• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಭಯೋತ್ಪಾದಕತೆಯ ವಿರುದ್ಧ ವಿದೇಶಕ್ಕೆ ತೆರಳುವ ಭಾರತದ ನಿಯೋಗದಲ್ಲಿ ಓವೈಸಿ! ಹೇಳಿದ್ದೇನು?

Tulunadu News Posted On May 19, 2025


  • Share On Facebook
  • Tweet It

ಸಂಸದ ಅಸಾದುದ್ದೀನ್ ಓವೈಸಿ ಭಾರತದಿಂದ ವಿದೇಶದ ವಿವಿಧ ರಾಷ್ಟ್ರಗಳಿಗೆ ತೆರಳುವ ಏಳು ನಿಯೋಗಗಳ ಪೈಕಿ ಒಂದರಲ್ಲಿ ಸ್ಥಾನ ಪಡೆದಿದ್ದಾರೆ. ಕೇಂದ್ರ ಸರಕಾರ ಸರ್ವ ಪಕ್ಷಗಳನ್ನು ಸೇರಿಸಿ ಏಳು ನಿಯೋಗಗಳನ್ನು ರಚಿಸಿದೆ. ಅದರಲ್ಲಿ ಓವೈಸಿಗೂ ಸ್ಥಾನ ನೀಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಹೈದ್ರಾಬಾದ್ ಸಂಸದ ಓವೈಸಿ, ನಾನು ನನ್ನ ಪಕ್ಷ ಎಐಎಂಐಎಂ ಪ್ರತಿನಿಧಿಯಾಗಿ ತೆರಳುತ್ತಿಲ್ಲ. ನಾನು ಭಾರತ ದೇಶವನ್ನು ಪ್ರತಿನಿಧಿಸಲು ಹೋಗುತ್ತಿದ್ದೇನೆ ಎಂದು ಹೇಳಿದ್ದಾರೆ.

ನಾನು ಪಾಕಿಸ್ತಾನದ ಷಡ್ಯಂತ್ರವನ್ನು ಜಗತ್ತಿನ ಬೇರೆ ಬೇರೆ ರಾಷ್ಟ್ರಗಳ ಮುಂದೆ ಬಿಚ್ಚಿಡಲು ಈ ಅವಕಾಶವನ್ನು ಬಳಸಿಕೊಳ್ಳುತ್ತಿದ್ದೇನೆ. ಭಾರತ ಇಲ್ಲಿಯ ತನಕ ಪಾಕ್ ಪ್ರಾಯೋಜಿತ ಭಯೋತ್ಪಾದನೆಯ ಕೃತ್ಯದಿಂದ ಸಾಕಷ್ಟು ತೊಂದರೆಯನ್ನು ಅನುಭವಿಸಿದೆ. ಇದೆಲ್ಲವೂ ಪಾಕಿಸ್ತಾನದ ಮಾಜಿ ಅಧ್ಯಕ್ಷ ಮೊಹಮ್ಮದ್ ಜಿಯಾ ಉಲ್ ಹಕ್ ಸಮಯದಿಂದ ಆರಂಭವಾಗಿತ್ತು. ಇದು ಜಗತ್ತಿಗೆ ತಿಳಿಯಬೇಕು. ಅದರೊಂದಿಗೆ ಕಂದಹಾರ್ ವಿಮಾನ ಅಪಹರಣ, 26/11 ಮುಂಬೈ ದಾಳಿ, 2001 ಪಾರ್ಲಿಮೆಂಟ್ ದಾಳಿ, ಉರಿ ದಾಳಿ, ಪಠಾನ್ ಕೋಟ್ ದಾಳಿ, ರೇಸಿ ಮತ್ತು ಪಾಲ್ಗಾಂಮ್ ನಲ್ಲಿ ಪ್ರವಾಸಿಗರ ಹತ್ಯೆಗಳು, ಹೀಗೆ ಪಾಕಿಸ್ತಾನದ ಉಗ್ರಗಾಮಿ ಸಂಘಟನೆಗಳ ಮುಖವಾಡಗಳನ್ನು ಪ್ರಪಂಚದ ಮುಂದೆ ತೆರೆದಿಡುವ ಅವಶ್ಯಕತೆ ಇದೆ ಎಂದು ಓವೈಸಿ ಹೇಳಿದ್ದಾರೆ.

ಇನ್ನು ಪಾಕಿಸ್ತಾನ ತನ್ನನ್ನು ತಾನು ಇಸ್ಲಾಂ ರಾಷ್ಟ್ರ ಎಂದು ಬಿಂಬಿಸಲು ವ್ಯರ್ಥ ಪ್ರಯತ್ನ ಮಾಡುತ್ತಿದೆ ಎಂದು ಹೇಳಿದ ಓವೈಸಿ ಇದು ಶುದ್ಧ ಸೋಗಲಾಡಿತನ ಎಂದು ಹೇಳಿದ್ದಾರೆ. ನಾನು ಏಳು ನಿಯೋಗದಲ್ಲಿ ಯಾವ ನಿಯೋಗದ ಭಾಗವೆಂದಾಗಲಿ, ನಮ್ಮ ನಿಯೋಗದ ಮುಖ್ಯಸ್ಥರು ಯಾರು ಎಂದು ಯೋಚಿಸಲು ಹೋಗಿಲ್ಲ. ನಾವು ಪ್ರಪಂಚದ ಎದುರು ನಮ್ಮ ಕಥೆಯನ್ನು ಹೇಳಲೇಬೇಕಿದೆ. ಪಾಕಿಸ್ತಾನ ತನ್ನನ್ನು ತಾನು ಇಸ್ಲಾಮಿಕ್ ದೇಶ ಎಂದು ಬಿಂಬಿಸಿಕೊಳ್ಳುವ ಹತಾಶ ಪ್ರಯತ್ನ ಮಾಡುತ್ತಿದೆ. ಹಾಗೆ ನೋಡಿದರೆ ಭಾರತದಲ್ಲಿ ಸುಮಾರು 20 ಕೋಟಿ ಮುಸ್ಲಿಮರಿದ್ದಾರೆ. ಇದೆಲ್ಲವನ್ನು ನಾವು ಜಗತ್ತಿಗೆ ತಿಳಿಸಬೇಕಿದೆ ಎಂದು ಓವೈಸಿ ಹೇಳಿದ್ದಾರೆ.

  • Share On Facebook
  • Tweet It


- Advertisement -


Trending Now
ಬೆಂಗಳೂರಿನ ಹಲವೆಡೆ ಮಳೆಯಿಂದ ಮನೆಗಳಿಗೆ ನುಗ್ಗಿದ ನೀರು.. ಇದು ಹೊಸದಲ್ಲ - ಡಿಕೆಶಿ
Tulunadu News May 19, 2025
ಭಯೋತ್ಪಾದಕತೆಯ ವಿರುದ್ಧ ವಿದೇಶಕ್ಕೆ ತೆರಳುವ ಭಾರತದ ನಿಯೋಗದಲ್ಲಿ ಓವೈಸಿ! ಹೇಳಿದ್ದೇನು?
Tulunadu News May 19, 2025
Leave A Reply

  • Recent Posts

    • ಬೆಂಗಳೂರಿನ ಹಲವೆಡೆ ಮಳೆಯಿಂದ ಮನೆಗಳಿಗೆ ನುಗ್ಗಿದ ನೀರು.. ಇದು ಹೊಸದಲ್ಲ - ಡಿಕೆಶಿ
    • ಭಯೋತ್ಪಾದಕತೆಯ ವಿರುದ್ಧ ವಿದೇಶಕ್ಕೆ ತೆರಳುವ ಭಾರತದ ನಿಯೋಗದಲ್ಲಿ ಓವೈಸಿ! ಹೇಳಿದ್ದೇನು?
    • ಧರ್ಮಸ್ಥಳದ ಆಕಾಂಕ್ಷ ಆತ್ಮಹತ್ಯೆಯ ಬಗ್ಗೆ ಅನುಮಾನ ಎಂದ ಹೆತ್ತವರು!
    • RSS ಕಚೇರಿ ದಾಳಿಯ ಮಾಸ್ಟರ್ ಮೈಂಡ್ ಫಿನಿಶ್.. ಅಬು ಸೈಫುಲ್ಲಾ ಹತ್ಯೆ!
    • ನಂದಿನಿ ನದಿ ಮಾಲಿನ್ಯ ಮಾಡುವವರಿಗೆ ಕಾದಿದೆ ಶಿಕ್ಷೆ: ಉಳ್ಳಾಯ ದೈವ ಅಭಯ
    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
  • Popular Posts

    • 1
      ಬೆಂಗಳೂರಿನ ಹಲವೆಡೆ ಮಳೆಯಿಂದ ಮನೆಗಳಿಗೆ ನುಗ್ಗಿದ ನೀರು.. ಇದು ಹೊಸದಲ್ಲ - ಡಿಕೆಶಿ
    • 2
      ಭಯೋತ್ಪಾದಕತೆಯ ವಿರುದ್ಧ ವಿದೇಶಕ್ಕೆ ತೆರಳುವ ಭಾರತದ ನಿಯೋಗದಲ್ಲಿ ಓವೈಸಿ! ಹೇಳಿದ್ದೇನು?
    • 3
      ಧರ್ಮಸ್ಥಳದ ಆಕಾಂಕ್ಷ ಆತ್ಮಹತ್ಯೆಯ ಬಗ್ಗೆ ಅನುಮಾನ ಎಂದ ಹೆತ್ತವರು!
    • 4
      RSS ಕಚೇರಿ ದಾಳಿಯ ಮಾಸ್ಟರ್ ಮೈಂಡ್ ಫಿನಿಶ್.. ಅಬು ಸೈಫುಲ್ಲಾ ಹತ್ಯೆ!
    • 5
      ನಂದಿನಿ ನದಿ ಮಾಲಿನ್ಯ ಮಾಡುವವರಿಗೆ ಕಾದಿದೆ ಶಿಕ್ಷೆ: ಉಳ್ಳಾಯ ದೈವ ಅಭಯ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search