ್ತಾನದ ಷಡ್ಯಂತ್ರವನ್ನು ಜಗತ್ತಿನ ಬೇರೆ ಬೇರೆ ರಾಷ್ಟ್ರಗಳ ಮುಂದೆ ಬಿಚ್ಚಿಡಲು ಈ ಅವಕಾಶವನ್ನು ಬಳಸಿಕೊಳ್ಳುತ್ತಿದ್ದೇನೆ. ಭಾರತ ಇಲ್ಲಿಯ ತನಕ ಪಾಕ್ ಪ್ರಾಯೋಜಿತ ಭಯೋತ್ಪಾದನೆಯ ಕೃತ್ಯದಿಂದ ಸಾಕಷ್ಟು ತೊಂದರೆಯನ್ನು ಅನುಭವಿಸಿದೆ. ಇದೆಲ್ಲವೂ ಪಾಕಿಸ್ತಾನದ ಮಾಜಿ ಅಧ್ಯಕ್ಷ ಮೊಹಮ್ಮದ್ ಜಿಯಾ ಉಲ್ ಹಕ್ ಸಮಯದಿಂದ ಆರಂಭವಾಗಿತ್ತು. ಇದು ಜಗತ್ತಿಗೆ ತಿಳಿಯಬೇಕು. ಅದರೊಂದಿಗೆ ಕಂದಹಾರ್ ವಿಮಾನ ಅಪಹರಣ, 26/11 ಮುಂಬೈ ದಾಳಿ, 2001 ಪಾರ್ಲಿಮೆಂಟ್ ದಾಳಿ, ಉರಿ ದಾಳಿ, ಪಠಾನ್ ಕೋಟ್ ದಾಳಿ, ರೇಸಿ ಮತ್ತು ಪಾಲ್ಗಾಂಮ್ ನಲ್ಲಿ ಪ್ರವಾಸಿಗರ ಹತ್ಯೆಗಳು, ಹೀಗೆ ಪಾಕಿಸ್ತಾನದ ಉಗ್ರಗಾಮಿ ಸಂಘಟನೆಗಳ ಮುಖವಾಡಗಳನ್ನು ಪ್ರಪಂಚದ ಮುಂದೆ ತೆರೆದಿಡುವ ಅವಶ್ಯಕತೆ ಇದೆ ಎಂದು ಓವೈಸಿ ಹೇಳಿದ್ದಾರೆ.

ಇನ್ನು ಪಾಕಿಸ್ತಾನ ತನ್ನನ್ನು ತಾನು ಇಸ್ಲಾಂ ರಾಷ್ಟ್ರ ಎಂದು ಬಿಂಬಿಸಲು ವ್ಯರ್ಥ ಪ್ರಯತ್ನ ಮಾಡುತ್ತಿದೆ ಎಂದು ಹೇಳಿದ ಓವೈಸಿ ಇದು ಶುದ್ಧ ಸೋಗಲಾಡಿತನ ಎಂದು ಹೇಳಿದ್ದಾರೆ. ನಾನು ಏಳು ನಿಯೋಗದಲ್ಲಿ ಯಾವ ನಿಯೋಗದ ಭಾಗವೆಂದಾಗಲಿ, ನಮ್ಮ ನಿಯೋಗದ ಮುಖ್ಯಸ್ಥರು ಯಾರು ಎಂದು ಯೋಚಿಸಲು ಹೋಗಿಲ್ಲ. ನಾವು ಪ್ರಪಂಚದ ಎದುರು ನಮ್ಮ ಕಥೆಯನ್ನು ಹೇಳಲೇಬೇಕಿದೆ. ಪಾಕಿಸ್ತಾನ ತನ್ನನ್ನು ತಾನು ಇಸ್ಲಾಮಿಕ್ ದೇಶ ಎಂದು ಬಿಂಬಿಸಿಕೊಳ್ಳುವ ಹತಾಶ ಪ್ರಯತ್ನ ಮಾಡುತ್ತಿದೆ. ಹಾಗೆ ನೋಡಿದರೆ ಭಾರತದಲ್ಲಿ ಸುಮಾರು 20 ಕೋಟಿ ಮುಸ್ಲಿಮರಿದ್ದಾರೆ. ಇದೆಲ್ಲವನ್ನು ನಾವು ಜಗತ್ತಿಗೆ ತಿಳಿಸಬೇಕಿದೆ ಎಂದು ಓವೈಸಿ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಅಗಸ್ಟ್ 16 ರಂದು ಧರ್ಮಸ್ಥಳ ಚಲೋ ಅಭಿಯಾನ - ಶಾಸಕ ವಿಶ್ವನಾಥ!
Tulunadu News August 9, 2025
ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ:- ಶಾಸಕ ಕಾಮತ್
Tulunadu News August 8, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಗಸ್ಟ್ 16 ರಂದು ಧರ್ಮಸ್ಥಳ ಚಲೋ ಅಭಿಯಾನ - ಶಾಸಕ ವಿಶ್ವನಾಥ!
    • ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ:- ಶಾಸಕ ಕಾಮತ್
    • ಎದೆಹಾಲು ದಾನದಲ್ಲಿ ದಾಖಲೆ ಬರೆದ ತಮಿಳುನಾಡಿನ ಮಹಿಳೆ!
    • ಭಾರತದಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿದ ಕೇಂದ್ರ ಗೃಹ ಸಚಿವರಾಗಿ ಅಮಿತ್ ಶಾ ದಾಖಲೆ!
    • ಮಾಲೆಗಾಂ ಸ್ಫೋಟದಲ್ಲಿ ಯೋಗಿ, ಭಾಗವತ್ ಹೆಸರು ಹೇಳಲು ಒತ್ತಡ ಇತ್ತು ಎಂದ ನಿವೃತ್ತ ಮೇಜರ್!
    • "2 ರೂಪಾಯಿ ಡಾಕ್ಟರ್" ನಿಧನ.. ಜನಸಾಮಾನ್ಯರ ಕಂಬನಿ
    • ಬಂಧೀಖಾನೆ ಮುಖ್ಯಸ್ಥರಾಗಿ ದಯಾನಂದ ಮತ್ತೆ ಸೇವೆಯಲ್ಲಿ!
    • ಬೈಕಂಪಾಡಿಯಲ್ಲಿ ಅಮೋನಿಯಾ ಅನಿಲ ಸೋರಿಕೆ, ನಾಲ್ವರು ತೀವ್ರ ಅಸ್ವಸ್ಥ!
    • 2008 ಮಾಲೆಗಾಂ ಬಾಂಬ್ ಬ್ಲಾಸ್ಟ್ ಪ್ರಕರಣ: ಪ್ರಗ್ಯಾ ಸಿಂಗ್, ಕರ್ನಲ್ ಪುರೋಹಿತ್ ಸೇರಿ 7 ಜನ ದೋಷಮುಕ್ತ!
    • ಕೇರಳದ ಸನ್ಯಾನಿಸಿಯರಿಗೆ ಜಾಮೀನು ಇಲ್ಲ; ಕಾಂಗ್ರೆಸ್ ಪ್ರತಿಭಟನೆ
  • Popular Posts

    • 1
      ಅಗಸ್ಟ್ 16 ರಂದು ಧರ್ಮಸ್ಥಳ ಚಲೋ ಅಭಿಯಾನ - ಶಾಸಕ ವಿಶ್ವನಾಥ!
    • 2
      ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ:- ಶಾಸಕ ಕಾಮತ್
    • 3
      ಎದೆಹಾಲು ದಾನದಲ್ಲಿ ದಾಖಲೆ ಬರೆದ ತಮಿಳುನಾಡಿನ ಮಹಿಳೆ!
    • 4
      ಭಾರತದಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿದ ಕೇಂದ್ರ ಗೃಹ ಸಚಿವರಾಗಿ ಅಮಿತ್ ಶಾ ದಾಖಲೆ!
    • 5
      ಮಾಲೆಗಾಂ ಸ್ಫೋಟದಲ್ಲಿ ಯೋಗಿ, ಭಾಗವತ್ ಹೆಸರು ಹೇಳಲು ಒತ್ತಡ ಇತ್ತು ಎಂದ ನಿವೃತ್ತ ಮೇಜರ್!

  • Privacy Policy
  • Contact
© Tulunadu Infomedia.

Press enter/return to begin your search