• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಯೋತ್ಪಾದಕತೆಯ ವಿರುದ್ಧ ವಿದೇಶಕ್ಕೆ ತೆರಳುವ ಭಾರತದ ನಿಯೋಗದಲ್ಲಿ ಓವೈಸಿ! ಹೇಳಿದ್ದೇನು?

Tulunadu News Posted On May 19, 2025
0


0
Shares
  • Share On Facebook
  • Tweet It

ಸಂಸದ ಅಸಾದುದ್ದೀನ್ ಓವೈಸಿ ಭಾರತದಿಂದ ವಿದೇಶದ ವಿವಿಧ ರಾಷ್ಟ್ರಗಳಿಗೆ ತೆರಳುವ ಏಳು ನಿಯೋಗಗಳ ಪೈಕಿ ಒಂದರಲ್ಲಿ ಸ್ಥಾನ ಪಡೆದಿದ್ದಾರೆ. ಕೇಂದ್ರ ಸರಕಾರ ಸರ್ವ ಪಕ್ಷಗಳನ್ನು ಸೇರಿಸಿ ಏಳು ನಿಯೋಗಗಳನ್ನು ರಚಿಸಿದೆ. ಅದರಲ್ಲಿ ಓವೈಸಿಗೂ ಸ್ಥಾನ ನೀಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಹೈದ್ರಾಬಾದ್ ಸಂಸದ ಓವೈಸಿ, ನಾನು ನನ್ನ ಪಕ್ಷ ಎಐಎಂಐಎಂ ಪ್ರತಿನಿಧಿಯಾಗಿ ತೆರಳುತ್ತಿಲ್ಲ. ನಾನು ಭಾರತ ದೇಶವನ್ನು ಪ್ರತಿನಿಧಿಸಲು ಹೋಗುತ್ತಿದ್ದೇನೆ ಎಂದು ಹೇಳಿದ್ದಾರೆ.

ನಾನು ಪಾಕಿಸ್ತಾನದ ಷಡ್ಯಂತ್ರವನ್ನು ಜಗತ್ತಿನ ಬೇರೆ ಬೇರೆ ರಾಷ್ಟ್ರಗಳ ಮುಂದೆ ಬಿಚ್ಚಿಡಲು ಈ ಅವಕಾಶವನ್ನು ಬಳಸಿಕೊಳ್ಳುತ್ತಿದ್ದೇನೆ. ಭಾರತ ಇಲ್ಲಿಯ ತನಕ ಪಾಕ್ ಪ್ರಾಯೋಜಿತ ಭಯೋತ್ಪಾದನೆಯ ಕೃತ್ಯದಿಂದ ಸಾಕಷ್ಟು ತೊಂದರೆಯನ್ನು ಅನುಭವಿಸಿದೆ. ಇದೆಲ್ಲವೂ ಪಾಕಿಸ್ತಾನದ ಮಾಜಿ ಅಧ್ಯಕ್ಷ ಮೊಹಮ್ಮದ್ ಜಿಯಾ ಉಲ್ ಹಕ್ ಸಮಯದಿಂದ ಆರಂಭವಾಗಿತ್ತು. ಇದು ಜಗತ್ತಿಗೆ ತಿಳಿಯಬೇಕು. ಅದರೊಂದಿಗೆ ಕಂದಹಾರ್ ವಿಮಾನ ಅಪಹರಣ, 26/11 ಮುಂಬೈ ದಾಳಿ, 2001 ಪಾರ್ಲಿಮೆಂಟ್ ದಾಳಿ, ಉರಿ ದಾಳಿ, ಪಠಾನ್ ಕೋಟ್ ದಾಳಿ, ರೇಸಿ ಮತ್ತು ಪಾಲ್ಗಾಂಮ್ ನಲ್ಲಿ ಪ್ರವಾಸಿಗರ ಹತ್ಯೆಗಳು, ಹೀಗೆ ಪಾಕಿಸ್ತಾನದ ಉಗ್ರಗಾಮಿ ಸಂಘಟನೆಗಳ ಮುಖವಾಡಗಳನ್ನು ಪ್ರಪಂಚದ ಮುಂದೆ ತೆರೆದಿಡುವ ಅವಶ್ಯಕತೆ ಇದೆ ಎಂದು ಓವೈಸಿ ಹೇಳಿದ್ದಾರೆ.

ಇನ್ನು ಪಾಕಿಸ್ತಾನ ತನ್ನನ್ನು ತಾನು ಇಸ್ಲಾಂ ರಾಷ್ಟ್ರ ಎಂದು ಬಿಂಬಿಸಲು ವ್ಯರ್ಥ ಪ್ರಯತ್ನ ಮಾಡುತ್ತಿದೆ ಎಂದು ಹೇಳಿದ ಓವೈಸಿ ಇದು ಶುದ್ಧ ಸೋಗಲಾಡಿತನ ಎಂದು ಹೇಳಿದ್ದಾರೆ. ನಾನು ಏಳು ನಿಯೋಗದಲ್ಲಿ ಯಾವ ನಿಯೋಗದ ಭಾಗವೆಂದಾಗಲಿ, ನಮ್ಮ ನಿಯೋಗದ ಮುಖ್ಯಸ್ಥರು ಯಾರು ಎಂದು ಯೋಚಿಸಲು ಹೋಗಿಲ್ಲ. ನಾವು ಪ್ರಪಂಚದ ಎದುರು ನಮ್ಮ ಕಥೆಯನ್ನು ಹೇಳಲೇಬೇಕಿದೆ. ಪಾಕಿಸ್ತಾನ ತನ್ನನ್ನು ತಾನು ಇಸ್ಲಾಮಿಕ್ ದೇಶ ಎಂದು ಬಿಂಬಿಸಿಕೊಳ್ಳುವ ಹತಾಶ ಪ್ರಯತ್ನ ಮಾಡುತ್ತಿದೆ. ಹಾಗೆ ನೋಡಿದರೆ ಭಾರತದಲ್ಲಿ ಸುಮಾರು 20 ಕೋಟಿ ಮುಸ್ಲಿಮರಿದ್ದಾರೆ. ಇದೆಲ್ಲವನ್ನು ನಾವು ಜಗತ್ತಿಗೆ ತಿಳಿಸಬೇಕಿದೆ ಎಂದು ಓವೈಸಿ ಹೇಳಿದ್ದಾರೆ.

0
Shares
  • Share On Facebook
  • Tweet It


- Advertisement -


Trending Now
PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
Tulunadu News June 27, 2025
ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
Tulunadu News June 26, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
    • ನಮ್ಮ ಸರಕಾರವಿದ್ದೇ ಒಂದು ಚರಂಡಿ ಮಾಡಲು ಆಗಿಲ್ಲ - ಕಾಂಗ್ರೆಸ್ ಶಾಸಕ ಬಹಿರಂಗ ಬೇಸರ!
    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
  • Popular Posts

    • 1
      PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • 2
      ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • 3
      ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • 4
      ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • 5
      ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search